ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ಹೆಣ್ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದರ ಜತೆಗೆ ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಕೀರ್ತಿಯನ್ನು ಗಳಿಸಿದಂತಹ ಕಣಚೂರು ಸಂಸ್ಥೆಯ ಸ್ಥಾಪಕರ ಕಾರ್ಯ ಶ್ಲಾಘನೀಯ ಎಂದು ಕಣ್ಣೂರು ಮತ್ತು ಕಲ್ಲಿಕೋಟೆ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಡಾ.ಎಂ.ಅಬ್ದುಲ್ ರೆಹಮಾನ್ ಹೇಳಿದ್ದಾರೆ.
ಅವರು ದೇರಳಕಟ್ಟೆಯ ಕಣಚೂರು ಇನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ಕಣಚೂರು ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ ಇದರ ಜಂಟಿ ಆಶ್ರಯದಲ್ಲಿ ಸೋಮವಾರ ಕಣಚೂರು ಅಕಾಡೆಮಿಕ್ ಹಾಲ್ ನಲ್ಲಿ ಜರಗಿದ ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಸ್ಥಾಪಕ ಯು.ಕಣಚೂರು ಮೋನು ಅವರನ್ನು ಸನ್ಮಾನಿಸಿ ಮಾತನಾಡಿದರು.

ಉದ್ಯಮಿಗಳು ಶಿಕ್ಷಣ ಕ್ಷೇತ್ರದಲ್ಲಿ ಅಪರೂಪವಾಗಿ ತೊಡಗಿಸಿಕೊಳ್ಳುತ್ತಾರೆ. ಆದರೆ ಕಣಚೂರು ಮೋನು ಅವರು ಉದ್ಯಮ ಕ್ಷೇತ್ರದ ಜತೆಗೆ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡು ವಿಶೇಷವಾಗಿ ಹೆಣ್ಮಕ್ಕಳನ್ನು ಶಿಕ್ಷಿತರನ್ನಾಗಿಸುವ ಕಾರ್ಯ ಕೈಗೊಂಡಿರುವುದು ಉತ್ತಮ ಸಾಧನೆ ಎಂದರು.
ಕಣಚೂರು ಆಸ್ಪತ್ರೆಯ ಅನಾಟೆಮಿ ವಿಭಾಗ ಮುಖ್ಯಸ್ಥ ಡಾ.ಅರುಣಾಚಲಂ ಕುಮಾರ್, ಮಂಗಳೂರಿನ ಫಿಸಿಷಿಯನ್ ಡಾ.ಮಹಮ್ಮದ್ ಇಸ್ಮಾಯಿಲ್, ಕಣಚೂರು ಸಂಸ್ಥೆಗಳ ಫೈನಾನ್ಸ್ ಆಂಡ್ ಅಡ್ಮಿನಿಸ್ಟ್ರೇಷನ್ ನ ನಿರ್ದೇಶಕ ಅಬ್ದುಲ್ ರಹಿಮಾನ್ , ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್, ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟಿನ ಝೊಹರಾ ಮೋನು, ಉಮಯಾ ಭಾನು, ಶಹಾದಾ ಅಬ್ದುಲ್ ರೆಹಮಾನ್, ಎಸ್.ಎಂ.ಬಾನು ಹಾಗೂ ಆಸ್ಪತ್ರೆಯ ಮೆಡಿಕಲ್ ಸುಪರಿಟೆಂಡೆಂಟ್ ಡಾ.ದೇವಿಪ್ರಸಾದ್ ಶೆಟ್ಟಿ, ನರ್ಸಿಂಗ್ ಸುಪರಿಟೆಂಡೆಂಟ್ ಸೊಲೊಮಿ ಜೋಸ್, ಪ್ರೀ ಶಾಲೆಯ ಪ್ರಾಂಶುಪಾಲೆ ಲೀನೆಟ್ ಡಿಸೋಜಾ, ಪ್ರಾಥಮಿಕ ಶಾಲೆ ಪ್ರಾಂಶುಪಾಲೆ ಆನಂದಿ.ಕೆ , ಹೈಸ್ಕೂಲಿನ ಪ್ರಾಂಶುಪಾಲ ರಾಮಚಂದ್ರ ಭಟ್ , ಪಿ.ಯು ಪ್ರಾಂಶುಪಾಲೆ ಹೇಮಲತಾ , ಮೆನೇಜ್ಮೆಂಟ್ ಸೈನ್ಸ್ ನ ಪ್ರೊ. ಇಕ್ಬಾಲ್ ಅಹಮ್ಮದ್ , ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ , ಸ್ಮಿತಾ ಮೋನಿಸ್ ಉಪಸ್ಥಿತರಿದ್ದರು.
ಕಣಚೂರು ಆಸ್ಪತ್ರೆಯ ಡೀನ್ ಡಾ.ಖಾಜಾ ನಾಸಿರುದ್ದೀನ್ ಸ್ವಾಗತಿಸಿದರು. ದೀಪಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
















