ಉಳ್ಳಾಲ: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ, ಆಗುತ್ತಿವೆ ಎನ್ನುವ ಮೂಲಕ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದ ಸೃಷ್ಟಿಸಿದ್ದಾರೆ.
ತಲಪಾಡಿ ಬಳಿಯ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಿನ್ಯಾದಲ್ಲಿ ಕೇಳಿ, ಸುತ್ತಲೂ ಯಾರಿದ್ದಾರೆ ಅಂತ.. ಪ್ರಶ್ನೆ ಮಾಡಿದ್ರು.
ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಅಲ್ಲಿ ಹೋದರೆ ಪಾಕಿಸ್ತಾನವನ್ನು ನೋಡಿದಂತೆ ಆಗುತ್ತದೆ. ಹಿಂದುಗಳ ಸಂಖ್ಯೆ ಕಡಿನೆಯಾದರೆ ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕಾಯಿತು..? ನಮ್ಮವರ ಸಂಖ್ಯೆ ಕಡಿಮೆ ಆಗಿತ್ತು. ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾಯಿತು, ಈಗ ನಮ್ಮಲ್ಲೇ ಪಾಕಿಸ್ತಾನಗಳು ನಿರ್ಮಾಣ ಆಗುತ್ತಿವೆ ಎಂದು ಹೇಳಿದ್ದಾರೆ.


