Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ತಲಪಾಡಿ : 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ

UllalaVaniBy UllalaVaniJuly 18, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತಲಪಾಡಿ : ಸರಕಾರಿ ಜಾಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳೊಂದಿಗೆ ಗದ್ದಲದಲ್ಲಿ ಆರಂಭಗೊಂಡ ತಲಪಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡರೆ, ಮೊಬೈಲ್ ಟವರ್ ವಿಚಾರದಲ್ಲಿ ಗ್ರಾಮಸ್ಥರೊಬ್ಬರು ಆಧ್ಯಕ್ಷರ ಮತ್ತು ಪಂಚಾಯತ್ ಆಭಿವೃದ್ಧಿ ಅಧಿಕಾರಿ ವಿರುದ್ಧ ಗಂಭೀರ ಅರೋಪಕ್ಕೆ ಪಂಚಾಯಿತಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು ಅಸಮಾಧಾನ ವ್ಯಕ್ತಪಡಿಸಿ ಆರೋಪ ಮಾಡುವ ಸಂದರ್ಭ ಸಾಕ್ಷಿಯೂ ಜೊತೆಗಿರಲಿ ಎಂದು ತರಾಟೆಗೆ ತೆಗೆದುಕೊಂಡರು.

ತಲಪಾಡಿ ಗ್ರಾಮ ಪಂಚಾಯಿತಿ ವಠಾರದಲ್ಲಿ ಗುರುವಾರ ನಡೆದ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ್ದರು.ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಅನುಮತಿ ನೀಡಲು ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿ, ಲಂಚ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ ಎಂದು ಅನುಮಾನ ವ್ಯಕ್ತಪಡಿಸಿದರು. ಈ ಆರೋಪ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ನೀವು ಆಧಾರರಹಿತ ಆರೋಪ ಮಾಡುತ್ತಿದ್ದು, ಸಾಕ್ಷಿ ಸಹಿತ ಆರೋಪ ಸಾಬೀತುಪಡಿಸಿ. ಇಲ್ಲದಿದ್ದರೆ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪಿಡಿಓ ಕೇಶವ ಪೂಜಾರಿ ಆವರೂ ಎಚ್ಚರಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್ ಆಳ್ವ, ಆರೋಪ ಮಾಡಿರುವ ನೀವು ಕಟ್ಟಡ ಕಟ್ಟಿಸಿ ಅನಧಿಕೃತವಾಗಿ ಶೀಟ್ ಹಾಕಿದ್ದೀರಿ. ಆ ಸಂದರ್ಭ ನೀವು ನಮಗೆ ಹಣ ಕೊಟ್ಟಿದ್ದೀರಿ ಎನ್ನುವ ಆರೋಪ ಇದೆ. ನೀವು ನಮಗೆ ಹಣ ಕೊಟ್ಟಿದ್ದು ಹೌದಾ? ಎಂದು ಪ್ರಶ್ನಿಸಿದರಲ್ಲದೆ, ಟವರ್ ನಿರ್ಮಾಣಕ್ಕೆ ಪಂಚಾಯಿತಿ ಅನುಮತಿ ಕೊಟ್ಟಿಲ್ಲ ಎಂದು ತಿಳಿಹೇಳಿದರು.

