ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ನಾಟೆಕಲ್: ರಿಕ್ಷಾ ಚಾಲಕನನ್ನು ಕಲ್ಲಿನಿಂದ ಜಜ್ಜಿ, ಮರದ ಸೋಂಟೆಯಿಂದ ಬಡಿದು ಕೊಲೆಗೈದಿರುವ ಘಟನೆ ನಾಟೆಕಲ್ ಸಮೀಪದ ಮಾಂಗಟ್ಟೆ ಎಂಬಲ್ಲಿ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.
ಜೀವ ಬೆದರಿಕೆಯಿತ್ತು :
ಎರಡು ದಿನಗಳ ಹಿಂದೆ ಹಿದಾಯತ್ಗೆ ಅಳೇಕಲ ನಿವಾಸಿ ಫಾರುಕ್ ಎಂಬಾತ ಜೀವಬೆದರಿಕೆ ಒಡ್ಡಿದ್ದ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಹಿದಾಯತ್ ಶುಕ್ರವಾರ ಮಧ್ಯಾಹ್ನ ವೇಳೆ ಮೌಖಿಕವಾಗಿ ದೂರು ಸಲ್ಲಿಸಿದ್ದರು. ಇಂದು ಮಧ್ಯಾಹ್ನ ವೇಳೆ ಉಳ್ಳಾಲ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದು, ಆದರೆ ಈ ವೇಳೆ ಹಿದಾಯತ್ ಕೊಲೆಯಾಗಿ ಪತ್ತೆಯಾಗಿದ್ದಾನೆ. ಹಿದಾಯತ್ನ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಸಣ್ಣ ಪ್ರಕರಣ ಗಳು ಇವೆ.