UN networks
ಉಳ್ಳಾಲ :ಪಾದಾಚಾರಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದು ಆರೋಪಿಯ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ ಘಟನೆ ನಡೆದಿದೆ.
ಉಳ್ಳಾಲ ಉಳಿಯಕ್ಕೆ ಸಂಪರ್ಕಿಸುವ ಉಳ್ಳಾಲ ಬಂಡಿಕೊಟ್ಯ , ಗೊಳಿಯಡಿ ರಸ್ತೆಯಾಗಿ ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆ ಬದಿಯ ಓಣಿ ಮತ್ತು ಬೈಕ್ ನಲ್ಲಿ ಬರುವ ಆಗಂತುಕರು ಮಹಿಳೆಯ ಮೈ ಸವರಿಕಂಡು ಹೋಗುತ್ತಿದಗದು ಕಳೆದ 15 ದಿನಗಳಿಂದ ಮೂರಿ ನಾಲ್ಕು ಬಾರಿ ಇಂತಹ ಘಟನೆಗಳು ನಡೆದಿತ್ತು. ಶುಕ್ರವಾರವೂ ಇಂತಹ ಘಟನೆ ನಡೆದಾಗ .ಸ್ಥಳೀಯರು ಹಿಡಿದಿದ್ದು ಅಲೇಕಳ ನಿವಾಸಿ 16 ರ ಬಾಲಕನನ್ನು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.