Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಕುಟುಂಬದ ಜೀವದೊಂದಿಗೆ ಹೆಣ್ಣಿನ ಜೀವನಕ್ಕೂ ದಾರಿ ಉಳ್ಳಾಲ ಮುಸ್ಲಿಂ ಕುಟುಂಬದ ಮಾದರಿ ಸೇವೆ!

UllalaVaniBy UllalaVaniJuly 18, 2021No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಕುಟುಂಬದಲ್ಲಿ ಎಲ್ಲರೂ ಇದ್ದಾರೆ, ಆದರೆ ಒಂದೊಂದು ರುಪಾಯಿಗೂ ಪರದಾಡುವ ಆ ತಾಯಿ ಮಗಳ ಪಾಲಿಗೆ ಅತ್ತೆ, ಒಂದಿಬ್ಬರನ್ನು ಬಿಟ್ಟರೆ ಮತ್ಯಾರೂ ಇಲ್ಲ, ಆದರೆ ಅವರ ಕೈ ಕೂಡಾ ಖಾಲಿಖಾಲಿ. ಒಪ್ಪೊತ್ತಿನ ಆಹಾರಕ್ಕೂ ತಾತ್ವಾರ ಇರುವಾಗ ಮಗಳ ಮದುವೆ ಮಾಡೋದು ಹೇಗೆ? ಉಳಿದಿದ್ದು ಜೀವನಕ್ಕೆ ವಿದಾಯವೊಂದೇ ಮಾರ್ಗ. ಈ ಸಂದರ್ಭದಲ್ಲೇ ಕುಟುಂಬಕ್ಕೆ ಯಾರೂ ಅಲ್ಲದ, ಕನಿಷ್ಟಪಕ್ಷ ಸ್ವಧರ್ಮೀಯರೂ ಅಲ್ಲದ ಕುಟುಂಬ! ತಾಯಿ-ಮಗಳ ಜೀವ ಉಳಿಸುವ ಜೊತೆ ಮುಂದಿನ ಜೀವನಕ್ಕೂ ದಾರಿ ತೋರಿದೆ ಉಳ್ಳಾಲದ ಮುಸ್ಲಿಂ ಕುಟುಂಬ!
ಇಂಥದ್ದೊಂದು ಮಾನವೀಯ, ಹೃದಯಸ್ಪರ್ಶಿ, ಸೌಹಾರ್ದತೆಗೆ ಭದ್ರ ಬುನಾದಿಯಾಗುವಂತಹ ಪ್ರಸಂಗವೊಂದು ಉಳ್ಳಾಲದ ಅಲೇಕಳದಲ್ಲಿ ಭಾನುವಾರ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿ ಸ್ವಂತ ಮನೆಯಲ್ಲಿ ವಾಸವಿದ್ದ ಕುಟುಂಬವದು. ಗೀತಾ ಅವರ ಪತಿ ಕೆಲವು ವರ್ಷಗಳ ಹಿಂದೆಯೇ ದುರಂತ ಸಾವು ಕಂಡಿದ್ದಾರೆ. ದಂಪತಿಗೆ ಇಬ್ಬರು ಹೆಣ್ಮಕ್ಕಳು. ವರ್ಷದ ಹಿಂದೆ ಹಿರಿಯ ಮಗಳಿಗೆ ಮದುವೆಯಾಗಿ ಸಾಲದಿಂದ ಹೊರಬರಲು ಎಲ್ಲವನ್ನೂ ಮಾರಿ, ಖಾಲಿ ಕೈಯೊಂದಿದೆ ನಾಲ್ಕು ತಿಂಗಳ ಹಿಂದೆ ಗೀತಾ ತಾಯಿ, ಮಗಳು ಕವನಾ, ಅತ್ತೆ ರೇಣುಕಾ ಮಂಚಿಲಕ್ಕೆ ಬಂದಿದ್ದಾರೆ. ರೇಣುಕಾ ಅವರೇ ಅಲ್ಲಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರೂ, ಕರೊನಾ ಎರಡನೇ ಅಲೆಯಿಂದ ಅದೂ ಇಲ್ಲದಂತಾಗಿ ಜೀವನವೇ ಕಷ್ಟವಾಗಿದೆ. ಆದರೆ ಯಾರೊಬ್ಬರ ಪರಿಚಯವೂ ಇಲ್ಲದ ಕಾರಣ ಕಣ್ಣೀರಲ್ಲೇ ಕೈತೊಳೆಯುತ್ತಿದ್ದರು.
ಮೆಹಂದಿ ಜೊತೆ ಮದುವೆಯ ಜವಾಬ್ದಾರಿ!
ಎಂ.ಕೆ.ಕುಟುಂಬದಲ್ಲಿರುವ ಆರ್ಥಿಕವಾಗಿ ಹಿಂದುಳಿದ ಹೆಣ್ಮಗಳ ಮದುವೆಗೆ ಕುಟುಂಬಸ್ಥರಿಂದಲೇ ಹಣ ಸಂಗ್ರಹಿಸಿ ಲಕ್ಷ ರೂಪಾಯಿ ನೀಡುತ್ತಿದೆ. ಟ್ರಸ್ಟ್ ಮಾದರಿಯಲ್ಲಿ ಕಾರ್ಯಾಚರಿಸುತ್ತಿದ್ದು, ರಕ್ತದಾನ ಶಿಬಿರವನ್ನೂ ನಡೆಸಿ ಜಿಲ್ಲಾಡಳಿತದಿಂದ ಪುರಸ್ಕಾರ ಪಡೆದಿದೆ. ಅಬ್ದುಲ್ ರಹ್ಮಾನ್ ಕುಟುಂಬದ ಮ್ಯಾರೇಜ್ ಫಂಡ್ ಅಧ್ಯಕ್ಷರಾಗಿದ್ದಾರೆ. ಕುಟುಂಬದ ಸದಸ್ಯ ರಝಾಕ್‍ಗೆ ಮದುಮಗಳು ಕವನಾಳ ಚಿಕ್ಕಪ್ಪ ಸುರೇಶ್ ಪರಿಚಯಸ್ಥರಾಗಿದ್ದಾರೆ. ಇದರ ಆಧಾರದಲ್ಲಿ ಸುರೇಶ್ ಅವರು, ರಝಾಕ್‍ರನ್ನು ಕೆಲವು ದಿನಗಳ ಹಿಂದೆ ಭೇಟಿಯಾಗಿ ಗೀತಾ ಅವರ ಪರಿಸ್ಥಿತಿ ಮತ್ತು ಕವನಾಳ ಮದುವೆಯ ತಿಳಿಸುತ್ತಾರೆ. ತಕ್ಷಣ ಸ್ಪಂದಿಸಿ ರಝಾಕ್, ಮನೆಗೆ ಅಡುಗೆ ಅನಿಲ ಮತ್ತು ಪಡಿತರ ವ್ಯವಸ್ಥೆ ಮಾಡಿ ಹೊಟ್ಟೆ ತಣಿಸುತ್ತಾರೆ.
ರಝಾಕ್ ಅವರು ಮದುವೆಯ ವಿಚಾರವನ್ನು ಮ್ಯಾರೇಜ್ ಫಂಡ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಮತ್ತು ಹಂಝ ಅವರ ಬಳಿ ಹೇಳಿದ್ದರಿಂದ ಅವರು ಗೀತಾರ ಮನೆಗೆ ಭೇಟಿ ನೀಡುತ್ತಾರೆ. ಇನ್ನೇನು ಮದುವೆಗೆ ಕೇವಲ ಹತ್ತು ದಿನಗಳ ಮಾತ್ರ ಇದ್ದು, ನಮ್ಮಲ್ಲಿ ನಯಾಪೈಸೆ ಇಲ್ಲ, ಅದನ್ನು ಮಾಡಲೂ ಸಾಧ್ಯವಿಲ್ಲ. ಕುಟುಂಬಸ್ಥರು ಹತ್ತಿರ ಬರುವುದಿಲ್ಲ. ಮರ್ಯಾದೆ ಉಳಿಸಲು ನಾವು ಸಾವಿನ ದಾರಿ ಕಂಡುಕೊಳ್ಳಲು ಮುಂದಾಗಿದ್ದೇವೆ ಎನ್ನುತ್ತಾರೆ. ಮನಕರಗಿದ ರಹ್ಮಾನ್ ಅವರು, ಅವರಿಗೆ ಮದುವೆಯ ಖರ್ಚುವೆಚ್ಚದ ಭರವಸೆ ನೀಡಿ, ಕುಟುಂಬಸ್ಥರೊಡನೆ ಮತ್ತು ಶಾಸಕ ಖಾದರ್ ಜೊತೆಯೂ ಚರ್ಚಿಸುತ್ತಾರೆ. ಖಾದರ್ ಅವರೂ ಧನಸಹಾಯ ನೀಡುತ್ತಾರೆ.
ಅದರಂತೆ ಶನಿವಾರ ಎಂ.ಕೆ.ಕುಟುಂಬಸ್ಥರಾದ ಹಂಝ ಅವರ ಮನೆಯಲ್ಲೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಭರ್ಜರಿ ಮೆಹಂದಿಯೂ ಶಾಸ್ತ್ರವೂ ನಡೆದಿದೆ. ಭಾನುವಾರ ತಲಪಾಡಿ ದೇವಿಪುರದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮದುವೆ ಕಾರ್ಯವೂ ಮುಗಿದಿದೆ. ಹುಡುಗಿಯ ಕಡೆಯಿಂದ ತಾಯಿ, ಅತ್ತೆ, ಚಿಕ್ಕಪ್ಪ, ಬಾವ ಸಹಿತ ಕೇವಲ ಆರು ಮಂದಿ ಮಾತ್ರ ಇದ್ದರೆ, ವರನ ಕಡೆಯಿಂದ ಏಳು ಮಂದಿಯಿದ್ದರೆ, ಎಂ.ಕೆ. ಕಡೆಯಿಂದ ಅಬ್ದುಲ್ ರಹ್ಮಾನ್ ಮತ್ತು ರಝಾಕ್ ಸಹಿತ ಮತ್ತೆ ಒಂದಿಬ್ಬರು ಮಾತ್ರ ಇದ್ದರು. ಮದುವೆ ಶಾಸ್ತ್ರದ ಬಳಿಕ ಕವನಾ ಪತಿಯೊಂದಿಗೆ ಕೇರಳ ತಲುಪಿದ್ದಾಳೆ. ಇದೆಲ್ಲವನ್ನೂ ಕಂಡ ಕವನಾಳ ಚಿಕ್ಕಪ್ಪ ಕಣ್ಣೀರಾದರು. ಚಿನ್ನಾಭರಣ, ವಸ್ತ್ರ, ಮೆಹಂದಿಯ ಊಟೋಪಚಾರ, ಮದುವೆಯ ರ್ಖಚನ್ನು ಖಾದರ್‍ರ ನೆರವು ಬಿಟ್ಟರೆ ಉಳಿದೆಲ್ಲವನ್ನೂ ಎಂ.ಕೆ.ಕುಟುಂಬ ಭರಿಸಿದೆ. ಅತ್ತ ಮದುಮಗಳು ಕರ್ನಾಟಕ ಗಡಿ ದಾಡುತ್ತಲೇ, ಇತ್ತ ಮಸಣ ಸೇರಬೇಕಿದ್ದ ಒಂದು ಜೀವ ನವಜೀವನಕ್ಕೂ ಕಳುಹಿಸಿ, ಹೆತ್ತೊಡಳ ಕಣ್ಣೀರು ಒರೆಸಿ ಮತ್ತೊಂದು ಜೀವ ಉಳಿಸಿದ ತೃಪ್ತ ಭಾವನೆ ಎಂ.ಕೆ.ಕುಟುಂಬಸ್ಥರ ಮುಖದಲ್ಲಿ ಕಂಡು ಬಂದಿದೆ.

