Site icon Ullalavani

ತಲಪಾಡಿ : ಶಾರದಾ ಆಯುರ್ವೇದ ಆಸ್ಪತ್ರೆಯ ವರ್ಷಾಚರಣೆ,ರಾಷ್ಟ್ರೀಯ ವೈದ್ಯರ ದಿನಾಚರಣೆ

UN NETWORKS

ತಲಪಾಡಿ : ತಲಪಾಡಿ ಅಲೋಪಥಿ, ಆಯುರ್ವೇದ ಸೇರಿದಂತೆ ಎಲ್ಲಾ ವೈದ್ಯ ಪದ್ಧತಿಯ ಮೂಲ ಉದ್ದೇಶ ರೋಗಿಗಳ ನೋವು ನಿವಾರಣೆ ಮಾಡುವುದು. ಅದರಲ್ಲೂ ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಅದರದೇ ಆದ ಮಹತ್ವವಿದ್ದು, ಕಳೆದ ಒಂದು ವರ್ಷದಲ್ಲಿ ತಲಪಾಡಿಯ ಪ್ರಕೃತಿ ಮಡಿಲಲ್ಲಿ ಅತ್ಯಂತ ಕ್ಷಿಪ್ರ ಬೆಳವಣಿಗೆಯಾಗಿರುವ ಶಾರದಾ ಆಯುರ್ವೇದ ಆಸ್ಪತ್ರೆ ಅತ್ಯಂತ ಉತ್ತಮ ಆಯುರ್ವೇದ ಆಸ್ಪತ್ರೆಗಳ ಸಾಲಿನಲ್ಲಿ ಮೊದಲನೇ ಸಾಲಿನಲ್ಲಿ ನಿಂತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು.

