ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಚೆಂಬುಗುಡ್ಡೆ: ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿರುವ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಚೆಂಬುಗುಡ್ಡೆ ಕಸಾಯಿಖಾನೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 2 ಸತ್ತುಹೋದ ಮತ್ತು 11 ಜೀವಂತ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದು, 3 ಆರೋಪಿಗಳು ಪರಾರಿಯಾಗಿದ್ದಾರೆ. ಏಳು ತಿಂಗಳ ಅವಧಿಯಲ್ಲಿ ಇದೇ ಕಸಾಯಿಖಾನೆಗೆ ಪೊಲೀಸರು ನಡೆಸಿದ ಮೂರನೇ ದಾಳಿ ಇದಾಗಿದೆ.
4 ನೇ ದಾಳಿ:
ಕಳೆದ ಏಳು ತಿಂಗಳ ಅವಧಿಯಲ್ಲಿ ಉಳ್ಳಾಲ ಪೊಲೀಸರು ನಡೆಸಿರುವ ನಾಲ್ಕನೇ ದಾಳಿ ಇದಾಗಿದೆ. ಪ್ರತಿಬಾರಿಯೂ ಆರೋಪಿಗಳು ಪರಾರಿಯಾಗುತ್ತಿದ್ದು, ಪೊಲೀಸರು ಹಲವು ಜಾನುವಾರು ಮತ್ತು ಕ್ವಿಂಟಾಲ್ ಗಟ್ಟಲೆ ಮಾಂಸವನ್ನು ವಶಪಡಿಸಿಕೊಂಡಿದ್ದರು.