Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಅ.6 ರಿಂದ12ರ ವರೆಗೆ ಕೊಲ್ಯದಲ್ಲಿ 43 ನೇ ವರ್ಷದ ಶಾರದಾ ಮಹೋತ್ಸವ.ಅ.7 ರಂದು ನೂತನವಾಗಿ ನಿರ್ಮಾಣಗೊಂಡ ಶ್ರೀ ಶಾರದಾ ಮಂದಿರ ಲೋಕಾರ್ಪಣೆ

UllalaVaniBy UllalaVaniOctober 2, 2024No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಅ.6 ರಿಂದ 12ರ ವರೆಗೆ ಕೊಲ್ಯದ ಶ್ರೀ ಶಾರದಾ ಸೇವಾ ಟ್ರಸ್ಟ್ ,ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ,ಶ್ರೀ ಶಾರದಾ ಮಂದಿರ ನಿರ್ಮಾಣ ಸಮಿತಿ ವತಿಯಿಂದ 43 ನೇ ವರ್ಷದ ಶಾರದಾ ಮಹೋತ್ಸವು ವಿಜೃಂಭಣೆಯಿಂದ ನಡೆಯಲಿದ್ದು, ಅ.7 ರಂದು ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಶಾರದಾ ಮಂದಿರದ ಲೋಕಾರ್ಪಣೆ ನಡೆಯಲಿದೆ ಎಂದು ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಪ್ರದಾನ ಸಂಚಾಲಕರಾದ ಪ್ರವೀಣ್ ಎಸ್. ಕುಂಪಲ ತಿಳಿಸಿದರು.
ತೊಕ್ಕೊಟ್ಟಿನ ಸೇವಾ ಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಹಿಂದೆ ಕೊಲ್ಯದಲ್ಲಿನ ಶಾರದಾ ಕಟ್ಟೆಯಲ್ಲಿ ಶಾರದಾ ಮಾತೆಯ ಉತ್ಸವವನ್ನು ನಡೆಸಲಾಗುತ್ತಿತ್ತು.ಬಳಿಕ ಶಾರದಾ ಕಟ್ಟೆಯು ಶಾರದಾ ಸಭಾ ಭವನವಾಗಿತ್ತು.ಹೆದ್ದಾರಿ ಅಗಲೀಕರಣಕ್ಕೆ ಶಾರದಾ ಸಭಾ ಭವನವನ್ನು ಬಿಟ್ಟು ಕೊಟ್ಟಿದ್ದು, ಹಿಂದಿನ ಕಟ್ಟಡದ ಪೂರ್ವ ಭಾಗದಲ್ಲಿ ಹನ್ನೆರಡು ಸೆಂಟ್ಸ್ ಜಾಗ ಖರೀದಿಸಿ ಮೂರು ಸಮಿತಿಗಳು ಜಂಟಿಯಾಗಿ ಸಹೃದಯಿ ದಾನಿಗಳ ಸಹಕಾರದಿಂದ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯ ಶಾರದಾ ಮಂದಿರವನ್ನು ನಿರ್ಮಿಸಲಾಗಿದೆ.
ಅ.6 ರಂದು ಶಾರದೋತ್ಸವ ಕಾರ್ಯಕ್ರಮ ಆರಂಭವಾಗಿ ಬೆಳಿಗ್ಗೆ ಉಗ್ರಾಣ ಮುಹೂರ್ತಕ್ಕೆ ಕಾಪಿಕಾಡು ಉಮಾ ಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎ.ಜೆ.ಶೇಖರ್ ಅವರು ದೀಪ ಪ್ರಜ್ವಲಿಸಲಿರುವರು.ಆ ದಿನ ಸಂಜೆ ನಾಲ್ಕು ಗಂಟೆಗೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜೈ ವೀರಮಾರುತಿ ವ್ಯಾಯಾಮ ಶಾಲೆಯಿಂದ ಶಾರದಾ ಮಾತೆಯ ನೂತನ ಬೆಳ್ಳಿಯ ಬಿಂಬದೊಂದಿಗೆ ನಡೆಯಲಿರುವ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆಗೆ ಚೀರುಂಭ ಭಗವತೀ ಕ್ಷೇತ್ರದ ಪ್ರದಾನ ಅರ್ಚಕರಾದ ಮಂಜಪ್ಪ ಕಾರ್ನವರ್ ಅವರು ದೀಪ ಪ್ರಜ್ವಲಿಸಿ ಚಾಲನೆ ನೀಡಲಿದ್ದಾರೆ.