Site icon Ullalavani

ಕೊಣಾಜೆ : ಬೆಳ್ಮ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರಕ್ಕೆ ಡಾ|ಡಿ.ವಿರೇಂದ್ರ ಹೆಗ್ಡೆ ಭೇಟಿ

UN NETWORKS

ಕೊಣಾಜೆ : ಕೊಣಾಜೆ ಬೆಳ್ಮ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಪದ್ಮಭೂಷಣ ಡಾ| ಡಿ. ವಿರೇಂದ್ರ ಹೆಗ್ಡೆಯವರು ಭೇಟಿ ನೀಡಿ ಆಶೀರ್ವಚನ ನೀಡಿದರು.

ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಉಮರಬ್ಬ, ಅನ್ಣಪ್ಪ ಪಿ.ಎಸ್., ಮಂಗಳೂರು ವಿವಿ ವಿಶ್ರಾಂತ ಪ್ರಾಧ್ಯಪಕ ಡಾ| ಚಿನ್ನಪ್ಪ ಗೌಡ, ಧಾರ್ಮಿಕ ಮುಂದಾಳುಗಳಾದ ಸೀತಾರಾಮ ಶೆಟ್ಟಿ ನೆತ್ತಿಲಬಾಳಿಕೆ, ರಘುರಾಮ ಕಾಜವ, ಸ್ವಸಹಾಯ ಸಂಘಗಳ ಸದಸ್ಯರು, ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪ್ರಸಾದ್ ರೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ, ಕೋಶಾಧಿಕಾರಿ ರವೀಂದ್ರ ಬಂಗೇರ ಕೊಣಾಜೆ, ಗೌರವ ಸಲಹೆಗಾರ ಸುದರ್ಶನ್ ಭಟ್, ಜೊತೆ ಕಾರ್ಯದರ್ಶಿ ಸುಂದರ ಸೆಟ್ಟಿಗಾರ್, ಹರೀಶ್ ಗಟ್ಟಿ, ದೇವಣ್ಣ ಶೆಟ್ಟಿ ಉಪಸ್ಥಿತರಿದ್ದರು. ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಪೂಜೆ ನೆರವೇರಿಸಿದ ಬಳಿಕ ಪ್ರಸಾದ ವಿತರಿಸಲಾಯಿತು.

Exit mobile version