UN NETWORKS
ಕಣಚೂರು : ಕ್ಷಯರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳ ಸಹಿತ 20 ಐಸಿಟಿಸಿ ಸೆಂಟರುಗಳು ಕಾರ್ಯಾಚರಿಸುತ್ತಿವೆ ಎಂದು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಬದ್ರುದ್ದೀನ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಯು.ಕಣಚೂರು ಮೋನು ಮಾತನಾಡಿ ` ಕ್ಲಪ್ತ ಸಮಯದಲ್ಲಿ ಕ್ಷಯರೋಗಸ್ಥರಿಗೆ ಚಿಕಿತ್ಸೆಯನ್ನು ಒದಗಿಸುವ ಕಾರ್ಯ ಜಿಲ್ಲಾ ಆರೋಗ್ಯ ಕೇಂದ್ರಗಳಿಂದ ಆಗುತ್ತಿದೆ. ಸಮಾಜದಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವಲ್ಲಿ ವಿದ್ಯಾರ್ಥಿಗಳು ಶ್ರಮಿಸಬೇಕು. ಸಮಾಜದಲ್ಲಿ ಕ್ಷಯರೋಗ ನಿಯಂತ್ರಣ ಜಾಗೃತಿ ಮೂಡಿಸಿದಾಗ ನಿರ್ಮೂಲನೆ ಸಾಧ್ಯ ಎಂದರು.
ಈ ಸಂದರ್ಭ ಕಣಚೂರು ವೈದ್ಯಕೀಯ ಕಾಲೇಜಿನ ಡೀನ್ ಡಾ. ಹೆಚ್. ಯಸ್ ವಿರೂಪಾಕ್ಷ, ಕಣಚೂರು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ದೇವಿಪ್ರಸಾದ್ ಶೆಟ್ಟಿ , ಆಸ್ಪತ್ರೆ ಆಡಳಿತಾಧಿಕಾರಿ ಡಾ. ರೋಹನ್ ಮೋನಿಸ್ , ಆಸ್ಪತ್ರೆ ಸಮುದಾಯ ವಿಭಾಗ ಮುಖ್ಯಸ್ಥ ಡಾ. ಕರ್ನಲ್ ಕಿರಣ್ ಕೆ.ಜಿ, ಶ್ವಾಸಕೋಶ ವಿಭಾಗ ಮುಖ್ಯಸ್ಥ ಡಾ. ಕೃಷ್ಣ ಪ್ರಸಾದ್ ,ಮಕ್ಕಳ ವಿಭಾಗ ಮುಖ್ಯಸ್ಥ ಡಾ. ನೂರುಲ್ಲಾ ಉಪಸ್ಥಿತರಿದ್ದರು.ಸಮುದಾಯ ವಿಭಾಗದ ಪ್ರಾಧ್ಯಾಪಕ ಡಾ. ಸತೀಶ್ ಮೋರೆ ಸ್ವಾಗತಿಸಿದರು. ನಾಗರಾಜ್ ನಿರೂಪಿಸಿದರು. ಡಾ. ಫಿಲಿಪ್ಸ್ ವಂದಿಸಿದರು.