UN networks
ಉಳ್ಳಾಲ: ಬಿಜೆಪಿ ಆಡಳಿತದಲ್ಲಿರುವ ಸಂದರ್ಭ ಕಾಂಗ್ರೆಸ್ ನವರಿಗೆ ಪ್ರತಿಭಟನೆ ನಡೆಸಲು ಎತ್ತು ಆದರೂ ಸಿಕ್ಕಿದೆ. ಅದೇ ಕಾಂಗ್ರೆಸ್ ಆಡಳಿತದಲ್ಲಿರುತ್ತಿದ್ದರೆ ಎತ್ತುಗಳೆಲ್ಲ ಕಸಾಯಿಖಾನೆಯಲ್ಲಿರುತ್ತಿದ್ದವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.
ಮಂಗಳೂರು ಮಂಡಲ ಮಂಜನಾಡಿ ಮಹಾಶಕ್ತಿಕೇಂದ್ರದ ನರಿಂಗಾನ ಶಕ್ತಿಕೇಂದ್ರದ ತೌಡುಗೋಳಿ ಬೂತ್ ಸಮಿತಿ ಅಧ್ಯಕ್ಷರ ಮನೆಯಲ್ಲಿ ನಡೆದ ನಾಮಫಲಕ ಅನಾವರಣ ಸಮಾರಂಭದಲ್ಲಿ ನಾಮಫಲಕ ಅನಾವರಣಗೊಳಿಸಿ, ಬಳಿಕ ತೌಡುಗೋಳಿ ಅಂಗನವಾಡಿ ಕೇಂದ್ರದ ಬಳಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು, ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು,ಬಿಜೆಪಿ ಕಾರ್ಯದರ್ಶಿ ಜಯಶ್ರೀ ಕರ್ಕೇರ, ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ಹೇಮಂತ್ ಶೆಟ್ಟಿ ದೇರಳಕಟ್ಟೆ , ನವೀನ್ ಪಾದಲ್ಪಾಡಿ , ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಮಂಡಲ ಮಾಜಿ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್ ಹಾಗೂ ಚಂದ್ರಶೇಖರ್ ಉಚ್ಚಿಲ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಟಿ. ಸುವರ್ಣ, ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ. ರಾಜಾರಾಮ್ ಭಟ್, ರೈಲ್ವೇ ನಿಗಮ ಮಾಜಿ ನಿರ್ದೇಶಕ ಚಂದ್ರಹಾಸ ಕೆ. ಅಡ್ಯಂತಾಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಕಂಬಳಿ ಹಾಗೂ ವಿನಯ್ ನಾಯ್ಕ್, ಬಿಜೆಪಿ ಮುಖಂಡ ಸೀತಾರಾಮ ಶೆಟ್ಟಿ ದಡಸ್, ಕ್ಷೇತ್ರ ಮಾಜಿ ಪ್ರಧಾನ ಕಾರ್ಯದರ್ಶಿ ಯಶವಂತ್ ಅಮೀನ್ ಹಾಗೂ ಕ್ಯಾಂಪೆÇ್ಕ ನಿರ್ದೇಶಕ ಮಹೇಶ್ ಚೌಟ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೌಡುಗೋಳಿ ಬೂತ್ ಸಮಿತಿ ಅಧ್ಯಕ್ಷ ನವೀನ್ ಶೆಟ್ಟಿ ಮಂಗಲ್ಪಾಡಿ ಅವರನ್ನು ಸನ್ಮಾನಿಸಲಾಯಿತು.
ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಸ್ವಾಗತಿಸಿದರು. ದಿ. ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಬೆಂಗಳೂರಿನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚಂದ್ರಹಾಸ್ ಸರ್ಕುಡೇಲು ಹಾಗೂ ಜಿಲ್ಲಾ ರೈತಮೋರ್ಚಾ ಕಾರ್ಯದರ್ಶಿ ಪ್ರೇಮಾನಂದ ರೈ ನೆತ್ತಿಲ ಕಾರ್ಯಕ್ರಮ ನಿರೂಪಿಸಿದರು.