ಅವರು ತಲಪಾಡಿ ದೇವಿನಗರದ ಶಾರದಾ ಆಯುರ್ವೇದ ಮತ್ತು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರ ಶಾರದಾ ಆಯುರ್ವೇದ ಆಸ್ಪತ್ರೆಯ ವರ್ಷಾಚರಣೆ ಮತ್ತು ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ಬು ಉದ್ಘಾಟಿಸಿ ಮಾತನಾಡಿದರು.ಅಲೋಪಥಿಯಲ್ಲಿ ವೈದ್ಯರಿಗೆ ರೋಗಿಗಳು ಕ್ಲಿನಿಕಲ್ ಮೆಟೀರಿಯಲ್ ಆದರೆ ಆಯುರ್ವೇದ ಸೇರಿದಂತೆ ಎಲ್ಲಾ ಚಿಕಿತ್ಸಾ ಪದ್ಧತಿಯ ಉದ್ಧೇಶ ರೋಗಿಗಳ ನೋವು ಶಮನ ಮಾಡುವುದು. ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಅದರದೇ ಆದ ಮಹತ್ವವಿದ್ದು ಈ ನಿಟ್ಟಿನಲ್ಲಿ ತಲಪಾಡಿ ದೇವಿನಗರದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಶಾರದಾ ಆಯುರ್ವೇದ ಆಸ್ಪತ್ರೆಯ ಅಭಿವೃದ್ದಿಯ ಫಥದೊಂದಿಗೆ ಮುಂದುವರೆಯುತ್ತಿರುವುದು ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಆಯುರ್ವೇದ ಕಾಲೇಜು ಆಗಿ ಕಾರ್ಯ ನಿರ್ವಹಿಸುವುದಲ್ಲಿ ಸಂದೇಹವಿಲ್ಲ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್ ಮಾತನಾಡಿ ಕೇರಳದ ಭಾಗದಲ್ಲಿ ಆಯುರ್ವೇದ ಚಿಕಿತ್ಸೆಯ ಬಗ್ಗೆ ಆಸಕ್ತಿಯಿದೆ. ಆದರೆ ಈ ಭಾಗದಲ್ಲಿ ಕಡಿಮೆಯಿತ್ತು. ಈ ನಿಟ್ಟಿನಲ್ಲಿ ಭಾರತೀಯ ಚಿಕಿತ್ಸಾ ಪದ್ಧತಿಯಾದ ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆಯ ಮೂಲಕ ರೋಗಿಗಳಿಗೆ ಶಾಶ್ವತ ಪರಿಹಾರದ ನಿಟ್ಟಿನಲ್ಲಿ ಶಾರದಾ ಆಯುರ್ವೇದ ಆಸ್ಪತ್ರೆ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಸ್ಥಾಪಿಸುವ ಮೂಲ ಉದ್ಧೇಶವಾಗಿದ್ದು ಇಲ್ಲಿ ವೈದ್ಯರಿಂದ ಹಿಡಿದು ಎಲ್ಲಾ ಸಿಬಂದಿಗಳು ಸೇವಾ ಮನೋಭಾವನೆಯಿಂದ ಕೆಲಸ ಮಾಡುವ ಮೂಲಕ ಉತ್ತಮ ಆಸ್ಪತ್ರೆಯಾಗಿ ಬೆಳವಣಿಗೆಯನ್ನು ಕಾಣುತ್ತಿದ್ದು, ಕಲವೇ ದಿನಗಳಲ್ಲಿ ಆಯುರ್ವೇದ ಕಾಲೇಜು ಸ್ಥಾಪನೆಯಾಗಲಿದೆ ಎಂದ ಅವರು ರಕ್ತದಾನದ ಕುರಿತು ಜನರಲ್ಲಿ ಅಂದಶ್ರದ್ಧೆಯಿದೆ. ಜನರಲ್ಲಿ ಇದರ ಕುರಿತು ಜಾಗೃತಿಯಾಗಬೇಕಾಗಿದೆ. ರಕ್ತ ಕೊಡುವುದರೊಂದಿಗೆ ಎಷ್ಟೋ ಜೀವ ಉಳಿಸಲು ಸಾಧ್ಯ. ರಕ್ತದಾನ ನೀಡಿದರೆ ಎರಡೇ ದಿನಗಳಲ್ಲಿ ಹೊಸ ರಕ್ತ ನಮ್ಮ ದೇಹದಲ್ಲಿ ಉತ್ಪತ್ತಿಯಾಗುತ್ತದೆ ಈ ನಿಟ್ಟಿನ್ಲಲಿ ಶಾರದಾ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆಸರೆ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷೆ ಆಶಾ ಜ್ಯೋತಿ ರೆ` ಮಾತನಾಡಿ ಸಂಸ್ಥೆಯನ್ನು ಸ್ಥಾಪಿಸುವುದು ಸುಲಭವಲ್ಲ ಆದರೆ ಆ ಸಂಸ್ಥೆಯನ್ನು ಉತ್ತಮ ಸಂಸ್ಥೆಯನ್ನಾಗಿ ರೂಪಿಸುವುದು ಅತ್ಯಂತ ಕಷ್ಟಕರ ಆ ಕೆಲಸವನ್ನು ತುಳುನಾಡು ಶಿಕ್ಷಣ ಸಂಸ್ಥೆ ನಿರ್ವಹಿಸಿದ್ದು, ಶಾರದ ಸಮೂಹ ಸಂಸ್ಥೆಗಳು ಶೈಕ್ಷಣಿಕ ಗುಣಮಟ್ಟವನ್ನು ಉಳಿಸಿಕೊಂಡಿದೆ, ಇದರೊಂದಿಗೆ ನೂತನವಾಗಿ ಆರಂಭವಾಗಲಿರುವ ಆಯುರ್ವೇದ ಮೆಡಿಕಲ್ ಕಾಲೇಜು ಇದೇ ರೀತಿಯಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತುಂಗಕೇರುವಲ್ಲಿ ಸಂದೇಹವಿಲ್ಲ ಎಂದರು. ವೆನ್‍ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್‍ನ ಮುಖ್ಯಸ್ಥ ಡಾ| ಶರತ್ ಕುಮಾರ್ ರಾವ್ ಜೆ. ಮಾತನಾಡಿ ಯಾವ ವೈದ್ಯರಿಗೆ ರೋಗಿ ಗುಣಮುಖವಾಗಲಿ ಎನ್ನುವ ತುಡಿತ ಇರುತ್ತದೆ ಅಂತಹ ವೈದ್ಯರು ಯಶಸ್ವಿಯಾಗಲು ಸಾಧ್ಯ ಎಂದ ಅವರು ವೈದ್ಯರ ದಿನಾಚರಣೆಯೊಂದಿಗೆ ರಕ್ತದಾನ ಶಿಬಿರದ ಮೂಲಕ ಶಾರದಾ ಆಯುರ್ವೇದ ಆಸ್ಪತ್ರೆ ಉತ್ತಮ ಕಾರ್ಯ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಶಾರದಾ ಸಮೂಹ ಸಂಸ್ಥೆಗಳ ಟ್ರಸ್ಟಿ ಪ್ರದೀಪ್ ಕುಮಾರ್ ಕಲ್ಕೂರ , ಶಾರದಾ ವಿದ್ಯಾನಿಕೇತನದ ಆಡಳಿತಾಧಿಕಾರಿ ವಿವೇಕ್ ತಂತ್ರಿ, ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮುಖ್ಯಸ್ಥ ಡಾ| ರಾಜೇಶ್ ಪಡೆಕಲ್, ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲ ಅಷ್ಟಾವಧನಿ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಉಪಸ್ಥಿತರಿದ್ದರು.

ಶಾರದಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮುಖ್ಯ ವೈದ್ಯಾ„ಕಾರಿ ಡಾ| ರವಿಗಣೇಶ್ ಮೋಗ್ರ ಸ್ವಾಗತಿಸಿದರು. ಡಾ| ವಿದ್ಯಾಲಕ್ಷ್ಮಿ ಪ್ರಾರ್ಥನೆ ನೆರವೇರಿಸಿದರು. ಆಸ್ಪತ್ರೆಯ ಯೋಜನಾಧಿಕಾರಿ ವಿಕ್ರಮ್ ಕುಂಟಾರ್ ಕಾರ್ಯಕ್ರಮ ನಿರ್ವಹಿಸಿದರು. ಡಾ| ನಿಖಿಲ್ ಚಂದ್ರನ್ ವಂದಿಸಿದರು.

Exit mobile version