Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

‘ಉಳ್ಳಾಲವಾಣಿ’ ಇಂಪ್ಯಾಕ್ಟ್: ಪಾವೂರು ಗ್ರಾಮದ ಹೆಣ್ಮಕ್ಕಳ ಸಮಸ್ಯೆಗೆ ದಕ್ಕಿದ ನ್ಯಾಯ: ಶೌಚಾಲಯ ನಿರ್ಮಾಣಕ್ಕೆ ಸರ್ವೇ ನಡೆಸಲು ತಾ.ಪಂ.ಗೆ ಆದೇಶ

UllalaVaniBy UllalaVaniAugust 27, 2024Updated:August 27, 2024No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಶೌಚಾಲಯ ಸಮಸ್ಯೆಯ ವಿಚಾರದಲ್ಲಿ ಪಾವೂರು ಗ್ರಾಮದ ಹೆಣ್ಮಕ್ಕಳ ಸಮಸ್ಯೆಗೆ ಸ್ಪಂದಿಸಿ ‘ಉಳ್ಳಾಲವಾಣಿ’ ಪ್ರಕಟಿಸಿದ್ದ ವರದಿಗೆ ಕೊನೆಗೂ ಆಡಳಿತ ವರ್ಗ ಸ್ಪಂದಿಸಿದ್ದು, ಶೌಚಾಲಯ ರಹಿತ ಮನೆಗಳ ಸರ್ವೇ ನಡೆಸಿ ವರದಿ ನೀಡುವಂತೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶಿಸಿದ್ದಾರೆ.

‘ಉಳ್ಳಾಲವಾಣಿ’ ಪ್ರಕಟಿಸಿದ್ದ ವರದಿಯನ್ನು ಉಲ್ಲೇಖಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಮಾಡಿದ್ದು, ಸಮಗ್ರ ಸರ್ವೇ ನಡೆಸಲು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ. ಶೌಚಾಲಯವೇ ಇಲ್ಲದೇ ಬಯಲು ಬಹಿರ್ದೆಸೆಗೆ ಹೋಗುತ್ತಿದ್ದ ಮಹಿಳೆಯರು, ಮಕ್ಕಳಿಗೆ ಪ್ರತಿಯೊಂದು ಮನೆಗಳಲ್ಲಿ ಶೀಘ್ರದಲ್ಲೇ ಶೌಚಾಲಯ ನಿರ್ಮಿಸಿ ವರದಿ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಗೃಹ ಶೌಚಾಲಯದ ಪ್ರಗತಿಯನ್ನು ತ್ವರಿತವಾಗಿ ಸಾಧಿಸಲು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ಮತ್ತು ಕಾರ್ಯಾದೇಶ ವಿತರಣೆ ಪೂರ್ಣಗೊಂಡ ನಂತರ ವಾರಕ್ಕೊಮ್ಮೆ ಪ್ರತಿನಿತ್ಯ ಕಡ್ಡಾಯವಾಗಿ ಶೌಚಾಲಯ ನಿರ್ಮಾಣದ ಕುರಿತು ತಾಲೂಕು ಹಂತದಲ್ಲಿ ಮೇಲ್ವಿಚಾರಣೆ ನಡೆಸುವುದು ಹಾಗೂ ಆ.27 ರಿಂದ ಸೆ.3 ರ ಒಳಗೆ ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಟ್ಟು ಹೋಗಿರುವ ಶೌಚಾಲಯ ರಹಿತ ಮನೆಗಳನ್ನು ಗುರುತಿಸಲು ಹಾಗೂ ಶೌಚಾಲಯ ನಿರ್ಮಿಸಲು ಸ್ಥಳದ ಲಭ್ಯತೆಯಿಲ್ಲದಿರುವ ಕುಟುಂಬಗಳನ್ನು ಗುರುತಿಸಲು ಮನೆ ಮನೆ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.

ಇದು ‘ಉಳ್ಳಾಲವಾಣಿ’ ವರದಿ ಬಿಗ್ ಇಂಪ್ಯಾಕ್ಟ್!

