Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕುರ್ನಾಡು

ಮಾ.27 ರಿಂದ ಎ.1ರವರೆಗೆ ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಸಹಸ್ರಕುಂಭಾಭಿಷೇಕ

UllalaVaniBy UllalaVaniFebruary 22, 2019No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕುರ್ನಾಡು : ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನ ಇದರ ಅಷ್ಟಬಂಧ ಸಹಸ್ರಕುಂಭಾಭಿಷೇಕ ಮಾ.27 ರಿಂದ ಎ.1 ರವರೆಗೆ ನಡೆಯಲಿದೆ ಎಂದು ಕುರ್ನಾಡು ಶ್ರೀ ಸೋಮನಾಥೇಶ್ವರ ಕ್ಷೇತ್ರ ಸಂಚಾಲಕ ಜಯರಾಮ ಶಾಂತ ಹೇಳಿದರು.

ಅವರು ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳ ವಿವರ ನೀಡಿದರು. ಮಾ.27 ರಂದು ವೈದಿಕ ಕಾರ್ಯಕ್ರಮಗಳಿಗೆ ದೇವಸ್ಥಾನದ ಮುಖ್ಯ ಸಲಹೆಗಾರ ರಘುರಾಮ ತಂತ್ರಿ ಚಾಲನೆ ನೀಡಲಿದ್ದಾರೆ. ಸಂಜೆ ಕುರ್ನಾಡುಗುತ್ತು ಎಚ್.ರಾಮಯ್ಯ ನಾಯ್ಕ್ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ರಾತ್ರಿ ಶ್ರೀ ದತ್ತಾತ್ರೇಯ ಯಕ್ಷಗಾನ ಮತ್ತು ಭಜನಾ ಮಂಡಳಿ ಕುರ್ನಾಡು ಇವರಿಂದ ರತಿ ಕಲ್ಯಾಣ ಯಕ್ಷಗಾನ ಬಯಲಾಟ ಮಾ.28 ರಂದು ಗಣಪತಿ ಹೋಮ, ಅಂಕುರ ಪೂಜೆ, ಬಿಂಬಶುದ್ಧಿ ಕಲಶಪೂಜೆ, ಪ್ರಾಯಶ್ಚಿತ್ತ ಹೋಮ, ಪ್ರೋಕ್ತ ಹೋಮ, ಹೋಮಕಲಶಾಭಿಷೇಕ ರಾತ್ರಿ ಅಂಕುರ ಮತ್ತು ದುರ್ಗಾನಮಸ್ಕಾರ ಪೂಜೆ ನಡೆಯಲಿದೆ. ಸಂಜೆ ಸಾಂಸ್ಕೃತಿಕ ವೈಭವ, ಭಕ್ತಿಗೀತೆ ರಸಮಂಜರಿ, ಕದಂಬ ಕೌಶಿಕೆ ಯಕ್ಷಗಾನ ಬಯಲಾಟ ನಡೆಯಲಿದೆ.

