Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಡಿ. 23ರಿಂದ ಡಿ.30 ರವರೆಗೆ ಬ್ರಹ್ಮಕಲಶ ಸಹಿತ ಶತ ಚಂಡಿಕಾಯಾಗ : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ| ಮೋಹನ್ ದಾಸ್ ರೈ, ಸಾಂತ್ಯಗುತ್ತು

UllalaVaniBy UllalaVaniDecember 20, 2024No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ತಲಪಾಡಿ:   ತಲಪಾಡಿ ದೇವಿಪುರದ  ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ  ಶತ ಚಂಡಿಕಾಯಾಗ ಸಮಿತಿ ಆಶ್ರಯದಲ್ಲಿ ಡಿ. 23ರಿಂದ ಡಿ.30 ರವರೆಗೆ  ಬ್ರಹ್ಮಕಲಶ ಸಹಿತ ಶತ ಚಂಡಿಕಾಯಾಗ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ| ಮೋಹನ್ ದಾಸ್ ರೈ, ಸಾಂತ್ಯಗುತ್ತು ಹೇಳಿದರು.
ತಲಪಾಡಿ ದೇವಸ್ಥಾನದ ವಠಾರದಲ್ಲಿ ಕರೆಯಲಾದ ಸುದ್ಧಿಗೋಷ್ಠಿಯಲ್ಲಿ ಏಳು ದಿನಗಳ ಕಾರ್ಯಕ್ರಮಗಳ ಮಾಹಿತಿ ನೀಡಿದ ಅವರು ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ತಲಪಾಡಿ ಶ್ರೀ ಗಣೇಶ್ ಭಟ್ ರವರ ಉಪಸ್ಥಿತಿಯಲ್ಲಿ ಹಾಗೂ ರಾಜಪುರೋಹಿತ ವಿದ್ವಾನ್ ಶ್ರೀ  ವಿಷ್ಣುಮೂರ್ತಿ ಭಟ್ ರವರ ಪೌರೋಹಿತ್ಯದಲ್ಲಿ  ನವೀಕೃತ ಧ್ವಜಸ್ತಂಭ ಕಲಶಾಭಿಷೇಕ, ಶತ ನಾರೀಕೇಳ ಗಣಯಾಗ, ಮೂಡಪ್ಪ ಸೇವೆ, ರುದ್ರಯಾಗ, ವಡೆ ಸೇವೆ, ಶತ ಚಂಡಿಕಾಯಾಗ, ಚಿನ್ನದ ಪೀಠ ಪ್ರಭಾವಳಿ, ಅಟ್ಟೆಕನ್ನಟಿ ಸಮರ್ಪಣೆ, ಶ್ರೀ ರಂಗಪೂಜೆ ಉತ್ಸವ ಜರಗಲಿದೆ.
ಡಿ.23 ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಮುಹೂರ್ತ  , ದ್ವಾದಶ ನಾರಿಕೇಳ ಯಾಗ ರುದ್ರಪಾರಾಯಣ ಆರಂಭ , ರಾತ್ರಿ 7.30ಕ್ಕೆ ಮಹಾಪೂಜೆ ,  ಡಿ.24 ರಂದು  ಸಂಜೆ: 6.00ಕ್ಕೆ ಧ್ವಜ ಕಲಶಾಧಿವಾಸ, ಪ್ರಧಾನ ಹೋಮ ,  ಡಿ.25 ರಂದು ಬೆಳಿಗ್ಗೆ 7.30ಕ್ಕೆ ಬ್ರಹ್ಮಕಲಶಾಭಿಷೇಕ , 9.10ರ ಮಕರ ಲಗ್ನದಲ್ಲಿ ಧ್ವಜ ಕಲಶಾಭಿಷೇಕ  , ಸಂಜೆ 4.00 ರಿಂದ 6.30 ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತ್ರೆ ಶ್ರೀ ಗಣೇಶ ಮಂದಿರ ಬೀರಿ ವಠಾರದಿಂದ ನಡೆಯಲಿದ್ದು ಶ್ರೀ ಸೋಮನಾಥ ದೇವಸ್ಥಾನ, ಸೋಮೇಶ್ವರದ ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ, ಚಾಲನೆ ನೀಡಲಿದ್ದಾರೆ.