ಸಂಜೆ 7.30 ಕ್ಕೆ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪಜೀರು ನೃತ್ಯ ಲಹರಿ ನಾಟ್ಯಾಲಯದ ವಿದೂಷಿ ರೇಷ್ಮ ನಿರ್ಮಲ್ ಭಟ್ ಮತ್ತು ಶಿಷ್ಯ ವೃಂದದಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಅ.7 ರ ಸೋಮವಾರದಂದು ಬೆಳಿಗ್ಗೆ ಸೋಮೇಶ್ವರ ಸೋಮನಾಥ ದೇವಸ್ಥಾನದ ಅರ್ಚಕರಾದ ಮಧ್ವೇಶ್ ಭಟ್ ಪೌರೋಹಿತ್ಯದಲ್ಲಿ ಶಾರದಾ ಮಾತೆಯ ನೂತನ ಬೆಳ್ಳಿಯ ಬಿಂಬ ಪ್ರತಿಷ್ಠೆ ನಡೆಯಲಿದೆ.ಬೆಳಿಗ್ಗೆ 10.30 ಕ್ಕೆ ನೂತನ ಶಾರದಾ ಮಂದಿರವನ್ನು ಮುಂಬಯಿಯ ಹೇರಂಭ ಇಂಡಸ್ಟ್ರೀಸ್ ನ ಮಾಲಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಲೋಕಾರ್ಪಣೆ ನಡೆಸಲಿದ್ದಾರೆ.ಗುರುಪುರ ವಜ್ರದೇಹಿ ಸಂಸ್ಥಾನದ ಪರಮಪೂಜ್ಯ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.ಸಂಜೆಯ ಧಾರ್ಮಿಕ ಸಭೆಯನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷರಾದ ಮೋಹನ್ ಆಳ್ವ ಉದ್ಘಾಟಿಸಲಿರುವರು.ಶ್ರೀ ಧಾಮ ಮಾಣಿಲದ ಪರಮ ಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ತಂಡರ್ ಗೈಸ್ ಡ್ಯಾನ್ಸ್ ಫೌಂಡೇಷನ್ ಬಜ್ಪೆ ಇವರಿಂದ ಕ್ಷೇತ್ರ-ಪುರಾಣ-ಮಂಜರಿ ಕಾರ್ಯಕ್ರಮ ನಡೆಯಲಿದೆ.
ಅ.8ರ ಮಂಗಳವಾರದಂದು ಬೆಳಿಗ್ಗೆ ಏಕಾಹ ಭಜನೆ ಪ್ರಾರಂಭಗೊಳ್ಳಲಿದ್ದು ಅತಿಥಿಗಳು ನಂದಾದೀಪ ಪ್ರಜ್ವಲಿಸಲಿದ್ದಾರೆ.ಸಂಜೆ 5.30 ಕ್ಕೆ ಶಾರದಾ ಮಾತೆಯ ವಿಗ್ರಹವು ಮೆರವಣಿಗೆಯೊಂದಿಗೆ ಮಂದಿರಕ್ಕೆ ಪ್ರವೇಶಿಸಲಿದೆ.
ಅ.9ರ ಬುಧವಾರ ಬೆಳಿಗ್ಗೆ 8.20ಕ್ಕೆ ಅರ್ಚಕರಾದ ಮಧ್ವೇಶ್ ಭಟ್ ಪೌರೋಹಿತ್ಯದಲ್ಲಿ ಶಾರದಾ ಮಾತೆಯ ವಿಗ್ರಹದ ಪ್ರತಿಷ್ಠೆ ನಡೆಯಲಿದೆ.ಬೆಳಿಗ್ಗೆ 11 ಗಂಟೆಗೆ ಶಾರದಾ ಮಹಿಳಾ ಮಂಡಳಿ ಸದಸ್ಯರಿಂದ ಲಲಿತ ಸಹಸ್ರನಾಮ ,ಮಕ್ಕಳಿಗೆ ವಿದ್ಯಾರಂಭ ಪೂಜೆ ನಡೆಯಲಿದೆ.
ರಾತ್ರಿ 9 ಗಂಟೆಗೆ ವಿಧಾತ್ರಿ ಕಲಾವಿದೆರ್ ಕುಡ್ಲದ ಕಲಾವಿದರಿಂದ “ದೈವರಾಜೆ ಶ್ರೀ ಬಬ್ಬು ಸ್ವಾಮಿ”ಭಕ್ತಿ ಪ್ರದಾನ ತುಳು ನಾಟಕ ಪ್ರದರ್ಶನಗೊಳ್ಳಲಿದೆ.