ಮಾ.29 ರಂದು ವೈದಿಕ ಕಾರ್ಯಕ್ರಮ ಸಂಜೆ ಬಳಿಕ ಸಾಂಸ್ಕೃತಿಕ ವೈಭವ, ಮಾತೃಸಂಗಮ ಧಾರ್ಮಿಕ ಸಭೆಯಲ್ಲಿ ಜಿ.ಪಂ ಸದಸ್ಯೆ ಮಮತಾ ಗಟ್ಟಿ, ಬನ್ನಂಪಳ್ಳಿ ಪ್ರತಿಭಾ ಬಾಲಕೃಷ್ಣ ನಾಯ್ಕ್, ನ್ಯಾಯವಾದಿ ಸಹನಾ ಕುಂದರ್ ಸೂಡ, ಎನ್‍ಐಟಿಕೆ ಪ್ರೊ. ಡಾ| ಸುಪ್ರಭಾ ಕೆ.ಆರ್, ಎಂ ಆರ್ ಪಿಎಲ್ ನ ಮಾನವ ಸಂಪನ್ಮೂಲ ಅಧಿಕಾರಿ ಲಕ್ಷ್ಮೀ ಎಂ.ಕುಮಾರನ್, ಆಸರೆ ಟ್ರಸ್ಟಿನ ಆಶಾಜ್ಯೋತಿ ರೈ ಮುಂತಾದವರು ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುಣ್ಯಭೂಮಿ ಭಾರತ ನುಡಿ,ನಾದ, ನಾಟ್ಯ, ಮಸ್ಕಿರಿ ಕುಡ್ಲ ಇವರಿಂದ ತೆಲಿಕೆ ಬಂಜಿ ನಿಲಿಕೆ ನಡೆಯಲಿದೆ. ಮಾ.30 ರಂದು ವೈದಿಕ ಕಾರ್ಯಕ್ರಮಗಳು ಸಂಜೆ ಸ್ಥಳೀಯ ಪ್ರತಿಭೆಗಳ ಸಾಂಸ್ಕೃತಿಕ ವೈಭವ, ಧಾರ್ಮಿಕ ಸಭೆಯಲ್ಲಿ ಎ.ಸಿ ಭಂಡಾರಿ, ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ದೇವು ಮೂಲ್ಯಣ್ಣ, ಬ್ರಹ್ಮಶ್ರೀ ನೀಲೇಶ್ವರ ಉಚಿಲತ್ತಾಯ ಪದ್ಮನಾಭ ತಂತ್ರಿಗಳಿಂದ ಧಾರ್ಮಿಕ ಉಪನ್ಯಾಸ, ಡಾ.ಎಚ್. ಬಾಲಕೃಷ್ಣ ನಾಯ್ಕ್ ಕುರ್ನಾಡುಗುತ್ತು, ವೆಂಕಪ್ಪ ಕಾಜವ ಮಿತ್ತಕೋಡಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು ಮುಂತಾದವರು ಭಾಗವಹಿಸಲಿದ್ದಾರೆ. ಮಾ.31 ರಂದು ವೈದಿಕ ಕಾರ್ಯಕ್ರಮಗಳು ಬಳಿಕ ಶಿವಭಕ್ತ ಮಾರ್ಕಾಂಡೇಯ ಹರಿಕಥೆ, ಮಧ್ಯಾಹ್ನ ಪಟ್ಲ ಸತೀಶ್ ಶೆಟ್ಟಿ ಮತ್ತು ಬಳಗದಿಂದ ಯಕ್ಷ-ನಾಟ್ಯ-ವೈಭವ, ನಡೆಯಲಿದೆ. ಧಾರ್ಮಿಕ ಸಭೆಯಲ್ಲಿ ಮುಂಬೈ ಕಸ್ಟಂ ನ ಅಸಿಸ್ಟೆಂಟ್ ಕಮೀಷನರ್ ರೋಹಿತ್ ಹೆಗ್ಡೆ ಎರ್ಮಾಳು, ಸೋಮೇಶ್ವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ, ಪತ್ರಕರ್ತ ಶ್ರೀಕಾಂತ ಶೆಟ್ಟಿ ಕಾರ್ಕಳ, ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಬಂಟರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಮೊದಲಾದವರು ಭಾಗವಹಿಸಲಿದ್ದಾರೆ. ಸಂಜೆ ಪದ್ಮಶ್ರೀ ಡಾ. ಕದ್ರಿ ಗೋಪಲನಾಥ್ ಮತ್ತು ಸುರಮಣಿ ಪಂಡಿತ್ ಪ್ರವೀಣ್ ಗೋಡ್ಖಂಡಿ ಇವರಿಂದ ಸ್ಯಾಕ್ಸೋಫೋನ್ ಮತ್ತು ಬಾನ್ಸುರಿ ಜುಗಲ್ ಬಂಧಿ ನಡೆಯಲಿದೆ. ಎ.1 ರಂದು ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಸಂಜೆ ಶ್ರೀಭೂತ ಬಲಿ, ನೃತ್ಯ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಳಲು ಸಂಗೀತ ವಿದ್ಯಾಲಯ ಇರಾ ಮುಡಿಪುವಿನ ವಿದ್ಯಾರ್ಥಿಗಳಿಂದ ನಾದತರಂಗ, ಭೀಷ್ಮ ವಿಜಯ ಯಕ್ಷಗಾನ ತಾಳಮದ್ದಳೆಯಲ್ಲಿ ಭಾಗವತರಾಗಿ ಸತೀಶ್ ಶೆಟ್ಟಿ ಪಟ್ಲ, ಗಿರೀಶ್ ರೈ ಕಕ್ಕೆಪದವು, ಡಾ ಪ್ರಖ್ಯಾತ್ ಶೆಟ್ಟಿ ಅಳಿಕೆ ಭಾಗವಹಿಸಲಿದ್ದಾರೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವ, ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವಿಪ್ರಸಾದ್ ಶೆಟ್ಟಿ ಕಲ್ಲಾಡಿ, ಕದ್ರಿ ನವನೀತ ಶೆಟ್ಟಿ ಮುಂತಾದವರು ಭಾಗವಹಿಸಲಿದ್ದಾರೆ.