ಸಂಜೆ 7 ರಿಂದ ಜರಗುವ  ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಾಕ್ರಬೈಲು ಪಾತೂರು ಶ್ರೀ ಸೂರ್ಯೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ  ರವೀಂದ್ರನಾಥ ಆಳ್ವ ಮಲಾರುಬೀಡು  ಅಧ್ಯಕ್ಷತೆಯಲ್ಲಿ  ಶ್ರೀ ಕ್ಷೇತ್ರ ಕಟೀಲಿನ  ಅನುವಂಶೀಯ ಅರ್ಚಕರಾದ  ಹರಿನಾರಾಯಣ ಅಸ್ರಣ್ಣ ಉದ್ಘಾಟಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ,  ಶಾಸಕ ಅಶೋಕ್ ರೈ 
ವಿಧಾನಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಕಲಾಶ್ರೀ ವಿದುಷಿ  ಸ್ವಾತಿ ಭಟ್ ಪಿ. ಹಾಗೂ ಶಿಷ್ಯ ವೃಂದದವರಿಂದ ಮತ್ತು  ಶ್ರೀ ದುರ್ಗಾಸ್ವಾತಿ ನೃತ್ಯಾಲಯ ಅಸೈಗೋಳಿ, ಕೊಣಾಜೆ ಇವರಿಂದ  ನೃತ್ಯಾರಾಧನ ಭರತನಾಟ್ಯ ಶಾಸ್ತ್ರಿಯ ನೃತ್ಯ ಕಾರ್ಯಕ್ರಮ  ನಡೆಯಲಿದೆ.
ಡಿ. 26 ರಂದು ಶ್ರೀದೇವಿ ಸಪ್ತಶತಿ ಪಾರಾಯಣ ಆರಂಭ, ಶ್ರೀ ರುದ್ರಪಾರಾಯಣ , ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ಜರಗಿ,
ರಾತ್ರಿ 8.00ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ  ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಅಧ್ಯಕ್ಷ ಶಾಂತರಾಮ ಶೆಟ್ಟಿ ಸಿ.ಎ ಅಧ್ಯಕ್ಷತೆ ವಹಿಸಲಿದ್ದು,   ಎಂ.ಆರ್.ಜೆ ಗ್ರೂಪ್ ಬೆಂಗಳೂರು ಇಲ್ಲಿನ ಅಧ್ಯಕ್ಷರಾಗಿರುವ  ಪ್ರಕಾಶ್ ಶೆಟ್ಟಿ, ಉದ್ಘಾಟಿಸಲಿದ್ದಾರೆ.  ಡಾ| ಅರುಣ್ ಉಳ್ಳಾಲ್ ಧಾರ್ಮಿಕ ಉಪನ್ಯಾಸ  ನೀಡಲಿದ್ದು, ಮುಖ್ಯ ಅತಿಥಿಯಾಗಿ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ,ಶಾಸಕ ವೇದವ್ಯಾಸ ಕಾಮತ್ , ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು  ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ , ಕ್ರೆಡೈ ಮಂಗಳೂರಿನ ಮಾಜಿ ಅಧ್ಯಕ್ಷ ಪುಷ್ಪರಾಜ್ ಜೈನ್ ಉಪಸ್ಥಿತರಿರುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ  ಕುಸಲ್ದ ಗೌಜಿ, ಪ್ರಥಮ ಪ್ರಶಸ್ತಿ ವಿಜೇತ, ಸಿ.ಪಿ.ಎಲ್ ಹಾಗೂ ಬಲೆ ತೆಲಿಪಾಲೆ ಖ್ಯಾತಿಯ ವೈಷ್ಣವಿ ಕಲಾವಿದೆರ್ , ಕೊಯಿಲ
ಹಾಗೂ ರಾತ್ರಿ 9 ಕ್ಕೆ ಸಾರ್ಲಪಟ್ಟದ ಸತ್ಯ-ಸ್ವಾಮಿ ಕೊರಗಜ್ಜ ಯಕ್ಷಗಾನ ಅತಿಥಿ ಕಲಾವಿದರ ಕೂಡುವಿಕೆಯಿಂದ ಜರಗಲಿದೆ.