ಅ.10 ರ ಗುರುವಾರ ಸಂಜೆ 6.30ಕ್ಕೆ ಮಾತೃ ಸಂಗಮ ನಡೆಯಲಿದ್ದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಊರ್ಮಿಳ ರಮೇಶ್ ಕುಮಾರ್ ಸಭೆಯನ್ನು ಉದ್ಘಾಟಿಸಲಿದ್ದಾರೆ.ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಸಾದ್ವಿ ಮಾತಾನಂದಮಯಿ ಅವರು ಆಶೀರ್ವಚನ ನೀಡಲಿದ್ದು,ಅತಿಥಿ ಗಣ್ಯರು ಧಾರ್ಮಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.ರಾತ್ರಿ 8.30 ಕ್ಕೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ ನಡೆಯಲಿದೆ.
ಅ.11 ರ ಶುಕ್ರವಾರದಂದು ಬೆಳಿಗ್ಗೆ 10.30 ಕ್ಕೆ ಧಾರ್ಮಿಕ ಸಭಾ ಸಮಾರೋಪ ಕಾರ್ಯಕ್ರಮ‌ ನಡೆಯಲಿದ್ದು ಮಸ್ಕತ್ ನ ಪ್ರವೀಣ್ ಶೆಟ್ಟಿ ಪಿಲಾರು ಮೇಗಿನ ಮನೆ ದೀಪ ಪ್ರಜ್ವಲಿಸಲಿದ್ದಾರೆ.ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದು,ಸಭೆಯಲ್ಲಿ ಇನ್ನಿತರ ಅತಿಥಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.ಸಂಜೆ 7 ಗಂಟೆಗೆ ಕಲಾಸಾರಥಿ ತೋನ್ಸೆ ಪುಷ್ಕಳ ಕುಮಾರ್ ನಿರ್ದೇಶನದಲ್ಲಿ ” ಭಕ್ತಿ-ಭಾವ ಸಂಗೀತ-ಚಿತ್ರ ವೈಭವ” ನಡೆಯಲಿದೆ.ರಾತ್ರಿ 8 ಗಂಟೆಗೆ ರಂಗ ಪೂಜೆ ನಡೆದು ಮಹಾಪೂಜೆ ನೆರವೇರಲಿದೆ.
ಅ.12ರ ಶನಿವಾರ ಸಂಜೆ 6.30 ಕ್ಕೆ ಶ್ರೀ ಶಾರದಾ ಮಾತೆಗೆ ವಿಸರ್ಜನಾ ಮಹಾಪೂಜೆ ನಡೆದು ಕೊಲ್ಯದಿಂದ ಕೋಟೆಕಾರು ಮಾರ್ಗವಾಗಿ ಶೋಭಾಯಾತ್ರೆ‌ ನಡೆದು ಸೋಮೇಶ್ವರ,ಸೋಮನಾಥ ದೇವಸ್ಥಾನದ ಕಡಲ ಕಿನಾರೆಯಲ್ಲಿ ಶಾರದಾ ಮಾತೆಯ ವಿಗ್ರಹವನ್ನು ಜಲಸ್ತಂಭನಗೊಳಿಸಲಾಗುವುದು.
ಶಾರದಾ ಮಹೋತ್ಸವದ ಏಳು ದಿನಗಳ ಅವಧಿಯಲ್ಲಿ ನಿತ್ಯವೂ ಮದ್ಯಾಹ್ನ ಮತ್ತು ರಾತ್ರಿ ಅನ್ನದಾನ ನಡೆಯಲಿದ್ದು ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾರದಾ ಮಾತೆಯ ಕೃಪಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಪ್ರವೀಣ್ ಕುಂಪಲ ವಿನಂತಿಸಿದರು. ಪತ್ರಿಕಾ ಗೋಷ್ಟಿಯಲ್ಲಿ ಶಾರದಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್.ಹೆಚ್ ,ಶಾರದಾ ಉತ್ಸವ ಸಮಿತಿ ಅಧ್ಯಕ್ಷರಾದ ಗಣೇಶ್ ಕೊಲ್ಯ ,ಟ್ರಸ್ಟ್ ನ ಪ್ರದಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಕೆ.ಎಸ್,ಶಾರದಾ ಮಂದಿರ ನಿರ್ಮಾಣ ಸಮಿತಿಯ ಪ್ರದಾನ ಕಾರ್ಯದರ್ಶಿ ತೋನ್ಸೆ ಪುಷ್ಕಲ್ ಕುಮಾರ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮೂರು ದಿನಗಳಲ್ಲಿ ಮೂವರು ದ್ವಿಚಕ್ರವಾಹನ ಸವಾರರ ದುರ್ಮರಣ: ಯುವಕರಿಗೆ ಎಚ್ಚರಿಕೆಯ ಸಂದೇಶ

