ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೊಣಾಜೆ: ಕೊಣಾಜೆ ಸಮೀಪದ ಜೋಡುಕಟ್ಟೆ ಎಂಬಲ್ಲಿ ಹಾರ್ಡ್ವೇರ್ ಅಂಗಡಿಯೊಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಸುಮಾರು 35 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಹರೇಕಳ ಕಿಸಾನ್ನಗರ ನಿವಾಸಿ ಸಾಹುಲ್ ಹಮೀದ್ ಎಂಬವರಿಗೆ ಸೇರಿದ ಹಾರ್ಡ್ವೇರ್ ಅಂಗಡಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಗೆ ಕಾರಣಗಳು ತಿಳಿದು ಬಂದಿಲ್ಲ.
ಬೆಂಕಿ ಹಚ್ಚಿರುವ ಸಾಧ್ಯತೆ ಶಂಕೆ ? : ಅಂಗಡಿ ಉರಿಯುತ್ತಿದ್ದ ಸಂದರ್ಭದಲ್ಲಿ ಅಂಗಡಿಯ ಷಟರ್ ಸ್ವಲ್ಪ ಮೇಲಕ್ಕೆ ಎಳೆದಿರುವ ಹಾಗೆ ಕಂಡು ಬಂದಿದ್ದು, ಷಟರ್ ಎಳೆದು ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಸಾದ್ಯತೆಯ ಕುರಿತು ತನಿಖೆ ನಡೆಸಲಾಗುತ್ತಿದೆ.
ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಲು ಸಹಕರಿಸಿದ್ದು , ಅಂಗಡಿಯೊಂದಿಗೆ ಕಟ್ಟಡಕ್ಕೆ ಸಂಪೂರ್ಣ ಹಾನಿಯಾಗಿದೆ. ಮತ್ತು ಪಕ್ಕದಲ್ಲಿದ್ದ ಪ್ಯಾನ್ಸಿ ಸೆಂಟರ್ಗೆ ನಷ್ಟವಾಗಿದೆ.
ಕೊಣಾಜೆ ಪೆÇಲೀಸರು ಸ್ಥಳಕ್ಕೆ ಆಗಮಿಸಿದ್ದು, ಜಿಲ್ಲಾ ಪಂಚಾಯತ್ ಸದಸ್ಯ ಎನ್ಎಸ್ ಕರೀಂ, ತಾಲೂಕು ಪಂಚಾಯತ್ಸದಸ್ಯ ಮಹಮ್ಮದ್ ಮುಸ್ತಾಫ ಆಗಮಿಸಿ ಅಂಗಡಿ ಮಾಲೀಕರಿಗೆ ಸಾಂತ್ವಾನ ಹೇಳಿದರು. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.