UN NETWORKS
ರಥಬೀದಿ : ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ದ.ಕ ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಯ್ದ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ” ತೆಲಿಕೆ 2019 ” ಎಂಬ ಹಾಸ್ಯ ಪ್ರಹಸನ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರಥಮ ದರ್ಜೆ ಕಾಲೇಜು ತಂಡ `ತೆಲಿಕೆ 2019′ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಕಲಾವಿದರಾದ ರಂಜನ್, ಸಂಪತ್, ಸಪ್ತಾ ಪಾವೂರು ಮತ್ತು ಪ್ರಕಾಶ್ ತೂಮಿನಾಡು, ಸಂಘದ ಸಂಯೋಜಕ ಪ್ರೊ. ಶೇಷಪ್ಪ ಕೆ, ಸಂಘದ ಪ್ರಧಾನ ಕಾರ್ಯದರ್ಶಿ ಧೀರಜ್ ಕುಮಾರ್, ತೆಲಿಕೆ- 2019 ಸಂಚಾಲಕ ಅಭಿಲಾಷ್ ಬಜ್ಪೆ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿಗಳಾದ ಲಾವಣ್ಯ ಹಾಗೂ ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ನಿಖಿಲ್ ಕೆ.ಸಿ. ವಂದಿಸಿದರು. ಕಾರ್ಯಕ್ರಮದಲ್ಲಿ ಅರುಣ್ಚಂದ್ರ ಬಿ.ಸಿ. ರೋಡ್, ಉಷಾ ದೇವರಾಜ್ ಹಾಗೂ ರಕ್ಷಣ್ ಮಾಡೂರು ತೀರ್ಪುಗಾರರಾಗಿ ಸಹಕರಿಸಿದರು.