June 22, 2026

ಹಿರಿಯ ಸಾಹಿತಿ–ಪತ್ರಕರ್ತ ಪರಮಾನಂದ ಸಾಲ್ಯಾನ್ ಅವರಿಗೆ “ರಂಗಭಾಸ್ಕರ–2026 ” ಪ್ರಶಸ್ತಿ ಪ್ರದಾನ

June 22, 2026

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಸೋಮೇಶ್ವರ ಇದರ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

June 22, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

ಮೂರು ದಿನಗಳಲ್ಲಿ ಮೂವರು ದ್ವಿಚಕ್ರವಾಹನ ಸವಾರರ ದುರ್ಮರಣ: ಯುವಕರಿಗೆ ಎಚ್ಚರಿಕೆಯ ಸಂದೇಶ

By UllalaVaniJune 22, 20260

ಮಂಗಳೂರು: ಕಳೆದ ಮೂರು ದಿನಗಳ ಅವಧಿಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಯುವ ದ್ವಿಚಕ್ರ ವಾಹನ…

ಹಿರಿಯ ಸಾಹಿತಿ–ಪತ್ರಕರ್ತ ಪರಮಾನಂದ ಸಾಲ್ಯಾನ್ ಅವರಿಗೆ “ರಂಗಭಾಸ್ಕರ–2026 ” ಪ್ರಶಸ್ತಿ ಪ್ರದಾನ

June 22, 2026

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಸೋಮೇಶ್ವರ ಇದರ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

June 22, 2026

ಎಚ್ಚರಿಸಿದ್ದ ಉಳ್ಳಾಲವಾಣಿ ;ಈಗ ವರದಿ ಸತ್ಯವಾಗಿದೆಯೇ?

June 20, 2026
1 2 3 … 1,976 Next
Automatic YouTube Gallery

ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ

ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
Now Playing
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ...
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
Now Playing
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ...
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಗಳಿಸಲಿ: ಅಬ್ದುಲ್ ಖಾದರ್ ಕೋಡಿಜಾಲ್


📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version