Site icon Ullalavani

ರಿಕ್ಷಾ ಚಾಲಕನಾದ ಶಾಸಕ. ಯು.ಟಿ ಖಾದರ್!

ಉಳ್ಳಾಲ: ಬಸ್, ಜೆಸಿಬಿ ಚಲಾಯಿಸಿ ಒಂದೊಮ್ಮೆ ಸುದ್ಧಿಯಾಗಿದ್ದ ಮಂಗಳೂರು ಕ್ಷೇತ್ರದ ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ರಿಕ್ಷಾ ಚಲಾಯಿಸುವ ಮೂಲಕ ಮತ್ತೊಮ್ಮೆ ಸುದ್ಧಿಯಾಗಿದ್ದಾರೆ.


ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬವರ ಮಳೆಯಿಂದ ಹಾನಿಗೀಡಾದ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಇವರ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಪ್ರಶಾಂತ್ ಕಾಜವ, ಯೂಸುಫ್ ಪಾನೇಲ, ರೊನಾಲ್ಡ್ ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದರು.

Exit mobile version