UN NETWORKS
ಕೊಣಾಜೆ: ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಸ್ನೇಹ ಸಂಬಂಧಗಳು ಕೇವಲ ಡಿಜಿಟಲ್ ರೂಪಕ್ಕೆ ಸೀಮಿತವಾಗದೆ ನೈಜ ರೂಪದಲ್ಲಿ ಗಟ್ಟಿಯಾಗಲಿ ಎಂದು ಮಂಗಳೂರು ವಿಶ್ವವಿದ್ಯಾಲಯದ ಮೊದಲ ಬ್ಯಾಚ್ನ ವಿದ್ಯಾರ್ಥಿ ಪ್ರೊ. ಬಿ.ಎ. ವಿವೇಕ್ ರೈ ಹೇಳಿದರು.
ಮಾ ಸಂಘಟನೆಯ ಗೌರವಾಧ್ಯಕ್ಷ ಅನಂತಕೃಷ್ಣ ಮಾತನಾಡಿ, `ವಿಶ್ವವಿದ್ಯಾಲಯದ ಮೊದಲ ಬ್ಯಾಚ್ ಎಂದು ಹೇಳಿಕೊಳ್ಳುವುದೇ ಹೆಮ್ಮೆ ಎನಿಸುತ್ತದೆ. ಮಂಗಳೂರು ವಿಶ್ವವಿದ್ಯಾಲಯದ ಸ್ಥಾಪನೆಗೆ ನಾರಾಯಣ ಅಡಿಗ, ಎಸ್.ವಿ.ಪಿ. ಹಲವಾರು ಗಣ್ಯರ ಅವಿರತ ಶ್ರಮ ಕಾರಣವಾಗಿದೆ. ಅಂತಹ ಬಹುದೊಡ್ಡ ಕನಸಿನೊಂದಿಗೆ, ಹಲವರ ಬೆವರಹನಿಯಿಂದ ಹುಟ್ಟಿ ಬೆಳೆದ ಮಂಗಳಗಂಗೋತ್ರಿಯಲ್ಲಿ ಕಲಿತು ಗಳಿಸಿದ ಅನುಭವಗಳೇ ದೊಡ್ಡದು ಎಂದರು.ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಈಶ್ವರ ಪಿ, ಮಾ ಸಂಘಟನೆಯ ಕಾರ್ಯದರ್ಶಿ ಗಣೇಶ್ ಸಂಜೀವ, ಮಾ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವ, ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ.ಎಂ. ಖಾನ್ ಉಪಸ್ಥಿತರಿದ್ದರು.
ಮಾ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವ ಸ್ವಾಗತಿಸಿದರು. ಉಪಾಧ್ಯಕ್ಷೆ ಡಾ. ದೇವಿಪ್ರಭಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಕ್ರಿಕೆಟ್, ಲಗೋರಿ ಹಾಗೂ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮ ಪ್ರದರ್ಶನ ನಡೆಯಿತು.