Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮಂಗಳೂರು ಕ್ಷೇತ್ರದ 19 ಗ್ರಾ.ಪಂ ಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ: ಖಾದರ್

UllalaVaniBy UllalaVaniDecember 15, 2020No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ : ಮಂಗಳೂರು ಕ್ಷೇತ್ರದ 19 ಗ್ರಾ.ಪಂ ಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ನಗರದಲ್ಲಿರುವ ವ್ಯವಸ್ಥೆಯನ್ನು ಗ್ರಾಮೀಣ ಮಟ್ಟಕ್ಕೂ ತಲುಪಿಸಿದ್ದೇವೆ. ರಸ್ತೆ ವ್ಯವಸ್ಥೆ, ಕುಡಿಯುವ ನೀರು, ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭ, ಸಾರಿಗೆ ವ್ಯವಸ್ಥೆ, ನಗರ ಮಟ್ಟದ ಸವಲತ್ತುಗಳು ಎಲ್ಲವನ್ನೂ ಉಳ್ಳಾಲ ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಪ್ರತಿ ಮತದಾರ ಕಾಂಗ್ರೆಸ್ ಅನ್ನು ಬೆಂಬಲಿಸಲಿದ್ದಾನೆ ಎಂದು ಮಂಗಳೂರು ಕ್ಷೇತ್ರ ಶಾಸಕ ಯು.ಟಿ ಖಾದರ್ ಹೇಳಿದ್ದಾರೆ‌.

ತೊಕ್ಕೊಟ್ಟು ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯ ಲ್ಲಿ ಮಾಹಿತಿ ನೀಡಿದ ಅವರು ಉಳ್ಳಾಲವನ್ನು ತಾಲೂಕಾಗಿ ಮಾರ್ಪಾಡು ಮಾಡಲಾಗಿದೆ. ಪ್ರತಿ ಗ್ರಾಮದಲ್ಲಿ ಸಹೋದರತೆ, ಪ್ರೀತಿ ವಿಶ್ವಾಸ ವಾತಾವರಣ ಸೃಷ್ಟಿಸುವುದು ಕಾಂಗ್ರೆಸ್ ಉದ್ದೇಶ. ಇದನ್ನು ಕಾಂಗ್ರೆಸ್‌ ನಿರ್ಮಿಸಿದೆ. ಬಿಜೆಪಿ ಆಡಳಿತದಲ್ಲಿ ಗ್ರಾಮೀಣ ಮಟ್ಟದಲ್ಲಿ ಜನ ಜೀವಿಸಲು ಯಾವುದೇ ಕಾರ್ಯಕ್ರಮವನ್ನು ಅನುಷ್ಠಾನ ಮಾಡಿಲ್ಲ. ರೇಷನ್, ಪೆನ್ಶನ್, ಸಂಧ್ಯಾ ಸುರಕ್ಷೆ ಎಲ್ಲಾ ಸವಲತ್ತುಗಳನ್ನು ನಿಲ್ಲಿಸಿದ್ದಾರೆ. ಪೆಟ್ರೋಲ್ ರೂ.100 ಕ್ಕೆ ಮುಟ್ಟುವ ಹಂತಕ್ಕೆ ತಲುಪಿದೆ. ಸರಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಿದ್ದಾರೆ. ಈ ಬಾರಿಯ ಪ್ರತಿ ಮತದಾರ ನೀಡುವ ಮತ ರಾಜ್ಯ ಸರಕಾರದ ಜನವಿರೋಧಿ ನೀತಿಗೆ ಕೊಡುವ ಎಚ್ಚರಿಕೆಯ ಗಂಟೆಯಾಗಿದೆ. ರೈತರು ಮತ್ತು ಕಾರ್ಮಿಕರನ್ನು ನಿರ್ಲಕ್ಷ್ಯವಾಗಿ ಕಂಡ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಜನ ಬುದ್ಧಿ ಕಲಿಸಲಿದ್ದಾರೆ‌. ಕಾಂಗ್ರೆಸ್ ಆಡಳಿತ ಇಲ್ಲದ ಪಂ.ನಲ್ಲಿ ಹಿಂದಿನ ಆಡಳಿತ ನಡೆಸಿದ ದುರಾಡಳಿತದಿಂದ ಕಾಂಗ್ರೆಸ್ ಅನ್ನು ಅನುಷ್ಠಾನಕ್ಕೆ ತರುವ ವಿಶ್ವಾಸವಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತದಾರ ಬೆಂಬಲಿಸಲಿದ್ದಾರೆ.

