ನವದೆಹಲಿ : ಚುನಾವಣೆಗಳಲ್ಲಿ ಜನರ ಮತಗಳನ್ನು ಸೆಳೆಯುವ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಣಿತಿ ಶಿಂಧೆ ಗಂಭೀರವಾಗಿ ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ್ದ ಅವರು, ಚುನಾವಣೆಗೆ ಮುನ್ನ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಯಿಂದ ದೇಶಭಕ್ತಿಯನ್ನು ಸಾರುವಂತೆ ಮೇಲ್ನೋಟಕ್ಕೆ ಕಾಣಿಸುತ್ತದೆ. ಆದರೆ ಕಾರ್ಯಾಚರಣೆ ಮೂಲಕ ಏನನ್ನು ಸಾಧಿಸಲಾಗಿದೆ. ಇದು ಕೇವಲ ಮಾಧ್ಯಮಗಳ ಪ್ರಚಾರಕ್ಕಾಗಿ ಎಂದು ಪ್ರಣಿತಿ ವಾಗ್ದಾಳಿ ನಡೆಸಿದ್ದಾರೆ.