ಕ್ಷೇತ್ರದ ಆಡಳಿತ ಮೊಕ್ತೇಸರ, ಗೌರವ ಸಲಹೆಗಾರ ಸುದರ್ಶನ ಶೆಟ್ಟಿ, ಜೀರ್ಣೋದ್ಧರ ಸಮಿತಿ ಗೌರವಾಧ್ಯಕ್ಷ ವೆಂಕಪ್ಪ ಕಾಜವ, ತಂತ್ರಿಗಳಾದ ರಘುರಾಮ ತಂತ್ರಿ, ಪ್ರಧಾನ ಅರ್ಚಕ ಹರಿ ಭಟ್, ಜಿ.ಸಮಿತಿ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ರೈ ಬೆಳ್ಳಿಪಾಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಿವಶಂಕರ ಭಟ್ ಕಾಡಿಮಾರು, ಕಾರ್ಯಾಧ್ಯಕ್ಷ ರಾಜೇಶ್ ಶೆಟ್ಟಿ ಫಜೀರುಗುತ್ತು, ಪ್ರಧಾನ ಕಾರ್ದರ್ಶಿ ಕೆ.ಆರ್.ಗಟ್ಟಿ ಕೊರಂತೋಡಿ, ಮಹಿಳಾ ಸಮಿತಿ ಅಧ್ಯಕ್ಷೆ ಡಾ.ಸುರೇಖಾ ಅಮರನಾಥ ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಗಣೇಶ ನಾಯ್ಕ ಕುರ್ನಾಡುಗುತ್ತು, ಜೀರ್ಣೋದ್ಧರ ಸಮಿತಿ ಗೌರವಾಧ್ಯಕ್ಷ ವೆಂಕಪ್ಪ ಕಾಜವ, ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ಪ್ರದೀಪ ಆಳ್ವ ಅಜೆಕಳಗುತ್ತು , ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ನರಸಿಂಹ ಹೆಗ್ಡೆ ಉಪಸ್ಥಿತರಿದ್ದರು.