ತ್ಯಾಜ್ಯ ಘಟಕ ವಿಚಾರದಲ್ಲಿ ಸರಕಾರಿ ಮತ್ತು ಕುಮ್ಕಿ ಜಾಗದ ಗದ್ದಲ ಸಭೆಯಲ್ಲಿ ನಡೆಯಿತು. ನಾಲ್ಕು ವರ್ಷಗಳಿಂದ ಘನತ್ಯಾಜ್ಯ ಘಟಕಕ್ಕಾಗಿ ಹೋರಾಟ ಮಾಡಿದರೂ ಪ್ರಯೋಜನ ಆಗಿಲ್ಲ ಎಂದು ಅಬ್ಬಾಸ್ ಉಚ್ಚಿಲ್ ಅಸಮಾಧಾನ ವ್ಯಕ್ತಪಡಿಸಿದ್ದು ಈ ವಿಚಾರದಲ್ಲಿ ಗ್ರಾಮ ಪಂಚಾಯತ್ ಯಾಕೆ ಬರ್ಕಾಸ್ತು ಮಾಡಬಾರದು ಎಂದು ಪ್ರಶ್ನಿಸಿದರು. ಈ ವಿಚಾರದಲ್ಲಿ ಪಿಡಿಒ ಕೇಶವ ಪೂಜಾರಿ ಮಾತನಾಡಿ ಸರಕಾರಿ ಜಾಗದ ಕೊರತೆ ಮತ್ತು ಖಾಸಗಿ ಜಾಗದಲ್ಲಿ ತ್ಯಾಜ್ಯ ಘಟಕ ಸ್ಥಾಪನೆಗೆ ಸಂಬಂಧಿಸಿದಂತೆ ಜನರ ವಿರೋಧವಿದೆ ಎಂದಾಗ ಸಿದ್ದೀಕ್ ತಲಪಾಡಿ ಮಾತನಾಡಿ, ಗ್ರಾಮದಲ್ಲಿರುವ ಸರ್ಕಾರಿ ಜಮೀನು ಖಾಸಗಿ ವ್ಯಕ್ತಿಗಳು ಮಾರಾಟ ಮಾಡಿ ಲಕ್ಷಗಟ್ಟಲೆ ದುಡ್ಡು ಮಾಡಿದ್ದಾರೆ. ಗ್ರಾಮದಲ್ಲಿ ಮೂರು ಸೆಂಟ್ಸ್ ಜಾಗ ಇಲ್ಲದವರು ಇದ್ದಾರೆ. ಸರ್ಕಾರಿ ಜಾಗ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳಿ. ಹಣ ನೀಡಿದರೆ ಹಕ್ಕುಪತ್ರ ಬೇಗ ಸಿಗುತ್ತದೆ ಎನ್ನುವ ಆರೋಪ ಸದಸ್ಯರ ಮೇಲಿದೆ ಎಂದರು.

ಯಾವುದೇ ಸದಸ್ಯರೂ ಹಕ್ಕುಪತ್ರಕ್ಕಾಗಿ ಹಣ ಪಡೆದಿಲ್ಲ, ಆ ಕಾರಣಕ್ಕೆ ಯಾರ ಮೇಲೂ ಆರೋಪ ಮಾಡಬಾರದು. ಹಕ್ಕುಪತ್ರ ನೀಡುವುದು ಕಂದಾಯ ಇಲಾಖೆ. ನೀವು ಮಧ್ಯವರ್ತಿಗಳ ಮೂಲಕ ಹೋದಾಗ ಆಗುವ ಸಮಸ್ಯೆಗೆ ನಾವು ಹೊಣೆಯಲ್ಲ. ಯಾರಾದರೂ ಹಣ ಪಡೆದಿದ್ದರೆ ಅವರ ಹೆಸರು ಹೇಳಿ ಎಂದು ಸುರೇಶ್ ಆಳ್ವ ಅಸಮಾಧಾನ ವ್ಯಕ್ತಪಡಿಸಿದರು. ತಲಪಾಡಿ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆ, ಆಂಗ್ಲ ಶಿಕ್ಷಕರು ಬೇಕು ಎಂದು ನಾಲ್ಕು ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ, ಸಚಿವರೆಲ್ಲಿ ಸತ್ತಿದ್ದಾರೆಂದು ಗೊತ್ತಿಲ್ಲ. ಅವರೆಲ್ಲಾ ಕುರ್ಚಿಗಾಗಿ ಹೋರಾಡುತ್ತಿದ್ದಾರೆ ಎಂದು ಮಹಿಳೆಯೋರ್ವರು ಕಿಡಿಕಾರಿದರು. ಈ ಸಂದರ್ಭ ಅಸಮಾಧಾನಗೊಂಡ ಸುರೇಶ್ ಆಳ್ವ, ಗ್ರಾಮಸಭೆಗೆ ಸಭ್ಯತೆ ಎನ್ನುವುದು ಇದೆ, ಸಚಿವರು ಹಾಗೂ ಆಯಾ ಸ್ಥಾನಕ್ಕೆ ತನ್ನದೇ ಘನತೆ ಇದೆ. ಮಾತನಾಡುವಾಗ ಜಾಗರೂಕತೆ ವಹಿಸಿ, ಸಭೆಯಲ್ಲಿ ಮಾತನಾಡಬಾರದು ಎಂದರು. ನೋಡೆಲ್ ಅಧಿಕಾರಿ ಶ್ಯಾಮಲಾ, ಪಿಡಿಓ ಕೇಶವ ಪೂಜಾರಿ ಸಹಿತಿ ಪಂಚಾಯಿತಿ ಸದಸ್ಯರೂ ಗ್ರಾಮಸ್ಥರು ಬುದ್ಧಿವಾದ ಹೇಳಿದರು.