`ಸುರೇಶ್ ಅವರು ಗೀತಾ ಮನೆಯ ಪರಿಸ್ಥಿತಿಯ ಬಗ್ಗೆ ತಿಳಿಸಿದಾಗ ನಾವಲ್ಲಿಗೆ ಭೇಟಿ ಕೊಟ್ಟೆವು, ಅಲ್ಲಿನ ಚಿಂತಾಜನಕ ಸ್ಥಿತಿ ಕಂಡು ತುಂಬಾ ಖೇದವಾಯಿತು. ಅಲ್ಲದೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ವಿಚಾರ ತಿಳಿಯಿತು. ಈ ಹಿನ್ನೆಲೆಯಲ್ಲಿ ಕುಟುಂಬಕ್ಕಾಗಿ ಅಸ್ತಿತ್ವಕ್ಕೆ ತಂದ ಮ್ಯಾರೇಜ್ ಫಂಡ್ ಹಣ ಕವನಾಳ ಮೆಹಂದಿ, ಮದುವೆ ಖರ್ಚಿಗೆ ಮಾಡಿ ಮನೆಯವರಂತೆ ನೋಡಿಕೊಂಡಿದ್ದೇವೆ’
ಅಬ್ದುಲ್ ರಹ್ಮಾನ್, ಎಂ.ಕೆ.ಮ್ಯಾರೇಜ್ ಫಂಡ್ ಅಧ್ಯಕ್ಷ

