UN NETWORKS
ಉಳ್ಳಾಲ : ಬಿ.ಜೆ.ಪಿ. ಮಂಗಳೂರು ವಿಧಾನ ಸಭಾ ಕ್ಷೇತ್ರದ ಬೂತ್ ನಂ 42ರ ಗಂಡಿ ವಾರ್ಡ್ನಲ್ಲಿ ಚಂದ್ರಹಾಸ್ ಪಂಡಿತಹೌಸ್ ನೇತೃತ್ವದಲ್ಲಿ ಬಿ.ಜೆ.ಪಿ. ಸದಸ್ಯತ್ವ ಅಭಿಯಾನ ನಡೆಯಿತು.
ರಕ್ಷಾ ಬಂಧನವನ್ನು ಅಚರಿಸಿ ,ಬಿ.ಜೆ.ಪಿ. ಸದಸ್ಯತ್ವ ನೋಂದಾವಣೆಯನ್ನು ಸಿಹಿ ತಿಂಡಿ ಮತ್ತು ಶ್ರೀಗಂಧದ ಗಿಡ ನೀಡುವ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಸಂತೋಷ್ ಬೊಳಿಯರ್, ಸದಸ್ಯತ್ವ ಅಭಿಯಾನದ ಸಂಚಾಲಕರಾದ ಮೋಹನ್ ರಾಜ್ ಕೆ.ಅರ್., ಜಿಲ್ಲಾ ಪ್ರಮುಖ್ ಚಂದ್ರಶೇಖರ ಉಚ್ಚಿಲ್, ಪರಿಸರ ಪ್ರೇಮಿ ಮಾದವ ಉಳ್ಳಾಲ್, ಚಂದ್ರಹಾಸ್ ಗುಂಡ್ಯ, ರವಿ ಸೋವುರ್, ಪುರುಷೋತ್ತಮ ಕಲ್ಲಾಪು, ರಜನೀಶ್ ನ್ಯಾಕ್, ದಿಕ್ಷೀತ್ ಪೂಜಾರಿ, ಗುರು ಪ್ರಸಾದ್ ಭಂಡಾರಿ,ಅನಂದಿ ಹಾಗೂ ವಿಜಯ ಗೆಮ್ಸ್ ಟೀಮ್ ಸದಸ್ಯರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.