ದೇಶ ಬಯಲುಶೌಚ ಮುಕ್ತ ಎಂದು ಪ್ರಧಾನಿಯವರು ಹೇಳಿಕೆ ನೀಡಿ ಐದು ವರ್ಷಗಳು ಕಳೆದಿದ್ದರೂ, ಉಳ್ಳಾಲ ತಾಲೂಕು ವ್ಯಾಪ್ತಿಗೆ ಬರುವ ಪಾವೂರು ಗ್ರಾಮದ ಮಂಚವುದಡಿ, ಬಾವಲಿಗುರಿ, ಉಗ್ಗನಬೈಲು, ಇನೋಳಿ ಬಿ ಸೈಟ್ ನ ಏಳು ಮನೆಗಳ ನಿವಾಸಿಗಳು ಈಗಲೂ ಬಹಿರ್ದೆಸೆಗೆ ಹೋಗಬೇಕಾಗಿದೆ. ಆರ್ಥಿಕವಾಗಿ ಹಿಂದುಳಿದ, ಹಿಂದುಳಿದ ವರ್ಗದವರೇ ಇರುವ ಏಳು ಮನೆಗಳಲ್ಲಿ ಈಗಲೂ ಶೌಚಾಲಯಗಳೇ ಇಲ್ಲ. ಏಳು ಮನೆಗಳ ಪೈಕಿ ಒಂದು ಮನೆಯಲ್ಲಿ ಒಂಟಿ ಮಹಿಳೆಯಿದ್ದು, ಉಳಿದ ಎಲ್ಲಾ ಮನೆಗಳಲ್ಲಿ ಹೆಣ್ಮಕ್ಕಳು ಸೇರಿದಂತೆ ಮಹಿಳೆಯರೇ ಜಾಸ್ತಿಯಿದ್ದಾರೆ. ಅವರೆಲ್ಲರೂ ಈಗಲೂ ಶೌಚಾಲಯ ನಿರ್ಮಿಸಲು ಆರ್ಥಿಕ ಅಡಚಣೆಯಿರುವುದರಿಂದ ಬಯಲು ಬಹಿರ್ದೆಸೆಗೆ ಹೋಗಬೇಕಾಗಿದೆ. ಇತ್ತೀಚೆಗೆ ವಿಧಾನಸಭಾ ಚುನಾವಣೆಗೆ ಮತಬೇಟೆಗೆಂದು ತೆರಳಿದ್ದ ಪಕ್ಷದ ಕಾರ್ಯಕರ್ತರನ್ನು ಅಷ್ಟೂ ಮನೆಮಂದಿ ಝಾಡಿಸಿದ್ದಾರೆ. ಆದರೆ ಈ ಪೈಕಿ ನೋವುಂಡ ಕಾರ್ಯಕರ್ತರೊಬ್ಬರು ಗ್ರಾಮ ಪಂಚಾಯಿತಿನ ಕದ ತಟ್ಟಿದ್ದಾರೆ. ಆದರೂ ಅಧಿಕಾರಿಯಿಂದ ಸ್ಪಂಧನೆ ಸಿಗದೇ ಇದ್ದಾಗ ಮೇಲಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಈ ನಡುವೆ ಸಂವಿಧಾನಾತ್ಮಕವಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸುವ ಒತ್ತಾಯವನ್ನು ಮೇಲಿನ ಅಧಿಕಾರಿಗಳಿಗೆ ಮಾಡಿದಾಗ ಸರಕಾರದಿಂದ ಸಾಮಾನ್ಯ ವರ್ಗದವರಿಗೆ 12,000 ಮತ್ತು ಪರಿಶಿಷ್ಟ ಜಾತಿ/ಪಂಗಡದವರಿಗೆ ರೂ. 20,000 ಅನುದಾನ ಸಿಗುವ ಭರವಸೆ ಸಿಕ್ಕಿದೆ. ಆದರೆ ಸದ್ಯ ಕಟ್ಟಡ ಕಾಮಗಾರಿಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಅಂದಾಜು ರೂ.35,000 ರಷ್ಟು ವೆಚ್ಚ ತಗಲುವ ಲೆಕ್ಕಾಚಾರ ಮಾಡಿದ್ದಾರೆ. ಆದರೆ ಕಾಮಗಾರಿ ನಡೆದ ನಂತರ ಹಂತ ಹಂತವಾಗಿ ಅನುದಾನ ಬಿಡುಗಡೆಯಾಗುವ ಕಾನೂನು ಸ್ಥಳೀಯ ಅಧಿಕಾರಿಗಳು ನೀಡಿದ್ದಾರೆ. ಇದರಿಂದ ರೋಸಿಹೋದ ಕೂಲಿಕೆಲಸ ಮಾಡಿಕೊಂಡು ಜೀವನ ಸಾಗಿಸುವ ಮನೆಮಂದಿ ಶೌಚಾಲಯದ ಉಸಾಬಾರಿಯೇ ಬೇಡ ಎಂದು ಬಹಿರ್ದೆಸೆಯನ್ನು ಮುಂದುವರಿಸಿದ್ದಾರೆ. ಸ್ಥಳೀಯರೊಬ್ಬರ ಪ್ರಕಾರ ಇಡೀ ಪ್ರದೇಶ ವಸತಿಗಳಿಂದ ತುಂಬಿದ್ದು, ಇಲ್ಲಿ ಅಷ್ಟೂ ಮನೆಮಂದಿ ಅದೂ ಎಳೆಯ ಹರೆಯದ ಹೆಣ್ಮಕ್ಕಳು ಬಹಿರ್ದೆಸೆಗೆ ಹೋಗುವ ರೀತಿಯನ್ನು ಕಾಣುವಾಗ ಬಹಳಷ್ಟು ಬೇಸರವಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದರು. ಈ ಬಗ್ಗೆ ಉಳ್ಳಾಲವಾಣಿ ಸಮಗ್ರ ವರದಿ ಪ್ರಕಟಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿತ್ತು.‌ ಇದೀಗ ವರದಿ ಬೆನ್ನಲ್ಲೇ ಮಹತ್ವದ ಆದೇಶ ಹೊರ ಬಿದ್ದಿದೆ.

ಮಹಿಳೆಯರ ಪರ ಉಳ್ಳಾಲವಾಣಿ: ವರದಿ ಉಲ್ಲೇಖಿಸಿ ಜಿ.ಪಂ ಸಿಇಒ ಮಾಡಿದ ಆದೇಶವೇನು?

ಉಳ್ಳಾಲ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗೆ ಆದೇಶಿಸಿ ಮಾಡಿರುವ ಪತ್ರದಲ್ಲಿ ‘ಉಳ್ಳಾಲ ವಾಣಿ’ ವರದಿ ಉಲ್ಲೇಖಿಸಲಾಗಿದೆ. ಉಳ್ಳಾಲ ತಾಲೂಕಿನ ಪಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯ ರಹಿತ ಮನೆಗಳಿರುವ ಬಗ್ಗೆ, ಪತ್ರಿಕೆಯಲ್ಲಿ ವರದಿ ಪ್ರಕಟವಾಗಿರುವ ಕುರಿತು ಎಂದು ಉಲ್ಲೇಖಿಸಿ ಉಳ್ಳಾಲವಾಣಿ ವಾರಪತ್ರಿಕೆಯಲ್ಲಿ ಪ್ರಕಟವಾದ ವರದಿ ಬಗ್ಗೆ ಬೆಳಕು ಚೆಲ್ಲಲಾಗಿದೆ. ಪಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಣೆಗೊಂಡ ನಂತರ ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ಸಲುವಾಗಿ, ಎಲ್ಲಾ ಮನೆಗಳಿಗೂ ಕ್ರಿಯಾತ್ಮಕ ವೈಯಕ್ತಿಕ ಶೌಚಾಲಯ ಬಳಕೆಯ ಬಗ್ಗೆ, ಕಾಲಕಾಲಕ್ಕೆ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯು ಪರಿಶೋಧನೆಯನ್ನು ನಡೆಸಿ ಶೌಚಾಲಯ ಬಳಕೆಯ ಬಗ್ಗೆ ಸಮುದಾಯಕ್ಕೆ ಪ್ರೇರಣೆಯನ್ನು ನೀಡಬೇಕಾಗುತ್ತದೆ. ಹಾಗೂ ಶೌಚಾಲಯ ರಹಿತರಲ್ಲಿ ಅರ್ಹ ಫಲಾನುಭವಿಗಳಿಗೆ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಲ್ಲಿ ಮತ್ತು ಇತರ ಯೋಜನೆಯಡಿ, ಅಥವಾ ಸಂಬಂಧಪಟ್ಟ ಮನೆಯವರು ಸ್ವಂತ ಖರ್ಚಿನಲ್ಲಿ ಆದರೂ ಶೌಚಾಲಯವನ್ನು ಹೊಂದುವಂತೆ ಪ್ರೇರೆಪಿಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೇಕಡಾ 100ರಷ್ಟು ಶೌಚಾಲಯದ ಬಳಕೆಯನ್ನು ಮಾಡಬೇಕಾಗುತ್ತದೆ. ಆದರೆ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಪಂಚಾಯತ್ ಎಂದು ಘೋಷಣೆಯಾಗಿರುವ ಉಳ್ಳಾಲ ತಾಲೂಕಿನ ಪಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಚವುದಡಿ, ಬಾವಲಿಗುರಿ, ಉಗ್ರನಬೈಲು, ಇನೋಳಿ ಬಿ ಸೈಟ್ ನಲ್ಲಿ ಏಳು ಶೌಚಾಲಯ ರಹಿತ ಮನೆಗಳು ಇರುವ ಬಗ್ಗೆ ಉಲ್ಲೇಖದಂತೆ ಉಳ್ಳಾಲವಾಣಿ ವಾರಪತ್ರಿಕೆಯಲ್ಲಿ ವರದಿ ಪ್ರಕಟವಾಗಿರುತ್ತದೆ. ಆದುದರಿಂದ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಲು ವಿಶೇಷ ಗ್ರಾಮ ಸಭೆಯನ್ನು ಕರೆಯುವುದು.ಸದರಿ ವರದಿಯನ್ವಯ Citizen Portal ನ ಮೂಲಕ ಅರ್ಜಿ ಸ್ವೀಕೃತಿಗಾಗಿ ವಿಶೇಷ ಡ್ರೈವ್ ಗಾಗಿ ಶಿಬಿರಗಳನ್ನು ನಡೆಸುವುದು. ಸ್ವೀಕೃತವಾದ ಅರ್ಜಿಗಳನ್ನು ತಾಲೂಕು ಗಳಿಂದ ಪರಿಶೀಲಿಸಿ ಪ್ರಮಾಣಿಕರಿಸಿದ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾ ಹಂತಕ್ಕೆ ಅನುಮೋದನೆಗಾಗಿ ಕಳುಹಿಸುವುದು. ಪಂಚತಂತ್ರ 20 ರಲ್ಲಿ ತಾಲೂಕು ಹಂತದಲ್ಲಿ ಅನುಮೋದನೆ ನೀಡಲು ಕೂಡಲೇ ಕ್ರಮ ಕೈಗೊಳ್ಳುವುದು ಹಾಗೂ ಗ್ರಾಮ ಹಂತದಲ್ಲಿ ಪಂಚತಂತ್ರ 20 ರಲ್ಲಿ ಪೂರ್ವಸ್ಥಳ ಪರಿಶೀಲನೆ ನಡೆಸುವುದರ ಜೊತೆಗೆ ಕಾರ್ಯಾದೇಶ ನೀಡಲು ಕ್ರಮ ಕೈಗೊಳ್ಳುವುದು. ಕಾಮಗಾರಿ ಪೂರ್ಣಗೊಂಡಿರುವ ಶೌಚಾಲಯಗಳ ಪಂಚತಂತ್ರ 20 ರಲ್ಲಿ ಅಂತಿಮ ಸ್ಥಳ
IMIS de Geo-Tagging ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದು. ಪಂಚತಂತ್ರ 2.0 ರಲ್ಲಿ ಅಂತಿಮ ಸ್ಥಳ ಪರಿಶೀಲನೆ ಹಾಗೂ IMIS ನಲ್ಲಿ geo-tagging ಪ್ರಕ್ರಿಯೆ ಪೂರ್ಣಗೊಳಿಸಿದ ಫಲಾನಿಭವಿಗಳಿಗೆ K-2 SPARSH ಮೂಲಕ ಪ್ರೋತ್ಸಾಹಧನ ಪಾವತಿಸಲು ಕ್ರಮವಹಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಲವು ಸ್ಥಳೀಯ ನಾಟಕ ತಂಡದಲ್ಲಿ ಗುರುತಿಸಿಕೊಂಡಿದ್ದ ಹವ್ಯಾಸಿ ರಂಗಭೂಮಿ ಕಲಾವಿದ ನೇಣಿಗೆ ಶರಣು..!