ಕೆ.ಸಿ.ರೋಡ್‍ನಲ್ಲಿ ರಸ್ತೆ ಅಗಲೀಕರಣ ಸಂದರ್ಭ ತೆಗೆಯಲಾಗಿರುವ ಅಟೋ ಪಾರ್ಕ್ ನಿರ್ಮಾಣಕ್ಕೆ ಬಂದ ಮನವಿಗೆ ಪ್ರತಿಕ್ರಿಯಿಸಿದ ತಾ.ಪಂ.ಸದಸ್ಯ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ, ಈಗಾಗಲೇ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳಲ್ಲಿ ಮಾತನಾಡಿದ್ದು ಸೂಕ್ತ ಸ್ಪಂದನೆ ದೊರಕಿದೆ. ಸಚಿವರು ನಾಲ್ಕು ಲಕ್ಷ ಅನುದಾನ ನೀಡಿದ್ದು ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು. ಈ ಸಂದರ್ಭ ಅಟೋ ಚಾಲಕರು, ಸ್ಥಳೀಯರ ಸಹಕಾರ ಅಗತ್ಯ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯಿತಿಯ ಸದಸ್ಯರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇಶವ ಪೂಜಾರಿ ಪಾವೂರು ಸ್ವಾಗತಿಸಿದರು. ಸಿಬ್ಬಂದಿ ನಳಿನಿ ಹಿಂದಿನ ಗ್ರಾಮಸಭೆಯ ನಡಾವಳಿ ಮಂಡಿಸಿದರು. ಕಾರ್ಯದರ್ಶಿ ಶಾಂತಿ ವಾರ್ಡ್ ಸಭೆಯ ಮಾಹಿತಿ ನೀಡಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

March 2, 2026

ಮುಡಿಪಿನಲ್ಲಿ “ಗೋ ಗ್ಯಾಸ್” ವಿಶೇಷ ಹೊಸ ವರ್ಷದ ಆಫರ್

February 26, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
KARNATAKA

ಯುಕೆಟಿಎಲ್ ಪರಿಹಾರ ವಿವಾದ: ಕರ್ನಾಟಕಕ್ಕಿಂತ ಕೇರಳದ ರೈತರಿಗೆ ಹೆಚ್ಚಿನ ಪರಿಹಾರ ಸಿಕ್ಕಿದೆಯೇ? ಇಲ್ಲಿದೆ ಅಸಲಿ ಲೆಕ್ಕಾಚಾರ

By UllalaVaniMarch 3, 20260

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗವು (UKTL) ದಕ್ಷಿಣ ಕನ್ನಡ ಜಿಲ್ಲೆಯ ಗದ್ದೆ ಮತ್ತು ತೋಟಗಳ ಮೂಲಕ ಹಾದುಹೋಗುತ್ತಿರುವಾಗ,…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

March 2, 2026

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026
1 2 3 … 1,819 Next
Automatic YouTube Gallery

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
Now Playing
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ...
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d