ಡಿ.27 ರಂದು ಅಷ್ಟೋತ್ತರ ಶತ ನಾರೀಕಳ ಗಣಯಾಗ, ಕಲಶಾಭಿಷೇಕ, ಶ್ರೀ ರುದ್ರಪಾರಾಯಣ ಬೆಳಿಗ್ಗೆ ಗಂಟೆ 10.30ಕ್ಕೆ : ನಾಗ ಸನ್ನಿಧಿಯಲ್ಲಿ ಆಶ್ಲೇಷ ಬಲಿ , ಮಹಾಪೂಜೆ, ಅನ್ನಸಂತರ್ಪಣೆ, ಶ್ರೀ ಚಕ್ರಪೂಜೆ, ಮೂಡಪ್ಪ ಸೇವೆ, ಮಹಾಪೂಜೆ
ಸಭಾ ಕಾರ್ಯಕ್ರಮದಲ್ಲಿ  ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು ಅಧ್ಯಕ್ಷತೆ ವಹಿಸಲಿದ್ದು, ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಕೂಳೂರು ಮುಖ್ಯ ಅತಿಥಿಯಾಗಲಿದ್ದು,
ಡಾ| ಪ್ರಭಾಕರ ಭಟ್ ಕಲ್ಲಡ್ಕ ಧಾರ್ಮಿಕ ಉಪನ್ಯಾಸ ನೆರವೇರಿಸಲಿದ್ದಾರೆ.  ರಾತ್ರಿ ಗಂಟೆ 9.00 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ  ಗೀತಾ ಸಾಹಿತ್ಯ ಸಂಭ್ರಮ-ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗ ನಡೆಯಲಿದೆ.
ಡಿ.28 ರಂದು ರಂದು  ಬೆಳಿಗ್ಗೆ 7.30ಕ್ಕೆ ಶ್ರೀ ರುದ್ರಯಾಗ, ರುದ್ರಾಭಿಷೇಕ, ಶ್ರೀ ವೀರಭದ್ರ ದೇವರಿಗೆ ವಡೆಸೇವೆ ಮಹಾಪೂಜೆ, ಅಷ್ಟಾವಧಾನ ಸೇವೆ , ಶ್ರೀ ಗಣಪತಿ ರಂಗಪೂಜೆ, ಉತ್ಸವ ಬಲಿ ನಡೆಯಲಿದೆ. 
ನಿಟ್ಟೆ ಎಜ್ಯುಕೇಷನ್ ಟ್ರಸ್ಟ್  ಅಧ್ಯಕ್ಷರಾದ ವಿನಯ ಹೆಗ್ಡೆ, ಅಧ್ಯಕ್ಷತೆಯಲ್ಲಿ ಎ.ಜೆ.ಶೆಟ್ಟಿ, ಎ.ಜೆ.ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಉದ್ಘಾಟಿಸಲಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು  ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹರು, ಪ್ರಕಾಶ್ ಪಿ.ಎಸ್ ನೆರವೇರಿಸಲಿದ್ದಾರೆ. 

