UN NETWORKS
ಉಳ್ಳಾಲ: ಪಂಪ್ವೆಲ್ ಮತ್ತು ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಮಾಜಿ ಶಾಸಕ ಜೆ.ಆರ್ ಲೋಬೊ ಮತ್ತು ಸಚಿವ ಯು.ಟಿ.ಖಾದರ್ ಅವರಲ್ಲಿರುವ ಜಾತಿ ಪ್ರೇಮವೇ ಕಾರಣವಾಗಿದೆ. ತಮ್ಮ ಜಾತಿ ಬಾಂಧವರ ಕಟ್ಟಡಗಳನ್ನು ಉಳಿಸುವ ಉದ್ದೇಶದಿಂದ ಕಾಮಗಾರಿ ವಿಳಂಬವಾಗುವಂತೆ ಮಾಡಿ ಇದೀಗ ತನ್ನ ಮೇಲೆ ತೂಗುಗತ್ತಿ ಇಡಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಭರವಸೆಯ ಮಾತುಗಳನ್ನಾಡಿದರು.
ಜಿಲ್ಲೆಯಲ್ಲಿ ಕೇಂದ್ರ ಸರಕಾರ ಪ್ಲಾಸ್ಟಿಕ್ ಪಾರ್ಕ್ ನಿರ್ಮಿಸಲು ಅನುಮೋದನೆಯನ್ನು ನೀಡಿದೆ. ಇದರಿಂದ ಸಾವಿರಾರು ಮಂದಿಗೆ ಉದ್ಯೋಗದ ಅವಕಾಶ ಲಭ್ಯವಾಗಲಿದೆ. ಕೋಸ್ಟ್ ಗಾರ್ಡ್ ತರಬೇತು ಕಾಲೇಜು, ನಗರದ ರೈಲ್ವೇ ನಿಲ್ದಾಣವನ್ನು ಅಂತರಾಷ್ಟ್ರೀಯ ಮೇಲ್ದರ್ಜೆಗೆ ಏರಿಸುವ ಸಲುವಾಗಿ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಕುಳಾಯಿ ಪ್ರದೇಶದಲ್ಲಿ ಜಟ್ಟಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಕಳೆದ ಎರಡು ಅವಧಿಯಲ್ಲಿಯೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇಲ್ಲದಿರುವುದರಿಂದ ಶೇ.50 ರಷ್ಟು ಅಭಿವೃದ್ಧಿ ಕಾಮಗಾರಿಯನ್ನು ಮಾತ್ರ ನಡೆಸಲು ಸಾಧ್ಯವಾಗಿದೆ. ಶಾಸಕ ಕೆ. ಜಯರಾಮ ಶೆಟ್ಟಿ ಮಾತನಾಡಿ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ಶಾಸಕ ಯು.ಟಿ. ಖಾದರ್ ಅವರು ಹಾಗೂ ಕೆಲವೇ ಕೆಲವು ವ್ಯಕ್ತಿಗಳು ಪರಿಹಾರ ಸಿಗಲಿಲ್ಲ ಎಂಬ ಕಾರಣಕ್ಕೆ ಕನಿಷ್ಠ ನಾಲ್ಕು ವರ್ಷಗಳಷ್ಟು ವಿಳಂಬವಾಗಲು ಕಾರಣವಾಗಿದೆ. ಉಳ್ಳಾಲ ನಗರಸಭೆಗೆ ಸೇರಿದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಜನರ ಬಹುಬೇಡಿಕೆಯ ಅಬ್ಬಕ್ಕ ಭವನಕ್ಕೆ ಯಡ್ಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎರಡು ಕೋಟಿ ರೂ. ಅನುದಾನ ಮಂಜೂರು ಮಾಡಿದ್ದರೂ ಇದುವರೆಗೆ ಕಾಮಗಾರಿ ನಡೆಯದಿರುವುದು ದುರಂತ ಮತ್ತು ಬೇಸರದ ವಿಷಯ ಎಂದು ನುಡಿದರು.
