UN NETWORKS
ಉಳ್ಳಾಲ: ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿಉಳ್ಳಾಲದಲ್ಲಿ ನಡೆಯುತ್ತಿರುವ ವೀರರಾಣಿ ಅಬ್ಬಕ್ಕ ಉತ್ಸವ-2019ಕ್ಕೆ ಜನಪದ ದಿಬ್ಬಣಕ್ಕೆ ಉಳ್ಳಾಲ ಭಾರತ್ ಪ್ರೌಢಶಾಲಾ ವಠಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ದಿಬ್ಬಣದಲ್ಲಿ ಒಟ್ಟು 13 ತಂಡಗಳು ಭಾಗವಹಿಸಿದ್ದವು.
ಇದೇ ಮೊದಲ ಬಾರಿಗೆ ಮೊಗವೀರ ಸಮುದಾಯ ಬಾಂಧವರು ಅಬ್ಬಕ್ಕನ ಸೇನಾಧಿಪತಿ ಚೆನ್ನಮರಕಲನ ವೇಷ ಧರಿಸಿ ವ್ಯಾಘ್ರಚಾಮುಂಡೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ಅಬ್ಬಕ್ಕ ಸರ್ಕಲ್ ಮೂಲಕ ಬೀಚ್ ನತ್ತ ಸಾಗುವ ಮೂಲಕ ಮೆರವಣಿಗೆಯ ಕಳೆ ಹೆಚ್ಚಸಿದರು.