UN NETWORKS
ನರಿಂಗಾನ : ತಾಯಿ ಮರಣದ ಅತೀವ ದು:ಖದ ನಡುವೆಯೂ ವಿದ್ಯಾರ್ಥಿ ನಿಯೋರ್ವಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವ ಘಟನೆ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಸರಕಾರಿ ಪ್ರೌಢಶಾಲೆ ಮೊಂಟೆಪದವಿನಲ್ಲಿ ನಡೆದಿದೆ.
ಶೈಬಾ ಅವರ ದುಃಖದ ಕಟ್ಟೆ ಒಡೆದಿದ್ದರೂ ಪರೀಕ್ಷೆಯನ್ನು ಬರೆಯಲು, ಕುಟುಂಬಸ್ಥರು ಧೈರ್ಯ ನೀಡಿದ್ದರು. ಅದರಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶೇಷ ಮುತುವರ್ಜಿಯಿಂದ ವಿದ್ಯಾರ್ಥಿನಿ ಶೈಬಾ ಅವರಿಗೆ ಪರೀಕ್ಷಾ ಕೇಂದ್ರವಾಗಿರುವ ಮೊಂಟೆಪದವಿನ ಸರಕಾರಿ ಪ್ರೌಢಶಾಲೆಯ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿನಿಗೆ ಮಾನಸಿಕವಾಗಿ ವ್ಯಥೆಯಾಗದಂತೆ ಪೂರಕ ವಾತಾವರಣ ಸೃಷ್ಟಿಸಲು ಸಹಕಾರ ನೀಡಿದ್ದಾರೆ. ಪರೀಕ್ಷೆ ಬರೆಯಲು ಮಾನಸಿಕವಾಗಿ ದೃಢತೆಗೆ ವಿಶೇಷ ವ್ಯವಸ್ಥೆ ಮಾಡಿದ ಇಲಾಖೆಗೆ, ಉಪ ಪ್ರಾಂಶುಪಾಲ ಸಂತೋಷ್ ಟಿ.ಎನ್. ಸೇರಿದಂತೆ ಸಹಕರಿಸಿದ ಎಲ್ಲರಿಗೂ ಕುಟುಂಬ ಧನ್ಯವಾದ ಸಲ್ಲಿಸಿದೆ.