ದಬ್ಬಾಳಿಕೆಯಿಂದ ಅವಿರೋಧ ಆಯ್ಕೆ:
ಧ್ವನಿಯಿಲ್ಲದ ಶೋಷಿತವರ್ಗದ ಮೇಲೆ ದಬ್ಬಾಳಿಕೆ ನಡೆಸಿ ಅವಿರೋಧ ಆಯ್ಕೆಯನ್ನು ಬಿಜೆಪಿಯವರು ಮಾಡಿಕೊಂಡಿದ್ದಾರೆ. ಈ ಕುರಿತು ಮತದಾನದಲ್ಲಿ ಮತದಾರರೇ ಉತ್ತರಿಸಲಿದ್ದಾರೆ‌. ತುಂಬೆಯಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿ ಮೀಸಲಾತಿಯಿದ್ದರೂ, ಪರಿಶಿಷ್ಟ ಜಾತಿ ಯವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಬೆಂಬಲಿತ ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಅವಕಾಶವನ್ನು ಕಲ್ಪಿಸಲಿಲ್ಲ. ಬೆಳ್ಮ , ಪಾವೂರು ಭಾಗದಲ್ಲಿ ಮೀಸಲಾತಿಗೆ ಅನುಸಾರವಾಗಿ ಅಭ್ಯರ್ಥಿಗಳೇ ಇರದ ಕಾರಣ ಅವಿರೋಧ ಆಯ್ಕೆ ನಡೆದಿದೆ. ತಲಪಾಡಿಯ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೇ ಆಮಿಷವೊಡ್ಡಿ ಬಿಜೆಪಿಯತ್ತ ಒಲವು ಬರುವಂತೆ ಮಾಡಿ ಅವಿರೋಧ ಆಯ್ಕೆ ನಡೆದಿದೆ. ಒಟ್ಟಾಗಿ ಏಳು ಅಭ್ಯರ್ಥಿಗಳ ಮೇಲೆ ಅಧಿಕಾರ ದುರುಪಯೋಗಪಡಿಸಿಕೊಂಡ ಬಿಜೆಪಿ ಅವರ ಕುಟುಂಬಸ್ಥರಿಗೆ ಆಮಿಷವೊಡ್ಡಿ ತಮ್ಮತ್ತ ಸೆಳೆದಿದೆ ಎಂದರು.

ಮೊಯ್ಲಾರ್ ಹಲ್ಲೆ ಆರೋಪಿಗಳ ಬಂಧನವಾಗಲಿ :
ಅಸೈಗೋಳಿ ಮೊಯ್ಲಾರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಶಾಸಕರು ‘ ಕನಸಿನಲ್ಲಿಯೂ ಯು.ಟಿ ಖಾದರ್ ಕಾಣಿಸ್ತಾರೆ. ಸಂಬಂಧವಿಲ್ಲದ ವಿಚಾರಕ್ಕೂ ಬಿಜೆಪಿ ಲಿಂಕ್ ಕಲ್ಪಿಸುತ್ತದೆ. ನೆರೆಕೆರೆಯಲ್ಲಿ ನಡೆದ ಗಲಾಟೆಗೆ ರಾಜಕೀಯ ತರಲಾಗಿದೆ. ಗಾಯಾಳು ಶೀಘ್ರ ಗುಣಮುಖವಾಗಲಿ. ಆರೋಪಿಗಳ ಬಂಧನವಾಗಲಿ ಎಂದರು