`ನಮ್ಮ ಕೈಯಲ್ಲಿ ನಯಾ ಪೈಸೆಯೂ ಇಲ್ಲ, ನಿಗದಿತ ದಿನದಂದು ಮಗಳ ಮದುವೆ ಮಾಡಿಸಲು ಸಾಧ್ಯವಿಲ್ಲ, ಆದರೆ ಮಾನ ಉಳಿಸುವುದು ಅನಿವಾರ್ಯವಾಗಿತ್ತು. ನಾವಿಬ್ಬರು ಪ್ರಾಣ ತ್ಯಾಗ ಮಾಡುವುದೊಂದೇ ದಾರಿಯಾದಾಗ ಯಾರೂ ಮಾಡಲಾಗದಂತಹ ಸಹಾಯ ಎಂ.ಕೆ.ಕುಟುಂಬಸ್ಥರು ಮಾಡಿದ್ದಾರೆ’
ಗೀತಾ, ವಿವಾಹಿತೆ ಕವನಾಳ ತಾಯಿ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರ್ ಅಲ್ ಹಿದಾಯ ಜುಮಾ ಮಸ್ಜಿದ್‌ನಲ್ಲಿ ಇಫ್ತಾರ್ ಕೂಟ

March 19, 2026

ಉಳ್ಳಾಲ ಸೆಂಟ್ರಲ್ ಕಮಿಟಿಯಿಂದ ಬೃಹತ್ ಸೌಹಾರ್ದ ಇಫ್ತಾರ್ ಕೂಟ

March 19, 2026

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕೋಟೆಕಾರ್ ಅಲ್ ಹಿದಾಯ ಜುಮಾ ಮಸ್ಜಿದ್‌ನಲ್ಲಿ ಇಫ್ತಾರ್ ಕೂಟ

By UllalaVaniMarch 19, 20260

ಕೋಟೆಕಾರ್: ಅಲ್ ಹಿದಾಯ ಜುಮಾ ಮಸ್ಜಿದ್, ಕರ್ನಾಟಕ ಮುಸ್ಲಿಂ ಜಮಾತ್, ಎಸ್ ವೈ ಎಸ್ ಹಾಗೂ ಎಸ್ಸೆಸ್ಸಫ್ ಸಂಘಟನೆಗಳ ವತಿಯಿಂದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಾ.22ರಂದು ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ-ತಾರಸಿ ತೋಟ ತರಬೇತಿ

March 19, 2026

ಉಳ್ಳಾಲ ಸೆಂಟ್ರಲ್ ಕಮಿಟಿಯಿಂದ ಬೃಹತ್ ಸೌಹಾರ್ದ ಇಫ್ತಾರ್ ಕೂಟ

March 19, 2026

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಚುಟುಕು ಕವಿಗೋಷ್ಠಿ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

March 19, 2026
1 2 3 … 1,838 Next
Automatic YouTube Gallery

ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ

ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
Now Playing
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ...
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
Now Playing
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ...
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ಜೈಲಿಗಟ್ಟಬೇಕು

ಕುತ್ತಾರಿನಲ್ಲಿ ಡಿವೈಎಫ್‌ಐ ಬಹಿರಂಗ ಸಭೆಯಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಕಿಡಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d