Site icon Ullalavani

ಮುಡಿಪು: ಸಮುದಾಯದ ಜನಪ್ರತಿನಿಧಿಗಳನ್ನು ಅಭಿನಂದನಾ ಕಾರ್ಯಕ್ರಮ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮುಡಿಪು:ಗ್ರಾಮ ಪಂಚಾಯತ್ ಸದಸ್ಯರು ಸಮರ್ಪಕವಾಗಿ ತಮ್ಮ ಜವಾಬ್ದಾರಿ ನಿರ್ವಹಿಸುವ ಮೂಲಕ ಭ್ರಷ್ಟಾಚಾರ ತೊಡೆದು ಹಾಕಲು ಪ್ರಯತ್ನಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ಜೆ.ಆರ್.ಲೋಬೊ ಅಭಿಪ್ರಾಯಪಟ್ಟರು.

ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಮಂಗಳೂರು ದಕ್ಷಿಣ ವಾರ್ಡ್ ಸಮಿತಿಯಿಂದ ಭಾನುವಾರ ಮುಡಿಪು ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರದ ಸಭಾಂಗಣದಲ್ಲಿ ಕೆಥೊಲಿಕ್ ಸಮುದಾಯದ ಜನಪ್ರತಿನಿಧಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ಆಯಾ ವಾರ್ಡಿನ ಮತದಾರರು ಅಪಾರ ನಂಬಿಕೆಗಳನ್ನು ಇಟ್ಟುಕೊಂಡು ಚುನಾಯಿಸುವ ಮೂಲಕ ಜವಾಬ್ದಾರಿ ನೀಡುತ್ತಾರೆ. ಐದು ವರ್ಷ ತನಗಿರುವ ಅವಧಿಯಲ್ಲಿ ವಾರ್ಡ್‍ಗೆ ಅಗತ್ಯವಿರುವ ಕೆಲಸಗಳನ್ನು ಇಲಾಖೆಗಳು, ರಾಜಕಾರಣಿಗಳ ಸಹಕಾರದಿಂದ ನಿರ್ವಹಿಸಿ ಮತದಾರರ ವಿಶ್ವಾಸ ಗಳಿಸಬೇಕು. ದೊಡ್ಡ ಕೆಲಸಗಳ ನಿರ್ವಹಣೆ ಗ್ರಾಮ ಪಂಚಾಯತ್ ಸದಸ್ಯರಿಂದ ಆಗದ ಮಾತು. ಈ ನಿಟ್ಟಿನಲ್ಲಿ ಅಂತಹ ಯೋಚನೆಗಳನ್ನು ಇಟ್ಟುಕೊಂಡು ಗ್ರಾಮಸ್ಥರಿಗೆ ಭರವಸೆ ಕೊಡುವ ಮುನ್ನ ಯೋಚಿಸುವುದು ಒಳಿತು ಎಂದರು.

ಕೆಥೊಲಿಕ್ ಸಭಾ ಕೇಂದ್ರೀಯ ಸಮಿತಿ ರಾಜಕೀಯ ಸಂಚಾಲಕ ಜೆರಾಲ್ಡ್ ಡಿಕೋಸ್ತ, ಕೆಥೊಲಿಕ್ ಸಭಾ ಕೇಂದ್ರೀಯ ಸಮಿತಿ ಅಧ್ಯಕ್ಷೆ ಪ್ಲೇವಿ ಡಿ.ಸೋಜ, ಮಾಜಿ ಅಧ್ಯಕ್ಷ ವಲೇರಿಯನ್ ಡಿಸೋಜ ಮಜಿಕಟ್ಟ ಪಾವೂರು, ಪಾನೀರ್ ಚರ್ಚ್ ಧರ್ಮಗುರು ವಿಕಾರ್ ಡೆನ್ನಿಸ್ ಮೋರಸ್, ಮಾರ್ಸೆಲ್ ಡಿಸೋಜ, ರೋಶನ್ ಡಿ’ಸೋಜ, ಕೆಥೊಲಿಕ್ ಸಭಾ ನಿರ್ದೇಶಕ ರೆ.ಫಾ.ಜೆ.ಬಿ.ಸಲ್ದಾನ, ಸರ್ಕಾರಿ ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹಾ,
ಕೆಥೊಲಿಕ್ ಸಭಾ ಮಂಗಳೂರು ದಕ್ಷಿಣ ಅಧ್ಯಕ್ಷ ವಿನ್ಸೆಂಟ್ ಡಿಸೋಜ ಧರ್ಮನಗರ ಬೋಳಿಯಾರ್ ಸ್ವಾಗತಿಸಿದರು. ಜೋಸೆಫ್ ಡಿಸೋಜ ಸನ್ಮಾನಿತರ ಹೆಸರು ಓದಿದರು. ಕಾರ್ಯದರ್ಶಿ ಸುನಿಲ್ ಡಿಸೋಜ ಬೋಳ ವಂದಿಸಿದರು. ಫೆಲಿಕ್ಸ್ ಅಮ್ಮೆಂಬಳ ಕಾರ್ಯಕ್ರಮ ನಿರೂಪಿಸಿದರು.

Exit mobile version