UN NETWORKS
ಉಳ್ಳಾಲ: ಗಡಿಯಲ್ಲಿ ನಿತ್ಯವೂ ಸೈನಿಕರು ಸಾವನ್ನಪ್ಪುವ ಮೂಲಕ ದೇಶದ ಅಭದ್ರತೆಯಲ್ಲಿದೆ ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಆರೋಪಿಸಿದರು.
ಉತ್ತರ ಭಾರತದಲ್ಲಿ ರೆಫ್ರಿಜರೇಟರ್ ನಲ್ಲಿ ಮಾಂಸ ಇಟ್ಟ ಆರೋಪದಿಂದ ಥಳಿತಕ್ಕೊಳಗಾದ ಗಂಭೀರತೆ ಕಾಣುವಾಗ ಅಲ್ಲಿ ಒಂದು ಕಿಲೋ ದನದ ಮಾಂಸ ಹಿಡಿದುಕೊಂಡು ಒಂದು ಕಿ. ಮೀ ನಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮೋದಿಯವರ ಆಡಳಿತ ವೈಫಲ್ಯ ಕಾರ್ಯಕರ್ತರು ವಿವರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆ.ಪಿ.ಸಿ.ಸಿಯಿಂದ ನೇಮಕಗೊಂಡ ಅಬ್ದುಲ್ ಮುನೀರ್ ಬೆಂಗಳೂರು ಮತ್ತು ಶಂಭು ಶೆಟ್ಟಿ ಯವರು ಮಾಹಿತಿ ನೀಡಿದರು.ಸಚಿವ ಯು.ಟಿ. ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ದ.ಕ. ಜಿಲ್ಲಾ ಚುನಾವಣಾ ಉಸ್ತುವಾರಿ ಧನಂಜಯ ಅಡ್ಪಂಗಾಯ, ಚುನಾವಣಾ ಉಸ್ತುವಾರಿ ಶಂಭು ಶೆಟ್ಟಿ, ಅಬ್ದುಲ್ ಮುನೀರ್, ಕೆಪಿಸಿಸಿ ಕಾರ್ಯದರ್ಶಿ ಮಮತಾ ಗಟ್ಟಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು ಹಾಗೂ ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ರಹೆಮಾನ್ ಕೋಡಿಜಾಲ್ ಸ್ವಾಗತಿಸಿದರು. ಉಪಾಧ್ಯಕ್ಷ ಮಹಮ್ಮದ್ ಮುಸ್ತಾಫ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಮಂಡ್ಯದ ವೀರಯೋಧ ಎಚ್.ಗುರು ಅವರಿಗೆ ಕಾಂಗ್ರೆಸ್ ಮಂಗಳೂರು ವಿಧಾನ ಸಭಾ ಕ್ಷೇತ್ರದ ವತಿಯಿಂದ ಎರಡು ಲಕ್ಷ ರೂ. ಕೊಡುವುದಾಗಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಘೋಷಿಸಿದರು.