ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ : ರಾಷ್ಟ್ರೀಯ ಸೇವಾ ಯೋಜನೆಯ ಕನಸು ಈ ಸಮಾಜದ ಸುಧಾರಣೆ ಆಗಿದೆ. ಯುವಶಕ್ತಿ ನಮ್ಮ ದೇಶದ ನಿಜವಾದ ಸಂಪನ್ಮೂಲ. ಈ ದೇಶದ ಶಕ್ತಿ. ಯುವಶಕ್ತಿ ಮನಸ್ಸು ಮಾಡಿದರೆ ಈ ದೇಶದ ಚಿತ್ರಣವನ್ನೇ ಬದಲಿಸಬಹುದು ಎಂದು ಮಂಗಳೂರಿನ ಕೆನರಾ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಇಗ್ನೇಶಿಯಸ್ ನೇವಿಲ್ ನೊರೊನ್ಹಾ ಅಭಿಪ್ರಾಯಪಟ್ಟರು.
ಅವರು ಸೋಮವಾರ ಉಳ್ಳಾಲದ ಕೆ. ಪಾಂಡ್ಯರಾಜ್ ಬಲ್ಲಾಳ್ ಆಡಿಟೋರಿಯಂನಲ್ಲಿ ಕೆ. ಪಾಂಡ್ಯರಾಜ ಬಲ್ಲಾಳ್ ನರ್ಸಿಂಗ್ ಇನ್ಸ್ಟಿಟ್ಯೂಟ್ ಹಾಗೂ ಕಾಲೇಜ್ ಆಫ್ ನರ್ಸಿಂಗ್ನ ಜಂಟಿ ಆಶ್ರಯದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಎನ್ಎಸ್ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕಿ ಡಾ. ಪ್ರಿಯಾ ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು.
ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಕೈನಿ ಸಿಸಿಲಿಯಾ, ಪಾಂಡ್ಯರಾಜ ಬಲ್ಲಾಳ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಖೇಶ್ ರಾವ್, ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ಸೋನಿಯಾ ಸೆಬೆಸ್ಟಿಯನ್ ಉಪಸ್ಥಿತರಿದ್ದರು.
ಎನ್ಎಸ್ಎಸ್ ವಿದ್ಯಾರ್ಥಿನಿ ಮರಿಯಾ ಬೆನೆಡಿಕ್ಟ್ ಸ್ವಾಗತಿಸಿದರು. ಎನ್ಎಸ್ಎಸ್ ಸಂಯೋಜನಾ ಅ„ಕಾರಿ ಚೈತ್ರಾ ನಾಯಕ್ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಎಲಿಝೆಬೆತ್ ರಾಯ್ ಹಾಗೂ ಬೆಟ್ಟಿ ಬಾಬು ಕಾರ್ಯಕ್ರಮ ನಿರೂಪಿಸಿದರು. ಜಿಸಾ ಜೋಸ್ ಅತಿಥಿಗಳನ್ನು ಪರಿಚಯಿಸಿದರು.
ಲಯಾ ಕೆ.ವಿ. ವಂದಿಸಿದರು.