Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು”-ಡಾ.ಕೆ.ಪ್ರಕಾಶ್ ಶೆಟ್ಟಿ, ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

UllalaVaniBy UllalaVaniDecember 25, 2024No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬಳಿಕ ಮಾತಾಡಿದ ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ನನ್ನ 60ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಸಮಾಜಕ್ಕೆ ನನ್ನಿಂದ ಕಿಂಚಿತ್ತು ನೆರವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಂದಿನಿಂದ ಸತತವಾಗಿ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಇಂದು ನನ್ನ ಬಾಳಿನಲ್ಲಿ ಅತ್ಯಂತ ಖುಷಿಯ ದಿನ. ನನ್ನ ಈ ಕಾರ್ಯಕ್ಕೆ ನನ್ನ ಪತ್ನಿ ಮಗ ಸೊಸೆ ಸಹಿತ ಕುಟುಂಬದ ಸದಸ್ಯರು ಸಹಕಾರ ನೀಡುತ್ತಿದ್ದಾರೆ. ಮೊದಲ ವರ್ಷದಲ್ಲಿ 1 ಕೋಟಿ 25 ಲಕ್ಷ ರೂ. ನೆರವು ನೀಡಿದ್ದು ಅದು ಇಂದು 6 ಕೋಟಿ ರೂ. ಗಡಿಯನ್ನು ದಾಟಿದೆ. ಇಂದು ಇಲ್ಲಿ ಸಮಾರಂಭ ನಡೆಸಿ ನೆರವು ನೀಡುವ ಉದ್ದೇಶ ಇಷ್ಟೇ. ಇಂತಹ ಕಾರ್ಯಕ್ರಮ ಇಂದು ಸಹಾಯ ಪಡೆದ ಕೈಗಳಿಗೆ ಸ್ಫೂರ್ತಿಯಾಗಬೇಕು. ಮುಂದೊಂದು ದಿನ ಅವರು ಕೂಡಾ ಸಮಾಜದಲ್ಲಿ ಒಂದಷ್ಟು ಮಂದಿಗೆ ನೆರವು ನೀಡಲು ಮುಂದೆ ಬರಬೇಕು. ಕಷ್ಟ ಎಲ್ಲರಿಗೂ ಬರುತ್ತದೆ, ಆದರೆ ಧೃತಿಗೆಡದೆ ಅದನ್ನು ಎದುರಿಸುವ ಛಲ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ನಿಮ್ಮ ತಂದೆ ತಾಯಿ ಗೌರವ ಪಡುವಂತೆ ಸಾಧನೆ ಮಾಡಿ ದೇಶದಲ್ಲಿ ಗುರುತಿಸುವಂತಾಗಬೇಕು“ ಎಂದರು.
ಬಳಿಕ ಮಾತಾಡಿದ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷೆ ಹಾಗೂ ಸಹ- ಸಂಸ್ಥಾಪಕಿ ಡಾ. ತೇಜಸ್ವಿನಿ ಅನಂತಕುಮಾರ್ ಅವರು, “ಶಿಕ್ಷಣದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳು, ವಿಶೇಷ ಚೇತನ ಮಕ್ಕಳು, ಸಾಮಾಜಿಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಪ್ರಕಾಶ್ ಶೆಟ್ಟಿಯವರ ನೆರವು ಕಾರ್ಯಕ್ರಮ ಶ್ಲಾಘನೀಯವಾದುದು. ನಾವೇ ಹುಡುಕಿಕೊಂಡು ಹೋಗಿ ಅರ್ಹರಿಗೆ ನೆರವು ನೀಡುವ ಮಾದರಿ ಕಾರ್ಯಕ್ರಮ ಇದಾಗಿದೆ. ಇಲ್ಲಿ ಆರ್ಥಿಕ ಸಹಾಯ ಪಡೆದಿರುವ ಮಕ್ಕಳು ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವ ವಿಶ್ವಾಸವಿದೆ“ . ಉಡುಪಿ-ಮಂಗಳೂರು ಭಾಗದ ಮಕ್ಕಳು ಹೆತ್ತವರ, ಅಜ್ಜ-ಅಜ್ಜಿಯರ ಜೊತೆಗಿದ್ದುಕೊಂಡು ಕಾರ್ಯನಿರ್ವಹಿಸಬೇಕು ಅನ್ನುವ ಮಹದಾಸೆಯಿಂದ ಕೂಳೂರು ಗೋಲ್ಡ್ ಫಿಂಚ್ ಸಿಟಿಯ 15 ಎಕರೆ ವಿಸ್ತೀರ್ಣದಲ್ಲಿ ಜಾಗತಿಕ ಮಟ್ಟದ ಐಟಿ ಮೂಲಸೌಕರ್ಯದ ಅಭಿವೃದ್ಧಿ, ಸ್ಥಳೀಯ ಐಟಿ ಉದ್ಯಮಗಳ ವೃದ್ಧಿಗೆ ಮತ್ತು ಸ್ಟಾರ್ಟಪ್‌ಗಳ ಬೆಳವಣಿಗೆಗೆ ಪೂರಕವಾಗಲಿದೆ. . ಇದರಿಂದ ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಉತ್ತೇಜನ ದೊರೆತು, ನಗರವು ತಾಂತ್ರಿಕ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲು ಅವಕಾಶ ಸಿಗಲಿದೆ.ಈ ಮೂಲಕ ಇಲ್ಲಿನ ಮಕ್ಕಳು ಹುಟ್ಟೂರಿನಲ್ಲೇ ಕಾರ್ಯನಿರ್ವಹಿಸುವವರಂತಾಗಬೇಕೆಂಬುದು ಎಂಆರ್ ಜಿ ಗ್ರೂಪ್ ನ ಉದ್ದೇಶವಾಗಿದೆ ಎಂದರು.
ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, “ಬೆಂಗಳೂರು ಹುಬ್ಬಳ್ಳಿ ಗುಲ್ಬರ್ಗದಲ್ಲಿ ಲಕ್ಷಾಂತರ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಅದಮ್ಯ ಫೌಂಡೇಶನ್ ನ ಸಂಸ್ಥಾಪಕಿ ತೇಜಸ್ವಿನಿ ಅನಂತ ಕುಮಾರ್ ಅವರು ಮಾಡುತ್ತ ಬಂದಿದ್ದಾರೆ. ಎಲ್ಲೂ ತಮ್ಮ ಸಹಾಯವನ್ನು ಹೊರಗಡೆ ತೋರಿಸದೆ ಎಲ್ಲರೊಳಗೆ ಒಂದಾಗಿ ಬದುಕುತ್ತಿರುವ ಅವರು ಇಂದಿನ ಕಾರ್ಯಕ್ರಮಕ್ಕೆ ಆಗಮಿಸಿರುವುದು ಸಂತಸ ತಂದಿದೆ. ಅದೇ ರೀತಿ ಪ್ರಕಾಶ್ ಶೆಟ್ಟಿಯವರ ಪ್ರತೀ ಕಾರ್ಯದ ಹಿಂದೆ ಶ್ರೀಮತಿ ಆಶಾ ಪ್ರಕಾಶ್ ಶೆಟ್ಟಿ ಅವರ ಸ್ಫೂರ್ತಿ ತುಂಬುವ ವ್ಯಕ್ತಿತ್ವ ಇದೆ. ಅವರ ಪುತ್ರ ಗೌರವ್ ಅವರು ತಂದೆ ತಾಯಿಯ ಪ್ರೀತಿಯ ಪುತ್ರನಾಗಿ ಸರಳ ಸಜ್ಜನಿಕೆಯಿಂದ ಗುರುತಿಸಲ್ಪಡುತ್ತಿದ್ದಾರೆ. ಇಂತಹ ಪುಣ್ಯ ಕಾರ್ಯಕ್ಕೆ ಒತ್ತಾಸೆಯಾಗಿ ನಿಂತ ಪ್ರಕಾಶ್ ಶೆಟ್ಟಿಯವರ ಕುಟುಂಬಕ್ಕೆ ನಿಮ್ಮೆಲ್ಲರ ಹಾರೈಕೆಯಿರಲಿ“ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮಾತನಾಡಿ, “ಪ್ರಕಾಶ್ ಶೆಟ್ಟಿ ಅವರಂತಹ ಪುಣ್ಯಾತ್ಮನ ಜೊತೆಯಲ್ಲಿ ಇರುವುದೇ ನಮ್ಮ ಭಾಗ್ಯ. ಹುಟ್ಟುವಾಗ ಶ್ರೀಮಂತಿಕೆ ಇಲ್ಲದಿದ್ದರೂ ತಮ್ಮ ಕಾರ್ಯ ಸಾಧನೆಯಿಂದ ಹಂತಹಂತವಾಗಿ ಯಶಸ್ವಿ ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡು ಬಂದಿರುವ ಪ್ರಕಾಶ್ ಶೆಟ್ಟಿ ಅವರ ವ್ಯಕ್ತಿತ್ವ ನಮಗೆಲ್ಲ ಮಾದರಿ. ಅವರ ದಾನ ಧರ್ಮದ ಸಮಾಜಮುಖಿ ಕಾರ್ಯ ಇದೇ ರೀತಿ ಮುಂದುವರಿಯಲಿ“ ಎಂದರು.