ಕ್ಷೇತ್ರ ಇತಿಹಾಸ: ಮಾ.28 1994 ರಲ್ಲಿ ದಿ| ಬ್ರಹ್ಮಶ್ರೀ ನೀಲೇಶ್ವರ ತಂತ್ರಿ ಹಾಗೂ ಆಡಳಿತ ಮೊಕ್ತೇಸರ ದಿ| ರಾಮಯ್ಯ ನಾಯ್ಕ್ ರವರ ನೇತೃತ್ವದಲ್ಲಿ ಕ್ಷೇತ್ರದ ಬ್ರಹ್ಮಕಲಶೋತ್ಸವ ನಡೆದಿತ್ತು. ದೇವಸ್ಥಾನದ ಶಿಲಾಶಾಸನ ಮತ್ತು ಪುತ್ತಿಗೆ ಸೋಮನಾಥೇಶ್ವರ ದಾಖಲೆಗಳ ಪ್ರಕಾರ ಕ್ಷೇತ್ರಕ್ಕೆ 1000 ವರ್ಷಗಳ ಇತಿಹಾಸವಿದೆ. ಕುಂಡಲೀ ಮುನಿಗಳು ಕುಂಡಲಿ ಪರ್ವತದಲ್ಲಿ ದೇವಸ್ಥಾನ ಪ್ರತಿಷ್ಠಾಪಿಸಿದರು. ಕಾಲಾನುಸಾರ ಕುಂಡಲೀ ನಾಡಾಗಿ ಕ್ರಮೇಣ ಕುರ್ನಾಡು ಹೆಸರು ಊರಿಗೆ ಬಂದಿದೆ. ಇತಿಹಾಸದ ಪ್ರಕಾರ ಚೌಟರಸರ ಕಾಲದಲ್ಲಿ ಸೋಮಕ್ಕ ಎಂಬ ಮಹಿಳೆ ಸೊಪ್ಪು ಕಡಿಯುವಾಗ ಕಲ್ಲಿಗೆ ಕತ್ತಿ ತಾಗಿದಾಗ ಕಲ್ಲಿನಿಂದ ರಕ್ತ ಸುರಿದಿದೆ. ಇಲ್ಲಿನ ಶಕ್ತಿ ಮನಗಂಡು ಚೌಟರಸ ತಿರುಮಲರಾಯ ಅದೇ ಕಲ್ಲನ್ನು ಶಿಲ್ಪಿಗಳಿಂದ ಕೆತ್ತಿಸಿ ಶಿವನಮೂರ್ತಿ ಇಲ್ಲಿ ಪ್ರತಿಷ್ಠಾಪಿಸಲಾಗಿದೆ ಎಂಬ ನಂಬಿಕೆ ಇಲ್ಲಿನದ್ದಾಗಿದೆ. ದೇವರ ರಕ್ಷಕ ಗ್ರಹದೈವದ ಸನ್ನಿಧಾನ ಕ್ಷೇತ್ರದ ಈಶಾನ್ಯದಲ್ಲಿರುವುದರಿಂದ ಮೂರ್ಛೆ ರೋಗ ಅಥವಾ ಫಿಟ್ಸ್ ರೋಗ ಗುಣಮುಖವಾಗಲು ಪ್ರಾರ್ಥನೆ ನಡೆಸಿದರೆ ರೋಗ ಗುಣವಾಗಿರುವ ಉದಾಹರಣೆಗಳಿವೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 18ರಿಂದ ನಾಲ್ಕು ದಿನಗಳ ಯೋಗ ಶಿಬಿರ

June 18, 2026

ನಮ್ಮ ಎಲ್ಲಾ ಕಷ್ಟ ಮತ್ತು ಸುಖಗಳಿಗೆ ನಮ್ಮ ಮನಸ್ಸೇ ಕಾರಣ – ಡಾ. ಸರ್ಫ್ರಾಜ್ ಜೆ ಹಾಸಿಮ್

June 17, 2026

ಉಳ್ಳಾಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

June 16, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಎಚ್ಚರಿಸಿದ್ದ ಉಳ್ಳಾಲವಾಣಿ ;ಈಗ ವರದಿ ಸತ್ಯವಾಗಿದೆಯೇ?

By UllalaVaniJune 20, 20260

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಲವು ಪ್ರದೇಶಗಳಿಗೆ ಪೂರೈಸುತ್ತಿರುವ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆತಂಕವನ್ನು ಈ ಹಿಂದೆ…

ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ವತಿಯಿಂದ ಸಸಿ ವಿತರಣಾ ಕಾರ್ಯಕ್ರಮ

June 20, 2026

ಸಂತ ಅಲೋಶಿಯಸ್ ಉರ್ವಾದಲ್ಲಿ ಶಾಲಾ ಪಾಲಕರ ದಿನಾಚರಣೆ

June 20, 2026

ರಕ್ಷಕರು ಮನೆಯಲ್ಲಿ ಶಿಕ್ಷಕರಾಗಿರಬೇಕು- ಮೊಹಮ್ಮದ್ ಮನ್ಸೂರ್

June 19, 2026
1 2 3 … 1,976 Next
Automatic YouTube Gallery

ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ

ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
Now Playing
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ...
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
Now Playing
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ...
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಗಳಿಸಲಿ: ಅಬ್ದುಲ್ ಖಾದರ್ ಕೋಡಿಜಾಲ್


📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version