Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಂಬ್ಲಮೊಗರು

ಹಿಂದೂ ಸಮಾಜದ ಒಗ್ಗಟ್ಟು ಮುರಿಯುವ ಉದ್ದೇಶದಿಂದ ಧಾರ್ಮಿಕ ನಂಬಿಕೆಗಳಿಗೆ ಘಾಸಿಗೊಳಿಸುವ ಕಾರ್ಯ : ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

UllalaVaniBy UllalaVaniMarch 22, 2021Updated:March 22, 2021No Comments3 Mins Read
Facebook Twitter Pinterest LinkedIn Tumblr Email WhatsApp
Felicitation
Share
Facebook Twitter LinkedIn Pinterest Email WhatsApp
ಕುತ್ತಾರು ಕೊರಗಜ್ಜನ ಕಟ್ಟೆ ಸಮೀಪ ಸ್ವಾಮೀಜಿ ಆಶೀರ್ವಚನ ನೀಡಿದರು.
ಧಾರ್ಮಿಕ ಸಭೆಯಲ್ಲಿ ನೆರೆದ ಜನ
Sharan Pumpwell
M B puranik
Felicitation
Felicitation

ಉಳ್ಳಾಲ:  ಒಗ್ಗಟ್ಟನ್ನು ಮುರಿಯುವ ಉದ್ದೇಶದಿಂದ ಧಾರ್ಮಿಕ ನಂಬಿಕೆಗಳಿಗೆ ಘಾಸಿಗೊಳಿಸುವ ಕಾರ್ಯಗಳಾಗುತ್ತಿದೆ.  ನಾವು ನಾವಾಗಿಯೇ ಉಳಿಯಲು ಸಂಸ್ಕೃತದ ಮೇಲಿರುವ ಗೌರವ ನಂಬಿಕೆಗಳೇ ಕಾರಣ. ಇದನ್ನು ಹಾಳುಗೆಡವಲು ದುಷ್ಟ ಶಕ್ತಿಗಳು ಯತ್ನಿಸುತ್ತಿವೆ. ಇದನ್ನು ಎಲ್ಲರೂ ಒಂದಾಗಿ ನಿಂತು ತಡೆಗಟ್ಟಬೇಕು. ಆಕ್ರಮಣ ಬಂದಾಗ ಮಾತ್ರವಲ್ಲ ಇಲ್ಲದಿದ್ದರೂ ಹಿಂದೂ ಸಮಾಜ ಒಗ್ಗಟ್ಟಾಗಿರಬೇಕಿದೆ ಎಂದು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಸೇವಾ ಟ್ರಸ್ಟಿನ  ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು
ಅವರು ವಿಶ್ವ ಹಿಂದೂ ಪರಿಷತ್- ಬಜರಂಗದಳ ವತಿಯಿಂದ ಹಿಂದೂ ಶ್ರಧ್ಧಾ ಕೇಂದ್ರಗಳಲ್ಲಿ  ದುಷ್ಕøತ್ಯ ಎಸಗುತ್ತಿರುವ  ದುಷ್ಕರ್ಮಿಗಳ ಕೃತ್ಯಗಳ ವಿರುದ್ಧ  ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಿಂದ ಕುತ್ತಾರು  ಶ್ರೀ ಕೊರಗಜ್ಜ ಆದಿಕ್ಷೇತ್ರಕ್ಕೆ  ಭಾನುವಾರ ಹಮ್ಮಿಕೊಂಡಿದ್ದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.  
ಸಂಸ್ಕೃತಿ ಪ್ರತೀಕವಾಗಿರುವ ಅಯೋಧ್ಯೆ ರಾಮಮಂದಿರ ನಿರಂತರ ಹೋರಾಟದ ಬಳಿಕ ಫಲಪ್ರದವಾಗಿದೆ. ಹಿಂದೂ ಸಂತತಿ ಇರುವಷ್ಟು ಕಾಲ ಮಂದಿರ ಮಂದಿರವಾಗಿಯೇ ಉಳಿಯಲಿದೆ.   ದೇಶದಲ್ಲಿ ಮಹಿಳೆಯರು ನರಕ ಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ಸರಕಾರವೇ ಹೆಣ್ಮಕ್ಕಳ ನಾಪತ್ತೆ ಕುರಿತು ವರದಿ ನೀಡುತ್ತಲೇ ಇದೆ. ರಾಮನ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವ ಕಾರ್ಯವಾಗಲಿ. ಹೆತ್ತವರಿಗೆ , ಸಂಸ್ಕೃತಿಗೆ ಗೌರವ ಕೊಡುವುದನ್ನು ಕಲಿಸಲಿ ಎಂದರು.
ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಮಾತನಾಡಿ,   ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಘಾಸಿಗೊಳಿಸುತ್ತಿರುವುದು  ಸಮಾಜದ ಪಿಡುಗಾಗಿದೆ. ಮೊಗಲರು, ಕ್ರೈಸ್ತರಿಂದ ಅನ್ಯಾಯಕ್ಕೊಳಗಾದ ಹಿಂದೂ ಧರ್ಮ ಎಂದಿಗೂ ಸೋತಿಲ್ಲ.  ದೈವ-ದೇವರ ವಿಚಾರಗಳ ಮೇಲೆ ಕೀಳರಿಮೆ ಹುಟ್ಟುವಂತೆ  ಮಾಡುತ್ತಿರುವ ಕಿರಾತಕರು ಹಿಂದೂಗಳ ದೌರ್ಬಲ್ಯ  ಉಪಯೋಗಿಸಿ ಮತಾಂತರ ಷಡ್ಯಂತ್ರ ರೂಪಿಸಲಾಗುತ್ತಿದೆ.  ಹಿಂದೂ ಸಮಾಜ ಎಲ್ಲರನ್ನು ಸ್ವಾಗತಿಸಿದ ಸನಾತನ ಧರ್ಮ.   ಸಹನೆ, ತಾಳ್ಮೆಯ ಇನ್ನೊಂದು ಮುಖವೇ ಹಿಂದೂ ಸಮಾಜ. ಆದರೆ  ತಾಳ್ಮೆಗೂ ಮಿತಿ ಇದೆ.  ಅಯೋಧ್ಯೆ ಕರಸೇವಕರಿದ್ದ  ರೈಲಿಗೆ ಬೆಂಕಿ ಕೊಟ್ಟವರನ್ನು ಬಿಡದ ಸಮಾಜದ ತಾಳ್ಮೆಗೂ ಮಿತಿ ಇದೆ. ಮಿತಿ ಮೀರಿದಲ್ಲಿ ನಿಲ್ಲಿಸುವ ತಾಕತ್ತೂ ಇದೆ ಎಂದರು.

