UN NETWORKS
ಬೋಳಿಯಾರ್ : ಜನರಿಗೆ ಒಳ್ಳೆಯ ಕೆಲಸ ಮಾಡಿದ ವ್ಯಕ್ತಿಯನ್ನು ಎಲ್ಲರೂ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಈಗ ವೃದ್ಧರಿಂದ ಮೊದಲ್ಗೊಂಡು ಬಾಲರವರೆಗೆ ಮೋದಿ ಎಂಬ ಹೆಸರು ಎಲ್ಲರ ನಾಲಗೆಯ ತುದಿಯಲ್ಲಿದ್ದು ಅವರೆಲ್ಲರಿಗೂ ಮೋದಿ ಅವರೇ ಮತ್ತೆ ಪ್ರಧಾನಿ ಆಗಬೇಕು ಎಂಬ ಬಯಕೆ ಇದೆ. ಜನಪ್ರಿಯ ಕಾರ್ಯಕ್ರಮಗಳು ಹಾಗೂ ಭಾರತದ ನೈಜ ಸಾಮರ್ಥ್ಯವನ್ನು ವಿಶ್ವಮಟ್ಟದಲ್ಲಿ ತೋರಿಸಿದ ಪರಿ ಮೋದಿ ಅವರು ಪ್ರಧಾನಿ ಆಗಿ ಮತ್ತೆ ಆಯ್ಕೆಯಾಗುವುದರಲ್ಲಿ ಸ್ವಲ್ಪವೂ ಸಂಶಯ ಬೇಡ ಎಂದು ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಹೇಳಿದರು.
ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಕೇಮದ್ರ ಸರಕಾರ ಮೀನುಗಾರಿಕೆ ಸಚಿವಾಲಯವನ್ನು ಆರಂಭಿಸುವ ಮೂಲಕ ಮೀನುಗಾರರ ಕಷ್ಟಕ್ಕೆ ಸ್ಪಂದಿಸಲಾಗಿದೆ. ಕಿಸಾನ್ ಸಮ್ಮಾನ್ ಕಾರ್ಯಕ್ರಮದಡಿಯಲ್ಲಿ ರೈತರ ಖಾತೆಗೆ ಹಣ ಸಂದಾಯ ಮಾಡುವ ಮೂಲಕ ರೈತರ ಬದುಕನ್ನು ಹಸನು ಮಾಡುವ ಪ್ರಯತ್ನ ನಡೆದಿದೆ. ವಾಜಪೇಯಿ ಆಡಳಿತದ ಬಳಿಕ ಸಿಲಿಂಡರ್ ಯಥೇಚ್ಛವಾಗಿ ಸಿಕ್ಕಿದ್ದು ಮೋದಿ ಅವರ ಆಡಳಿತದಲ್ಲಿ. ಆನ್ಲೈನ್ ಬುಕ್ಕಿಂಗ್ ಮೂಲಕ ಸಿಲಿಂಡರ್ ವಿತರಣೆ ಆಗುತ್ತಿದೆ. ಆಯುಷ್ಮಾನ್ ಯೋಜನೆ ಮೂಲಕ ಬಿಪಿಎಲ್, ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಸದಸ್ಯರ ಕಣ್ಣೀರು ಒರೆಸುವ ಕೆಲಸ ಮೋದಿ ಮಾಡುತ್ತಿದ್ದು ಮೋದಿ ಅವರ ಯೋಜನೆ ಮನೆ ಮನೆಗೆ ತಲುಪಿಸುವ ಕಾರ್ಯ ಕಾರ್ಯಕರ್ತರಿಂದ ನಡೆಯಬೇಕು ಎಂದು ಹೇಳಿದರು.ಪುದು ಜಿಲ್ಲಾ ಪಂಚಾಯಿತಿ ಕ್ಷೇತ್ರ ಸದಸ್ಯ ರವೀಂದ್ರ ಕಂಬಳಿ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ ಉಪಸ್ಥಿತರಿದ್ದರು. ಬಿಜೆಪಿ ಮುಖಂಡ ಟಿ.ಜಿ. ರಾಜಾರಾಮ ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಅವರ ಸಂವಾದ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು.