Site icon Ullalavani

ಉಳ್ಳಾಲದ ಹಲವು ಪ್ರಕರಣಗಳ ಆರೋಪಿ ಚಟ್ಟಂಚಾಲು ಬಳಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಹಿದಾಯತ್
ಕಾಸರಗೋಡು ಸಮೀಪದ ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಚಟ್ಟಂಚಾಲು ಪ್ರದೇಶದಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ 5ಕ್ಕಿಂತಲೂ ಅಧಿಕ ಪ್ರಕರಣ ಹೊಂದಿದ್ದ ಆರೋಪಿ ಕಾಸರಗೋಡು ಸಮೀಪದ ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಚಟ್ಟಂಚಾಲು ಪ್ರದೇಶದಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಸೋಮವಾರ ಪತ್ತೆಯಾಗಿದೆ.
ಚೆಂಬುಗುಡ್ಡೆ ನಿವಾಸಿ ಹಿದಾಯತ್ (28) ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಾಸರಗೋಡು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೇ.5 ರಂದು ಶವಮಹಜರು ಪರೀಕ್ಷೆ ನಡೆಯಲಿದೆ. ಬಳಿಕವಷ್ಟೇ ಸಾವಿನ ಕಾರಣ ತಿಳಿದುಬರಬಹುದು. ಹಿದಾಯತ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ, ಕಳವು, ಜಾನುವಾರು ಕಳವು ಕುರಿತು 5 ಕ್ಕಿಂತಲೂ ಅಧಿಕ ಪ್ರಕರಣಗಳಿವೆ. ಉಪ್ಪಳದಲ್ಲಿ ಕೆಲಸಕ್ಕಿದ್ದ ಹಿದಾಯತ್ ಮೇ.1 ರಿಂದ ನಾಪತ್ತೆಯಾಗಿದ್ದರೆಂದು ತಿಳಿದುಬಂದಿದೆ. ಎ.3 ರಂದು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಚಟ್ಟಂಚಾಲು ಎಂಬಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಹಿದಾಯತ್ ಮೊಬೈಲ್ ಮಾತ್ರ ಪತ್ತೆಯಾಗಿದ್ದು, ಅದರಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿಲ್ಲ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Exit mobile version