ತೊಕ್ಕೊಟ್ಟು ಬ್ಯಾರಿ ಭವನದ ಜಾಗ ನಾನೇ ಹೇಳಿದ್ದು :
ಬ್ಯಾರಿ ಭವನಕ್ಕೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಬೈತುರ್ಲಿ ಪ್ರದೇಶದಲ್ಲಿ ಜಾಗ ನಿಗದಿ ಮಾಡಿಗತ್ತು. ಅನುದಾನವೂ ಬಿಡುಗಡೆಯಾಗಿತ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳ ವಿರೋಧದಿಂದ ಹಾಗೇ ಉಳಿದಿತ್ತು. ಈಗಿನ ಸರಕಾರ ಅದನ್ನು ಬದಲಾವಣೆ ನಡೆಸಿದೆ. ತೊಕ್ಕೊಟ್ಟುವಿನಲ್ಲಿ ಅಬ್ಬಕ್ಕ ಭವನಕ್ಕೆ ನಿಗದಿಪಡಿಸಿದ ಸ್ಥಳದ ಬಳಿಯೇ ಬ್ಯಾರಿ ಭವನಕ್ಕೆ ಬರಲಿದೆ. ತನ್ನಲ್ಲಿ ಸ್ಥಳಾವಕಾಶ ಕೇಳಿಕೊಂಡಾಗ ಒಪ್ಪಿಗೆ ಸೂಚಿಸಿದ್ದೇನೆ ಎಂದರು.

ಅಬ್ಬಕ್ಕ ಭವನಕ್ಕೆ ಎಂಟು ಕೋಟಿ ಅನುದಾನ ಮಂಜೂರಾಗಿದೆ. ಹೌಸಿಂಗ್ ಬೋಡ್೯ಗೆ ಕಾಮಗಾರಿ ಜವಾಬ್ದಾರಿ ಸಿಕ್ಕಿದೆ. ಅನುದಾನ ಮಂಜೂರಾಗಲು ಹೌಸಿಂಗ್ ಬೋಡ್೯ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಎಂಒಯು ಸೈನ್ ಮಾಡಬೇಕಿದೆ.
ಚುನಾವಣೆ ಮುಗಿದ ತಕ್ಷಣ ಸಂಸ್ಕೃತಿ ಇಲಾಖೆ ನಿರ್ದೆಶಕರ ಜತೆಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುತ್ತೇನೆ. ಶೀಘ್ರದಲ್ಲೇ ಅಬ್ಬಕ್ಕ ಭವನದ ಕಾಮಗಾರಿ ಆರಂಭಿಸಲಾಗುವುದು ಎಂದರು.

ನಾಟೆಕಲ್ ಅಥವಾ ತೊಕ್ಕೊಟ್ಟು ತಾಲೂಕು ಕಚೇರಿ:
ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್ ಅಥವಾ ತೊಕ್ಕೊಟ್ಟು ನಿರ್ಮಾಣಗೊಂಡಿರುವ ಮೂರಂತಸ್ತಿನ ಶಾಸಕರ ಕಚೇರಿಯಲ್ಲಿ ಆರಂಭಿಸುವ ಚಿಂತನೆ ಇದೆ. ಅದಕ್ಕೂ ಮುನ್ನ ಸಿಬ್ಬಂದಿ ನೇಮಕ ಹಾಗೂ ಇಲಾಖೆಗಳ ಕಚೇರಿಗಳ ಅನುಷ್ಠಾನಕ್ಕೆ ರೂಪುರೇಷೆ ತಯಾರಿಸಲಾಗುವುದು. ಬಳಿಕ ಮಂಗಳೂರು ವಿ.ವಿ ಕ್ಯಾಂಪಸ್ಸಿನಲ್ಲಿ ಸರಕಾರಿ ಜಾಗ ಇದ್ದು, ಅಲ್ಲಿಯೇ ಶಾಶ್ಬತ ತಾಲೂಕು ಕಚೇರಿ ನಿರ್ಮಿಸುವ ಚಿಂತನೆಯಿದೆ ಎಂದರು.

