UN NETWORKS
ಕೊಣಾಜೆ: ನಮ್ಮಲ್ಲಿ ಕೌಶಲ್ಯವನ್ನು ಬೆಳೆಸುವ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಮುನ್ನಡೆದರೆ ಭವಿಷ್ಯದಲ್ಲಿ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಅಬ್ದುಲ್ ಶರೀಫ್ ಅವರು ಅಭಿಪ್ರಾಯ ಪಟ್ಟರು.
ಅವರು ಮಂಗಳವಾರ ಕೊಣಾಜೆ ಸಮೀಪದ ನಡುಪದವಿನ ಪಿ.ಎ.ಪಾಲಿಟೆಕ್ನಿಕ್ ಕಾಲೇಜಿನ ವಾರ್ಷಿಕೋತ್ಸವ `ಎಕ್ಸ್ ಫರೇಂಝಾ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಿ.ಎ.ಕಾಲೇಜು ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಲತಾ ಕೃಷ್ಣನ್, ಪ್ರೊ.ಝೊಹರಾ ಅಬ್ಬಾಸ್ ಮೊದಲಾದವರು ಉಪಸ್ಥಿತರಿದ್ದರು.ಪಿ.ಎ.ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾದ ಪ್ರೊ.ಕೆ.ಪಿ.ಸೂಫಿ ವಾರ್ಷಿಕ ವರದಿ ವಾಚಿಸಿದರು. ಸಂಯೋಜಕ ಆಲಿ ಅಶ್ರಫ್ ಸ್ವಾಗತಿಸಿ, ಉಪಪ್ರಾಂಶುಪಾಲ ಪ್ರೊ.ಇಸ್ಮಾಯಿಲ್ ಖಾನ್ ವಂದಿಸಿದರು. ಅಜಿತ್ ಕುಮಾರ್ ವಾಸು ಕಾರ್ಯಕ್ರಮ ನಿರೂಪಿಸಿದರು.