ಬಳಿಕ ವೇದಿಕೆಯಲ್ಲಿ ಶಿಕ್ಷಣ, ಮನೆ ನಿರ್ಮಾಣ, ವೈದ್ಯಕೀಯ ಚಿಕಿತ್ಸೆ, ವಿಶೇಷ ಚೇತನ ಮಕ್ಕಳು ಹಾಗೂ ಸಾಮಾಜಿಕ ಸಂಘಟನೆಗಳಿಗೆ ಸಾಂಕೇತಿಕವಾಗಿ “ನೆರವು” ಸಹಾಯಹಸ್ತವನ್ನು ವಿತರಿಸಲಾಯಿತು.
ಅನುಷ್ಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವು ವಿತರಣೆ:

ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗಿದ್ದು ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಘ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಪ್ರತೀ ವರ್ಷದ ಶಿಷ್ಟಾಚಾರದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲಿ 25 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ. ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘಕಾಲೀನ ಚಿಕಿತ್ಸೆ ಅವಶ್ಯವಿರುವ ಖಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಉತ್ತೇಜನ ನೀಡುವುದಕ್ಕಾಗಿ ಅವರನ್ನು “ನೆರವು” ನೀಡಲು ಆಯ್ಕೆ ಮಾಡಲಾಗಿದೆ.
ಮೊದಲ ವರ್ಷ ವಿತರಣೆ ಮಾಡಲಾದ ಮೊತ್ತ 1.25 ಕೋಟಿ ರೂಪಾಯಿ. ವರ್ಷದಿಂದ ಈ ಮೊತ್ತ ಏರುತ್ತಾ ಹೋಗಿದೆ.
ವರ್ಷದಿಂದ ವರ್ಷ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿದೆ, ಸಹಜವಾಗಿ ಮೊತ್ತವೂ ಹೆಚ್ಚಾಗಿದೆ. ಈ ಯೋಜನೆಯ ವ್ಯಾಪ್ತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡು ಕಾಸರಗೋಡು ಜಿಲ್ಲೆಗಳು. (ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯತೆಯ ಹಿನ್ನೆಲೆಯಲ್ಲಿ ಈ ಗಡಿಯನ್ನು ದಾಟಿಯೂ ನೆರವು ನೀಡಲಾಗಿದೆ)
ಪ್ರತೀ ವ್ಯಕ್ತಿಗೆ ಅವರವರ ಅವಶ್ಯಕತೆಯನ್ನು ಪರಿಗಣಿಸಿ ಕನಿಷ್ಠ 10,000 ರೂ.ಗಳಿಂದ ಗರಿಷ್ಠ 1,00,000 ರೂ.ಗಳವರೆಗೆ ನೀಡಲಾಗಿದೆ, ಆರೋಗ್ಯ ರಕ್ಷಣೆ, ಚಿಕಿತ್ಸೆಗೆ ಮೊದಲಾದ್ಯತೆ ನೀಡಲಾಗಿದೆ.
ಸಂಘ ಸಂಸ್ಥೆಗಳಾದರೆ ಕನಿಷ್ಠ 1,00,000 ರೂ.ಗಳಿಂದ ಗರಿಷ್ಠ 10,00,000 ರೂ.ಗಳವರೆಗೆ ನೆರವು ನೀಡಲಾಗಿದೆ.
ವೈದ್ಯಕೀಯ ಪ್ರಕರಣಗಳಲ್ಲಿ ಅವಶ್ಯ ದಾಖಲೆಗಳನ್ನು ಪಡೆದು, ಪರಿಶೀಲಿಸಿ, ಹಿಮ್ಮಾಹಿತಿ ಪಡೆದು ನೆರವು ನೀಡಲಾಗಿದೆ.
ಬಹುತೇಕ ಅರ್ಜಿಗಳು ವೈದ್ಯಕೀಯ ನೆರವನ್ನು ಕೋರಿದವುಗಳಾಗಿವೆ.
ಸಂಘ ಸಂಸ್ಥೆಗಳ ಸಂದರ್ಭದಲ್ಲಿ ಅವುಗಳ ಚಟುವಟಿಕೆ ಸ್ವಚ್ಚತೆ ಕಾಪಾಡುವಿಕೆ, ಮಹಿಳಾ ಸಶಕ್ತೀಕರಣ, ಯುವಜನರ ಸಬಲೀಕರಣ, ಕೌಶಲ್ಯೀಕರಣ ಸಹಿತ ಸಾಮಾಜಿಕ ಪರಿವರ್ತನೆಗೆ ಅವುಗಳ ಕೊಡುಗೆಯನ್ನು ಗಮನಕ್ಕೆ ತೆಗೆದುಕೊಳ್ಳಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ

February 3, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ

ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
Now Playing
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ...
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d