ನಮ್ಮ ಯೋಜನೆಗೆ
ಬಿಜೆಪಿಗರು ಶಂಕುಸ್ಥಾಪನೆ ನೆರವೇರಿಸಿ ಪ್ರಚಾರ ಪಡೆಯುತ್ತಿದ್ದಾರೆ

ಕದ್ರಿ ಪಾಕ್೯ ಎದುರುಗಡೆಯ ರಸ್ತೆ ಅಭಿವೃದ್ಧಿ , ಮಂಗಳೂರಿಗೆ ಸ್ಮಾಟ್೯ ಸಿಟಿ ಪ್ಲಾನ್ ನಲ್ಲಿ ತಾನು ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲೇ ಒಪ್ಪಿಗೆ ಸಿಕ್ಕಿರುವುದು.ಈಗಿನ ಬಿಜೆಪಿಯವರು ಕಾಂಗ್ರೆಸ್ ತಂದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಕನಿಷ್ಠ ಅಂತ್ಯ ಸಂಸ್ಕಾರಕ್ಕೆ ಕೊಡುವ 5,000 ರೂ ದುಡ್ಡೇ ಕೊಡದವರು , ಕೋಟಿಗಟ್ಟಲೆಯ ಯೋಜನೆಗಳನ್ನು ತರಲು ಸಾಧ್ಯವೇ? ಎಂದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ಅಬ್ದುಲ್ ರಹಿಮಾನ್ ಕೋಡಿಜಾಲ್ , ತಾ.ಪಂ ಅದ್ಯಕ್ಷ ಮಹಮ್ಮದ್ ಮೋನು, ಮನ್ಸೂರ್ ಮಂಚಿಲ, ಲತೀಫ್ ಕಂದುಕ, ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪಿಲಾರು ಕೆಸರಿನ ಗದ್ದೆಯಲ್ಲೊಂದು ದಿನ ಹಳ್ಳಿ ಸೊಗಡನ್ನು ನೆನಪಿಸಿದೆ: ಹರ್ಷರಾಜ್‌ ಮುದ್ಯ

August 12, 2026

ಅಂಬ್ಲಮೊಗರು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲ; ಜನರ ಪರದಾಟ

August 12, 2026

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ್ ಸಾಮಣಿಗೆ ಅವರನ್ನು ಅಭಿನಂದಿಸಿದ ಸಚಿವ ಯು.ಟಿ. ಖಾದರ್

August 12, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಪಿಲಾರು ಕೆಸರಿನ ಗದ್ದೆಯಲ್ಲೊಂದು ದಿನ ಹಳ್ಳಿ ಸೊಗಡನ್ನು ನೆನಪಿಸಿದೆ: ಹರ್ಷರಾಜ್‌ ಮುದ್ಯ

By UllalaVaniAugust 12, 20260

ಉಳ್ಳಾಲ: ಸಾಂಪ್ರದಾಯಿಕವಾಗಿ ನಡೆಯುವ ‘ಕೆಸರಿನ ಗದ್ದೆಯಲ್ಲೊಂದು ದಿನ’ ಕಾರ್ಯಕ್ರಮವು ಹಳ್ಳಿಯ ಸೊಗಡನ್ನು ಮತ್ತೆ ನೆನಪಿಸಿದ್ದು, ಈ ಮೂಲಕ ಜನರಿಗೆ ಹಿಂದಿನ…

ಅಂಬ್ಲಮೊಗರು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲ; ಜನರ ಪರದಾಟ

August 12, 2026

ದಿವ್ಯಜ್ಯೋತಿ ಕ್ರಿಕೆಟರ್ಸ್‌ನ 20ನೇ ವರ್ಷದ ಕಲಾ ಕಾಣಿಕೆ

August 12, 2026

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ್ ಸಾಮಣಿಗೆ ಅವರನ್ನು ಅಭಿನಂದಿಸಿದ ಸಚಿವ ಯು.ಟಿ. ಖಾದರ್

August 12, 2026
1 2 3 … 2,057 Next
Automatic YouTube Gallery

ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ

ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ವಿದ್ಯಾರ್ಥಿ

ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ
Now Playing
ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ
ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ...
ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ವಿದ್ಯಾರ್ಥಿ

ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಇಲ್ಲಿನ ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ
Now Playing
ಇಲ್ಲಿನ ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ
ಶಾಸಕರು ಅಂದ್ರೆ ಹೀಗಿರಬೇಕು..? ಎಂದ ಸಾರ್ವಜನಿಕರು 📍 Ullal | Dakshina Kannada ...
ಶಾಸಕರು ಅಂದ್ರೆ ಹೀಗಿರಬೇಕು..? ಎಂದ ಸಾರ್ವಜನಿಕರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version