UN NETWORKS
ದೇರಳಕಟ್ಟೆ: ಜಮಾಅತೆ ಇಸ್ಲಾಮಿ ಹಿಂದ್ ದೇರಳಕಟ್ಟೆ ವಲಯ ಇದರ ಆಶ್ರಯದಲ್ಲಿ, ಸನ್ಮಾರ್ಗ ಪತ್ರಿಕೆ ನಡೆಸಿದ ಸೀರತ್ ಕ್ವಿಜ್ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದ ಅಧ್ಯಾಪಕ ಹಿದಾಯತುಲ್ಲಾ ಅವರಿಗೆ ಸನ್ಮಾನ ಕಾರ್ಯಕ್ರಮ ದೇರಳಕಟ್ಟೆ ಚಿಂತನಾ ಗ್ರಂಥಾಲಯದಲ್ಲಿ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸನ್ಮಾರ್ಗ ವಾರ ಪತ್ರಿಕೆ ಸಂಪಾದಕ ಅಬ್ದುಲ್ ಖಾದರ್ ಕುಕ್ಕಿಲ, ಧಾರ್ಮಿಕ ವಿಚಾರಧಾರೆಗೆ ಒತ್ತು ನೀಡಿ ಓದುವ ವರ್ಗವನ್ನು ಬೆಳೆಸುವ ಪ್ರಯತ್ನ ಪತ್ರಿಕೆಯಿಂದ ನಿರಂತರ ಆಗುತ್ತಿದೆ. ಇದಕ್ಕೆ ಸ್ಪಂದಿಸಿ, ಕಠಿಣ ಸವಾಲಿಗೆ ಉತ್ತರಿಸಿ ಕ್ವಿಜ್ನಲ್ಲಿ ಗೆದ್ದ ಹಿದಾಯತುಲ್ಲ ಅವರಿಗೆ ಅಭಿನಂದನೆ ಸಲ್ಲಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ, ಪ್ರೋತ್ಸಾಹ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿದಾಯತುಲ್ಲ ಅವರು ತಾನು ಪ್ರತಿ ಸ್ಪರ್ಧೆಯಲ್ಲಿ ಭಾಗವಹಿಸುತ್ತೇನೆ. ಕೆಲವೊಂದು ಸ್ಪರ್ಧೆಯಲ್ಲಿ ಬಹುಮಾನ ಸಿಕ್ಕಿದೆ. ಈ ಬಾರಿ ಮೊದಲ ಬಹುಮಾನ ಸಿಕ್ಕಿದ ಕಾರಣ ಸಂತೋಷವಾಗಿದೆ ಎಂದು, ಸನ್ಮಾನ ಮಾಡಿದ ಜಮಾಅತೆ ಇಸ್ಲಾಮಿ ಹಿಂದ್ ಸದಸ್ಯಯರಿಗೆ ವಂದನೆ ಸಲ್ಲಿಸಿದರು. ಒಳ್ಳೆಯ ಉದ್ದೇಶದಿಂದ ನಡೆಸಿದ ಸನ್ಮಾರ್ಗ ವಾರ ಪತ್ರಿಕೆಯ ಕ್ವಿಜ್ ಕಾರ್ಯಕ್ರಮ, ಇದರಲ್ಲಿ ಗೆದ್ದ ತಮ್ಮ ಪರಿಸರದ ಹಿದಾಯತುಲ್ಲಾರಿಗೆ ಅಭಿನಂದನೆ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಹಾಜಿ ಅಬೂಬಕರ್ ಶುಭ ಹಾರೈಸಿದರು. ಮೆಹರೂಫ್ ದೇರಳಕಟ್ಟೆ ಕಿರಾಅತ್ ಪಠಿಸಿದರು. ಎಸ್ಐಒ ಜಿಲ್ಲಾಧ್ಯಕ್ಷ ನಿಯಾಝ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಘಟಕದ ಅಧ್ಯಕ್ಷ ಅಬ್ದುಲ್ ಕರೀಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಘಟಕದ ಉಪಾಧ್ಯಕ್ಷ ಅಬ್ದುಲ್ ರಹೀಂ ದೇರಳಕಟ್ಟೆ, ದೇರಳಕಟ್ಟೆ ವಲಯ ಸಂಚಾಲಕ ಡಾ ಅಬೂಸಾಲಿಹ್ ಮೊದಲಾದ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.