ತುಳು ಜಾನಪದ ವಿಧ್ವಾಂಸ ಕೆ.ಕೆ ಪೇಜಾವರ ಮಾತನಾಡಿ  ಉಚ್ಛಯ ಆಗುವುದು ದೇವರಿಗೆ, ಕೋಲ ಮತ್ತು ನೇಮ  ದೈವಗಳಿಗೆ. ಆದರೆ ಈಗ ನೇಮೋತ್ಸವ, ಕೋಲೋತ್ಸವ ಎಂದು ದೇವರ ಉತ್ಸವವನ್ನು ದೈವದ ಜೊತೆಗೆ ಸೇರಿಸಲಾಗುತ್ತಿದೆ.  ಹದಿಹರೆಯದವರು ದೈವಶಕ್ತಿಗಳ ಕುರಿತು ಜ್ಞಾನದ ಕೊರತೆಯಿಂದ ಫೇಸ್‍ಬುಕ್, ವಾಟ್ಸ್ಯಾಪ್, ಇನ್ಸ್ಟಾಗ್ರಾಂ ನಲ್ಲಿ ದೈವ ಕಟ್ಟುವವರ   ಚಿತ್ರಗಳನ್ನು ಹಾಕಿ ವಿಕೃತ ಮೆರೆಯುತ್ತಿದ್ದಾರೆ.  ಈ ಕುರಿತು ವಿ.ಹಿಂ.ಪ ಎದುರುನಿಂತು ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದೆ. ಉಡುಪಿ ಆಮಂತ್ರಣ ಪತ್ರಿಕೆಯೊಂದರಲ್ಲಿ ದೈವದ ಸಂದರ್ಶನ ಎಂದು ಮುದ್ರಿಸಿದರೆ,  ಕಂಗೀಲು ನೃತ್ಯದಲ್ಲಿ ಕೊರಗಜ್ಜನ ವೇಷವನ್ನು ಧರಿಸಿ ಕುಣಿಯಲಾಗಿತ್ತು.  ಕೊರಗಜ್ಜ ಎಂದರೆ 800 ವರ್ಷಗಳ ಇತಿಹಾಸವಿರುವ ವಿಚಾರ. ಕಂಗೀಲು ನೃತ್ಯದ ಕಾಲಘಟ್ಟವೇ ಬೇರೆ. ಖಂಡಾಲ,  ಬಿಲ್ಲಾಲ,  ಮುರಕಾಲ, ಮುಂಡಾಲ, ಸ್ಥಾನಿಕ ಐದು ವರ್ಗಗಳ ಮೂಲದ ಜಾಗ ಇದಾಗಿದೆ. ಪಂಚವರ್ಣದ ಮಣ್ಣಾಗಿರುವ ತುಳುನಾಡಿನ ಆರಾಧನೆಗಳಲ್ಲಿ ಮೂಲತ್ವ ಇದೆ.  ಅಂತಹ ಆರಾಧನೆಯನ್ನು  ವೈಭವೀಕರಿಸುವ ಕಾರ್ಯಗಳಾಗುತ್ತಿದೆ. ವೈಭವ ಇರುವಲ್ಲಿ ಕಲೆ ಕಾರ್ಣಿಕ ಕಡಿಮೆಯಾಗುತ್ತಿದೆ ಅನ್ನುವುದನ್ನು ಸಮಾಜ ಅರಿಯಬೇಕು ಎಂದರು.
ಈ ವೇಳೆ ಕೊರಗಜ್ಜ ಹಾಡು ಹಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕಾರ್ಕಳ ಹಿರ್ಗಾನದ ಬಾಲಕ ಕಾರ್ತಿಕ್ ಮತ್ತು ಆತನಿಗೆ ಹಾಡು ಕಲಿಸಿದ ಸಹೋದರಿ  ರಕ್ಷಿತಾಳನ್ನು ಸ್ವಾಮೀಜಿ ಸನ್ಮಾನಿಸಿದರು.

