UN NETWORKS
ದೆಹಲಿ: ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಪಾಪ ಕೃತ್ಯಕ್ಕೆ 42 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಸಿಆರ್ಪಿಎಫ್ ಯೋಧರು ಚಲಿಸುತ್ತಿದ್ದ 70 ವಾಹನಗಳ ಮೇಲೆ ರಕ್ಕಸ ಉಗ್ರರು ಗುಂಡಿನ ಮಳೆಗೈದಿದ್ದಾರೆ.
ಶ್ರೀನಗರದ ಅವಂತಿಪುರ್-ಪುಲ್ವಾಮಾ ಮಾರ್ಗ ಮಧ್ಯೆ ಸುಧಾರಿತ ಸ್ಪೋಟಕ ಬಳಸಿ ದಾಳಿ ಮಾಡಲಾಗಿದೆ. ಉಗ್ರರ ದಾಳಿಗೆ ಹಲವು ವಾಹನಗಳು ಧ್ವಂಸಗೊಂಡಿದ್ದು, ಯೋಧರ ಒಂದು ವಾಹನ ಸಂಪೂರ್ಣ ಸುಟ್ಟುಕರಕಲಾಗಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಯನ್ನು ರವಾನಿಸಲಾಗಿದ್ದು, ಇಡೀ ಪ್ರದೇಶವನ್ನು ಈಗ ಸುತ್ತುವರಿಯಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದ ಬಡಗಾಂವ್ನಲ್ಲಿ ನಿನ್ನೆಯಷ್ಟೇ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು.ಪುರಿ ಸೆಕ್ಟರ್ ನಲ್ಲಿ ನಡೆಸಿದ ದಾಳಿಯ ಬಳಿಕ ಅತ್ಯಂತ ಭೀಕರ ದಾಳಿ ಇದಾಗಿದೆ.