UN NETWORKS
ಉಳ್ಳಾಲ : ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವದ ಇತಿಹಾಸದಲ್ಲಿಭಿನ್ನ ಕಾರ್ಯಕ್ರಮಗಳು ನಡೆಯುತ್ತಿದ್ದು ಇದೇ ಮೊದಲ ಬಾರಿಗೆ ಅಬ್ಬಕ್ಕಳ ಜೀವನಚರಿತ್ರೆಯನ್ನು ಚಿತ್ರದ ಮೂಲಕ ವ್ಯಾಖ್ಯಾನಿಸುವ ದಾಖಲಾರ್ಹ ಕಾರ್ಯ ಚಿತ್ರಕಲಾ ಶಿಕ್ಷಕರಿಂದಾಗಿದೆ. ಅಬ್ಬಕ್ಕಳ ಜೀವನವನ್ನು ಚಿತ್ರಕಲೆಯ ಮೂಲಕ ವ್ಯಾಖ್ಯಾನಿಸಲು ಹೊರಟಿರುವ ಕಾರ್ಯ ಶ್ಲಾಘನೀಯವಾಗಿದ್ದು ಚಿತ್ರಕಲಾ ಶಿಕ್ಷಕರು ಈ ಕಾರ್ಯಗಾರವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್. ಸೆಲ್ವಮಣಿ ಹೇಳಿದರು.
ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಪ್ರಮೀಳಾ, ಉಳ್ಳಾಲ ನಗರಸಭೆಯ ಪೌರಾಯುಕ್ತೆ ವಾಣಿ ವಿ. ಆಳ್ವ, ಹಿರಿಯ ವಾರ್ತಾಧಿಕಾರಿ ರೋಹಿಣಿ, ನಗರಸಭೆಯ ಸ್ಥಳೀಯ ಕೌನ್ಸಿಲರ್ ಮಮತಾ ರಾಘವ ಹಾಗೂ ಮೊಗವೀರ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವೇದಾವತಿ ಕೆ. ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ 30ಜನ ಚಿತ್ರಕಲಾ ಶಿಕ್ಷಕರು ಪಾಲ್ಗೊಂಡಿದ್ದು ಅಬ್ಬಕ್ಕನ ಜೀವನ ಕುರಿತಾದ ಚಿತ್ರಗಳ ರಚನೆಯಲ್ಲಿ ತೊಡಗಿಸಿಕೊಂಡರು.
ಚಿತ್ರಕಲಾ ಕಾರ್ಯಗಾರ ಮೂರು ದಿನಗಳ ಕಾಲ ನಡೆಯಲಿದೆ.