ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಮಕ್ಕಳಲ್ಲಿರುವ ಕಲೆಯನ್ನು ಹೊರಹೊಮ್ಮಲು ಸರಕಾರದ ಉತ್ತಮ ಕಾರ್ಯಕ್ರಮ ಪ್ರತಿಭಾ ಕಾರಂಜಿಯಾಗಿದ್ದು, ಸ್ಪರ್ಧೆಗಳಲ್ಲಿ ಪ್ರಶಸ್ತಿಗಿಂತ ಭಾಗವಹಿಸುವಿಕೆ ಅತಿ ಮುಖ್ಯ ಎಂದು ನಿವೃತ್ತ ಶಿಕ್ಷಕ, ನಾಟ್ಯಗುರು ಶಾಂತಲಾ ಪ್ರಶಸ್ತಿ ವಿಜೇತ ಮೋಹನ್ ಕುಮಾರ್ ಉಳ್ಳಾಲ ಅಭಿಪ್ರಾಯಪಟ್ಟರು.
ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸರ್ವ ಶಿಕ್ಷಣ ಅಭಿಯಾನ ಜಂಟಿ ಆಶ್ರಯದಲ್ಲಿ ಉಳ್ಳಾಲ ಅನುದಾನಿತ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಳ್ಳಾಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉತ್ಸವ-2015-16 ನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯೋಪಾಧ್ಯಾಯಿನಿ ವೇದಾವತಿ ಸ್ವಾಗತಿಸಿದರು. ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು. ಸಿಆರ್ ಪಿ ನಳಿನಿ ವಂದಿಸಿದರು.