ಡಿ. 29 ಕ್ಕೆ  ಬೆಳಿಗ್ಗೆ 7.30ಕ್ಕೆ : ಶತ ಚಂಡಿಕಾಯಾಗ 11.30ಕ್ಕೆ ಪುರ್ಣಾಹುತಿ ನಡೆಯಲಿದ್ದು, ಮಧ್ಯಾಹ್ನ 12.00ಕ್ಕೆ ಚಿನ್ನದ ಪೀಠ ಪ್ರಭಾವಳಿ, ಚಿನ್ನದ ಅಟ್ಟೆಕನ್ನಟಿ ಸಮರ್ಪಣೆ ಮಹಾಪೂಜೆ, ಮಹಾ ಅನ್ನಸಂತರ್ಪಣೆ ,ಶ್ರೀ ರಂಗಪೂಜೆ ,ಮಹೋತ್ಸವ ಬಲಿ, ಅಷ್ಟಾವಧಾನ ಸೇವೆ  ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಕ್ತಿ ರಸಮಂಜರಿ- ಕಲಸ್ಸ್ ಕನ್ನಡ ಖ್ಯಾತಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡ ಗಾನ ಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ನಡೆಯಲಿದೆ. ಡಿ.30 ರಂದು  ನವಕಪ್ರಧಾನ, ಕಲಶಾಭಿಷೇಕ, ಸಂಪ್ರೋಕ್ಷಣೆ, ಮಹಾಪೂಜೆ, ಮಹಾಮಂತ್ರಾಕ್ಷತೆ, ಪ್ರಸಾದ ವಿತರಣೆಯಿಂದ ಮುಕ್ತಾಯಗೊಳ್ಳಲಿದೆ.
ಸುದ್ಧಿಗೋಷ್ಠಿಯಲ್ಲಿ  ಪ್ರಧಾನ ಅರ್ಚಕರಾದ  ವೇದಮೂರ್ತಿ ಗಣೇಶ್ ಭಟ್, ಪಂಜಾಳ, ಸಮಿತಿ ಸದ್ಯರುಗಳಾದ ನಾರಾಯಣ ಕಜೆ, ಮೋಹನ್ ದಾಸ್ ಶೆಟ್ಟಿ ನೆತ್ತಿಲಬಾಳಿಕೆ, ಧರ್ಮಪಾಲ ಭಂಡಾರಿ ದೇವಿಪುರ, ಯುವರಾಜ ದೇವಿನಗರ , ವರುಣ್ ರಾಜ್ ತಲಪಾಡಿ, ನಯನ ಪಾರ್ಥಸಾರಥಿ ಕಿನ್ಯ, ಆಶಾ ಪದ್ಮನಾಭ ಶೆಟ್ಟಿ ಬಾವ ಉಪಸ್ಥಿತರಿದ್ದರು.

`ದೇವಸ್ಥಾನಕ್ಕೇ ಸೇರಿದ ಬಾಕಿಮಾರು ಗದ್ದೆ ಅನ್ಯರ ಕೈಯಲ್ಲಿರುವುದರಿಂದ ಅದನ್ನು ಮತ್ತೆ ದೇವಸ್ಥಾನದ ಆಸ್ತಿಯನ್ನಾಗಿ  ಮಾಡಲು  ಯಾಗವನ್ನು ಕೈಗೊಳ್ಳಲಾಗಿದೆ. ಅಲ್ಲದೆ ಕ್ಷೇತ್ರದಲ್ಲಿ  ಕೆರೆ , ಅತಿಥಿ ಗೃಹ ಅನ್ನಛತ್ರ, ಗೋಶಾಲೆ, ಸಭಾಂಗಣ ಸೇರಿದಂತೆ ಹಲವಾರು ಅಭಿವೃದ್ಧಿ ಪರ ಯೋಜನೆಗಳನ್ನು ದೃಷ್ಟಿಯಲ್ಲಿಕೊಂಡು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಲ್ಲದೆ ದೇವಿಯ ಹೆಸರಿನಲ್ಲಿ ಸ್ಥಳೀಯ ಮಕ್ಕಳು ಉಚಿತ ಶಿಕ್ಷಣ  ಪಡೆಯಬೇಕು ಅನ್ನುವ ಕಲ್ಪನೆಯೊಂದಿಗೆ ಉಚಿತ ಶಿಕ್ಷಣದ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ದೇವಸ್ಥಾನ ಹೊಂದಿದೆ’
ಗಣೇಶ್ ಭಟ್
ಪ್ರಧಾನ ಅರ್ಚಕರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d