ಬಿಜೆಪಿ ಮಂಗಳೂರು ಕ್ಷೇತ್ರ ಚುನಾವಣಾ ಉಸ್ತುವಾರಿ ಬೂಡಿಯಾರ್ ರಾಧಾಕೃಷ್ಣ ರೈ, ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ನಮಿತಾ ಶ್ಯಾಂ, ಕ್ಷೇತ್ರ ಮಾಜಿ ಅಧ್ಯಕ್ಷ ಚಂದ್ರಶೇಖರ ಉಚ್ಚಿಲ್, ರವಿಶಂಕರ್ ಸೋಮೇಶ್ವರ, ಹಿರಿಯ ಮುಖಂಡ ಸೀತಾರಾಮ ಬಂಗೇರ, ಪ್ರಶಾಂತ ಗಟ್ಟಿ ಕಾಪಿಕಾಡ್, ಮುನೀರ್ ಬಾವ, ರಾಜೀವಿ ಕೆಂಪುಮಣ್ಣು, ದೇವದಾಸ ಕೊಲ್ಯ, ರಾಜೇಶ್ ಉಚ್ಚಿಲ್, ಕೋಟೆಕಾರು ಶಕ್ತಿ ಕೇಂದ್ರದ ಅಧ್ಯಕ್ಷ ಅಜಂತ ಪಿಲಾರು ಉಪಸ್ಥಿತರಿದ್ದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್ ಸ್ವಾಗತಿಸಿದರು. ಗೋಪಾಲಕೃಷ್ಣ ಮೇಲಾಂಟ ಕಾರ್ಯಕ್ರಮ ನಿರೂಪಿಸಿದರು.
ನಂ 1 ಎಂದು ಎಲ್ಲಿಯೂ ಹೇಳಿಕೊಂಡಿಲ್ಲ !
ಅತಿ ಹೆಚ್ಚು ಅನುದಾನವನ್ನು ತಂದುಕೊಟ್ಟ ಸಂಸದರು , ಅವರು ನಂ.1 ಎಂದು ಎಲ್ಲಿಯೂ ನಳಿನ್ ಕಟೀಲ್ ಹೇಳಿಕೊಂಡು ಬಂದಿಲ್ಲ. ರಾಜ್ಯದ ಮಾಧ್ಯಮ, ರಾಷ್ಟ್ರದ ಮಾಧ್ಯಮ ಹಾಗೂ ಮೈಸೂರು ವಿ.ವಿ ನಡೆಸಿದ ಸರ್ವೇ ವರದಿಯ ಮೂಲಕ ಅವರೇ ನಂ.1 ಸ್ಥಾನ ಕೊಟ್ಟಿದ್ದಾರೆ. ಇದೀಗ ಮಾಜಿ ಸಚಿವ ರಮಾನಾಥ ರೈ ಅವರು ನಂ.1 ಪಟ್ಟವನ್ನು ಟೀಕಿಸುವ ಮೂಲಕ ಸರ್ವೇ ಮಾಡಿ ವರದಿ ನೀಡಿದವರನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಂಸದ ನಳಿನ್ ಕಟೀಲ್
10 ದಿನಗಳಲ್ಲಿ ಪ್ರತ್ಯುತ್ತರ
ಉರಿ ಹಾಗೂ ಮ್ಯಾನ್ಮಾರ್ ನಲ್ಲಿ ಸರ್ಜಿಕಲ್ ಸ್ಟ್ರ್ಐಕ್ ಮೂಲಕ ದಿಟ್ಟ ಉತ್ತರ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಹತ್ತು ದಿನಗಳಲ್ಲಿ ಪುಲ್ವಾಮ ಮಾರಣಹೋಮಕ್ಕೆ ಪ್ರತಿಯಾಗಿ ಪಾಕಿಸ್ತಾನಕ್ಕೆ ಪ್ರತ್ಯುತ್ತರವನ್ನು ತಕ್ಕ ಶಾಸ್ತಿ ಮೂಲಕ ನೀಡಲಿದ್ದಾರೆ. ಹುತಾತ್ಮರಾದ ಸೈನಿಕರನ್ನು ಎಂದಿಗೂ ವ್ಯರ್ಥವಾಗಲು ಸರಕಾರ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಸಂಸದ ನಳಿನ್ ಕಟೀಲ್