UN networks
ಉಳ್ಳಾಲ: ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಯ್ಯಿದ್ ಮದನಿ ಪ್ರೌಢಶಾಲೆ ಯಲ್ಲಿ ಬಾರತದ ಸಂವಿಧಾನದ ೭೪ನೇ ವರ್ಷಾಚರಣೆಯನ್ನು ಉಳ್ಳಾಲದ ಸಯ್ಯಿದ್ ಮದನಿ ದರ್ಗಾದ ಪ್ರಧಾನ ಕಾರ್ಯ ದರ್ಶಿ ತ್ವಾಹಾ ಹಾಜಿ ಧ್ವಜಾರೋಹಣಗೈದರು.
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ವರೆಷ ಭೂಷಣ ಧರಿಸಿದ ವಿದ್ಯಾರ್ಥಿಗಳು ಎಲ್ಲರ ಮನ ಗೆದ್ದರು. ಸಮಾರಂಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಯು.ಎನ್.ಇಬ್ರಾಹಿಂ, ಶಾಲಾ ಸಂಚಾಲಕ ಇಸ್ಮಾಯಿಲ್ ಹಾಜಬ್ಬ, ಸಯ್ಯಿದ್ ಮದನಿ ಅರೆಬಿಕ್ ಟ್ರಸ್ಟನ ಉಪಾಧ್ಯಕ್ಷ ಎಂ.ಹೆಚ್ ಇಬ್ರಾಹಿಂ, ಕಾರ್ಯ ದರ್ಶಿ ಅಲ್ತಾಫ್ ಯು ಹೆಚ್, ಕೋಶಾಧಿಕಾರಿ ಕರೀಂ ಯು. ಹೆಚ್, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಝೈನುದ್ದೀನ್ ಉಪಸ್ಥಿತರಿದ್ದರು
ಶಾಲಾ ಮುಖ್ಯ ಶಿಕ್ಷಕಾರಾದ ಕೆ.ಎಂ.ಕೆ ಮಂಜನಾಡಿ ಸ್ವಾಗತಿಸಿದರು. ಶಿಕ್ಷಕಿ ಶಕೀಲ ವಂದಿಸಿದರು.