April 22, 2026

ಬೈಕ್ ಸವಾರನೊಬ್ಬ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ; ದೂರು ದಾಖಲು

April 21, 2026

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

April 20, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
BANTWALA

ಹಲವು ಸ್ಥಳೀಯ ನಾಟಕ ತಂಡದಲ್ಲಿ ಗುರುತಿಸಿಕೊಂಡಿದ್ದ ಹವ್ಯಾಸಿ ರಂಗಭೂಮಿ ಕಲಾವಿದ ನೇಣಿಗೆ ಶರಣು..!

By UllalaVaniApril 22, 20260

ಹವ್ಯಾಸಿ ರಂಗಭೂಮಿ ಕಲಾವಿದ ಮಿಥುನ್ ಪೂಜಾರಿ(40) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ನಡೆದಿದೆ. ಮೃತ ಮಿಥುನ್…

ಈ ಬಾರಿ ಮಳೆ ಕೊರತೆ; ಉರಿಯುತ್ತಿರುವ ತಾಪಮಾನದ ನಡುವೆ ‘ಎಲ್ ನಿನೋ’ ಭೀತಿ…!!

April 22, 2026

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್(ರಿ) ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಯಾಸೀನ್ ಆಯ್ಕೆ

April 22, 2026

ಬೈಕ್ ಸವಾರನೊಬ್ಬ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ; ದೂರು ದಾಖಲು

April 21, 2026
1 2 3 … 1,878 Next
Automatic YouTube Gallery

ಉಳ್ಳಾಲದಲ್ಲಿ "ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ

"ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ; ಉಳ್ಳಾಲದ ಚನ್ನ ಮರಕಾಲ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ

ಅಬ್ಬಕ್ಕಳಿಗೆ ದೊರಕಬೇಕಾದ ಸ್ಥಾನ ಸಿಕ್ಕಿಲ್ಲ; ಸುಧೀರ್ ಜಿ ವಿಷಾದ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲದಲ್ಲಿ "ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ
Now Playing
ಉಳ್ಳಾಲದಲ್ಲಿ "ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ
"ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ; ಉಳ್ಳಾಲದ ಚನ್ನ ...
"ಅಬ್ಬಕ್ಕ@500" ಪ್ರೇರಣಾದಾಯಿ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ; ಉಳ್ಳಾಲದ ಚನ್ನ ಮರಕಾಲ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ

ಅಬ್ಬಕ್ಕಳಿಗೆ ದೊರಕಬೇಕಾದ ಸ್ಥಾನ ಸಿಕ್ಕಿಲ್ಲ; ಸುಧೀರ್ ಜಿ ವಿಷಾದ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿ ಜೈಹಿಂದ್ ಫ್ರೆಂಡ್ಸ್ ಕಲ್ಲಗುಡ್ಡೆ ಬಜಾಲ್
Now Playing
ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿ ಜೈಹಿಂದ್ ಫ್ರೆಂಡ್ಸ್ ಕಲ್ಲಗುಡ್ಡೆ ಬಜಾಲ್
ಬಜಾಲ್‌ನಲ್ಲಿ ಜೈಹಿಂದ್ ಫ್ರೆಂಡ್ಸ್ ಕಲ್ಲಗುಡ್ಡೆ ಬೆಳ್ಳಿ ಮಹೋತ್ಸವ;ಸಾರ್ವಜನಿಕ ...
ಬಜಾಲ್‌ನಲ್ಲಿ ಜೈಹಿಂದ್ ಫ್ರೆಂಡ್ಸ್ ಕಲ್ಲಗುಡ್ಡೆ ಬೆಳ್ಳಿ ಮಹೋತ್ಸವ;ಸಾರ್ವಜನಿಕ ಶನಿಪೂಜೆ, ಯಕ್ಷಗಾನ ಬಯಲಾಟ

ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ; ಸಾಧಕರಿಗೆ ಅಭಿನಂದನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Bajal #JaiHindFriends #ShaniPooje #yakshagana
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version