ಈ ಸಂದರ್ಭ ಶ್ರೀ ಪಂಜಂದಾಯ ಬಂಟ ದೈವಸ್ಥಾನ ಮತ್ತು ಶ್ರೀ ಕೊರಗ ತನಿಯ ಆದಿಸ್ಥಳಗಳ ಆಡಳಿತ ಮೊಕ್ತೇಸರ ರವೀಂದ್ರನಾಥ್ ಪೂಂಜ ,ವಿ.ಹಿಂ.ಪ ಸಹಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ಗೋಪಾಲ್ ಕುತ್ತಾರ್, ಬಜರಂಗದಳದ ಜಿಲ್ಲಾ ಸಂಚಾಲಕ ಪುನಿತ್ ಅತ್ತಾವರ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಸ್ವಾಗತಿಸಿದರು.  ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರವಿ ಅಸೈಗೋಳಿ ನಿರೂಪಿಸಿದರು. ಸುರೇಖಾರಾಜ್ ವಂದಿಸಿದರು.

`ಎಲ್ಲಾ ಕ್ಷೇತ್ರದಲ್ಲೂ ಜಿಹಾದಿಗಳಿದ್ದಾರೆ ‘
ಶಿವಮೊಗ್ಗದ ಕಾರ್ಯಕ್ರಮದಲ್ಲಿ  ಬ್ರಾಹ್ಮಣ ಯುವತಿಯರು ಅನ್ಯ ಜಾತಿಯವರನ್ನು ವಿವಾಹವಾಗಬಾರದು ಅನ್ನುವ ಹೇಳಿಕೆಯನ್ನು ಸುಳ್ಳಾಗಿ  ಪ್ರಕಟಿಸಿದೆ. ವರದಿ ಪ್ರಕಟಿಸಿರುವ ಮಾಧ್ಯಮದವರಲ್ಲಿ  ವೀಡಿಯೋ ದಾಖಲೆ ಕೇಳಿದಾಗ, ಅದನ್ನು ಸ್ಪಷ್ಟವಾಗಿ ನೀಡಿಲ್ಲ. ಅಂತಹ ಹೇಳಿಕೆಯನ್ನು ನೀಡದೇ ಇದ್ದರೂ,  ಜನರಿಗೆ ಪತ್ರಿಕೆಗಳು ಹೇಳುವುದು ಸತ್ಯವಾಗುತ್ತದೆ.  ವೈದ್ಯರು, ಇಂಜಿನಿಯರುಗಳು ಉನ್ನತ ವಿದ್ಯಾಭ್ಯಾಸ ಪಡೆದುಕೊಂಡವರೇ ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.  ಜಿಹಾದಿ ಪ್ರವೃತ್ತಿ ಯಾವ ರೀತಿಯಲ್ಲೂ ಇರಬಹುದು. ಪೂಜೆ ಮಾಡುವ ಅರ್ಚಕರ ವೇಷದಲ್ಲೂ ಬರಬಹುದು. ಹಿಂದೂ ಸಮಾಜದಲ್ಲಿ ಒಡಕು ಹುಟ್ಟಿಸುವ ಪ್ರಯತ್ನಗಳು ನಿರಂತರವಾಗಿ ಆಗುತ್ತಿವೆ.  ಮನಸ್ಸುಗಳು ತುಂಡಾದಲ್ಲಿ ಅವರಿಗೇ ಲಾಭ. ಇಂತಹ ಉದ್ದೇಶವನ್ನಿಟ್ಟುಕೊಂಡೇ ನಮ್ಮೊಳಗೆ ಒಡಕು  ಮೂಡುವಂತಹ ವಿಚಾರಗಳನ್ನು  ಪ್ರಚಾರಕ್ಕೆ ತರಲಾಗುತ್ತಿದೆ ಎಂದರು. 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಿನ್ಯದಲ್ಲಿ ಮಾ 30ರಿಂದ ಎ.9ವರೆಗೆ ಕೂಟು ಝಿಯಾರತ್ ಕಾರ್ಯಕ್ರಮ

March 28, 2026

ರಾಮನವಮಿ ಉತ್ಸವ; ದಕ್ಷ ಯುವ ಬಳಗ ವತಿಯಿಂದ ಅರ್ಹ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

March 28, 2026

ತೊಕ್ಕೊಟ್ಟುವಿನಲ್ಲಿ ಹತ್ಯೆ ನಡೆಸಿ ಬೆಂಗಳೂರಿಗೆ ತೆರಳಿದ್ರಾ ಹಂತಕರು…?!

March 27, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಈಶ್ವರನ ಹೂದೋಟವೆನಿಸಿದ ಪದ್ಯಾಣದಲ್ಲಿ ಬ್ರಹ್ಮಕಲಶೋತ್ಸವ, ಮಾರ್ಚ್30ರಿಂದ ಏ.7ರವರೆಗೆ ಕಾರ್ಯಕ್ರಮ

By UllalaVaniMarch 28, 20260

ಮಂಗಳೂರು: ಈಶ್ವರನ ಹೂದೋಟ ಎಂದೇ ಬಣ್ಣಿಸಲಾಗುವ ಪ್ರಶಾಂತ, ಪ್ರಕೃತಿಯ ಸೊಬಗು, ಹಸಿರು ಸಿರಿಯ ಮಧ್ಯೆ ಇರುವ ದಕ್ಷಿಣ ಕನ್ನಡ ಜಿಲ್ಲೆಯ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕಿನ್ಯದಲ್ಲಿ ಮಾ 30ರಿಂದ ಎ.9ವರೆಗೆ ಕೂಟು ಝಿಯಾರತ್ ಕಾರ್ಯಕ್ರಮ

March 28, 2026

ರಾಮನವಮಿ ಉತ್ಸವ; ದಕ್ಷ ಯುವ ಬಳಗ ವತಿಯಿಂದ ಅರ್ಹ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

March 28, 2026

ಹಿಟ್ ಅಂಡ್ ರನ್; ಪಾದಚಾರಿಗೆ ಗಂಭೀರ ಗಾಯ, ಕಾರು ವಶಕ್ಕೆ

March 28, 2026
1 2 3 … 1,850 Next
Automatic YouTube Gallery

ಕೌನ್ಸಿಲರ್ ಸುಜಿತ್ ವಿರುದ್ಧ ಸೋಷಿಯಾಲ್ ಮೀಡಿಯಾದಲ್ಲಿ ಬರಹಗಳು ವೈರಲ್

ಸಾಮಾನ್ಯ ಸಭೆಯಲ್ಲಿ ಕೌನ್ಸಿಲರ್ ಸುಜಿತ್ ಮಾಡೂರು ಚರ್ಚಿಸಿದ ಕೊರಗಜ್ಜ ಕ್ಷೇತ್ರದ ಶೀಟ್ ವಿಚಾರ; ಸೋಷಿಯಾಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಬರಹಗಳು ವೈರಲ್

ಕೊರಗಜ್ಜ ಸಮಿತಿ ಮಾಜಿ ಅಧ್ಯಕ್ಷರುಗಳ ಪ್ರತಿಕ್ರಿಯೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೌನ್ಸಿಲರ್ ಸುಜಿತ್ ವಿರುದ್ಧ ಸೋಷಿಯಾಲ್ ಮೀಡಿಯಾದಲ್ಲಿ ಬರಹಗಳು ವೈರಲ್
Now Playing
ಕೌನ್ಸಿಲರ್ ಸುಜಿತ್ ವಿರುದ್ಧ ಸೋಷಿಯಾಲ್ ಮೀಡಿಯಾದಲ್ಲಿ ಬರಹಗಳು ವೈರಲ್
ಸಾಮಾನ್ಯ ಸಭೆಯಲ್ಲಿ ಕೌನ್ಸಿಲರ್ ಸುಜಿತ್ ಮಾಡೂರು ಚರ್ಚಿಸಿದ ಕೊರಗಜ್ಜ ಕ್ಷೇತ್ರದ ...
ಸಾಮಾನ್ಯ ಸಭೆಯಲ್ಲಿ ಕೌನ್ಸಿಲರ್ ಸುಜಿತ್ ಮಾಡೂರು ಚರ್ಚಿಸಿದ ಕೊರಗಜ್ಜ ಕ್ಷೇತ್ರದ ಶೀಟ್ ವಿಚಾರ; ಸೋಷಿಯಾಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಬರಹಗಳು ವೈರಲ್

ಕೊರಗಜ್ಜ ಸಮಿತಿ ಮಾಜಿ ಅಧ್ಯಕ್ಷರುಗಳ ಪ್ರತಿಕ್ರಿಯೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಾ.30ರಿಂದ ಏ.8ರವರೆಗೆ ಕಿನ್ಯದಲ್ಲಿ ಕೂಟು ಝಿಯಾರತ್
Now Playing
ಮಾ.30ರಿಂದ ಏ.8ರವರೆಗೆ ಕಿನ್ಯದಲ್ಲಿ ಕೂಟು ಝಿಯಾರತ್
ಕಿನ್ಯದಲ್ಲಿ ಕೂಟು ಝಿಯಾರತ್ ಕಾರ್ಯಕ್ರಮ; ಮಾ.30ರಿಂದ ಏ.8ರವರೆಗೆ ಧಾರ್ಮಿಕ ಮತ ...
ಕಿನ್ಯದಲ್ಲಿ ಕೂಟು ಝಿಯಾರತ್ ಕಾರ್ಯಕ್ರಮ; ಮಾ.30ರಿಂದ ಏ.8ರವರೆಗೆ ಧಾರ್ಮಿಕ ಮತ ಪಂಡಿತರಿOದ ಉಪನ್ಯಾಸ

ತೊಕ್ಕೊಟ್ಟುವಿನಲ್ಲಿ ಕಿನ್ಯ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಬೂಸ್ವಾಲಿ ಹಾಜಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d