Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಪ್ರಸ್ತುತ ಶಿಕ್ಷಣ ವ್ಯವಸ್ಥೆಯಿಂದಾಗಿ ಜನ ಹಳ್ಳಿ ಸಂಸ್ಕೃತಿಯ ಸೊಬಗನ್ನು ಕಡಿಮೆ ಮಾಡಿಕೊಂಡಿದ್ದಾರೆ : ರವೀಂದ್ರ ರೈ ಕಲ್ಲಿಮಾರ್

UllalaVaniBy UllalaVaniAugust 14, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ : ಪ್ರಸ್ತುತ ಶಿಕ್ಷಣ ವ್ಯವಸ್ಥೆಯಿಂದಾಗಿ ಜನ ಹಳ್ಳಿ ಸಂಸ್ಕೃತಿಯ ಸೊಬಗನ್ನು ಕಡಿಮೆ ಮಾಡಿಕೊಂಡು ಜೀವನ ನಡೆಸಲಾಗುತ್ತಿದೆ. ಆದರೆ  ತುಳು ಸಂಸ್ಕೃತಿಯಡಿ ಹುಟ್ಟಿ ಬೆಳೆದವರು ಹಿರಿಯರ ಆದರ್ಶ ಮೌಲ್ಯಗಳನ್ನು ಮುಂದುವರೆಸಿಕೊಂಡು ಹೋಗುವ ಸದುದ್ದೇಶದಿಂದ ಹಾಗೂ ಮುಂದಿನ ಪೀಳಿಗೆಯಲ್ಲಿ  ಕೃಷಿ ಸಂಸ್ಕೃತಿಯನ್ನು ಜ್ವಲಂತವಾಗಿಡಲು ವಿದ್ಯಾರತ್ನ ಶಾಲೆಯ ಕಾರ್ಯಕ್ರಮ ಪೂರಕವಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ, ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್ ಹೇಳಿದರು.
ಅವರು ಹರೇಕಳ ಗ್ರಾಮದ ಮಂಜಲಗುತ್ತು ಮನೆಯ ಮುಂಭಾಗದಲ್ಲಿರುವ ಹಡಿಲು ಬಿದ್ದ ಮಡ್ಡೆಲ್ ಮಾರ್ ಗದ್ದೆ ಸೇರಿ ಒಟ್ಟು 16 ಗದ್ದೆಯಲ್ಲಿ  ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಹಮ್ಮಿಕೊಂಡ ಸಾಂಕೇತಿಕ  ನಾಟಿ ಕಾರ್ಯಕ್ರಮ ಮತ್ತು ಕೆಸರುಗದ್ದೆಯಲ್ಲಿ ಆಟೋಟಗಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ತುಳುನಾಡು ಕೃಷಿಗೆ ಪೂರಕವಾದ  ಫಲವತ್ತಾದ ಮಣ್ಣು ಹೊಂದಿದ್ದು, ಹಿಂದೆ ಧರ್ಮಬೇಧ, ವರ್ಗಬೇಧವಿಲ್ಲದೇ ಗದ್ದೆಗಳಲ್ಲಿ ಕೃಷಿ ಮಾಡಿದವರು. ಇದರಿಂದ ಜೀವನೋತ್ಸಾಹದಲ್ಲಿ ಭಾಗಿಯಾಗುತ್ತಿದ್ದರು. ಆದರೆ ಸದ್ಯದ ಕಾಲಘಟ್ಟದಲ್ಲಿ  ಕೃಷಿಯಿಂದ ದೂರ ಹೋಗುತ್ತಿದ್ದೇವೆ, ಶಿಕ್ಷಣದ ವ್ಯವಸ್ಥೆಯಿಂದಾಗಿ ಹಳ್ಳಿ ಸಂಸ್ಕೃತಿಯ ಸೊಬಗನ್ನು ಕಡಿಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ತುಳು ಸಂಸ್ಕೃತಿಯಡಿ ಹುಟ್ಟಿ ಬೆಳೆದ ಹಿರಿಯರ ಆದರ್ಶ ಮೌಲ್ಯಗಳನ್ನು ಮುಂದಿನ ಪೀಳಿಗೆಯಲ್ಲಿ ಮುಂದುವರೆಸಿಕೊಂಡು ಹೋಗುವ ಸದುದ್ದೇಶದಿಂದ ಶಾಲೆಯ ಕಾರ್ಯಕ್ರಮ ಮುನ್ನುಡಿ ಬರೆಯಲಿ. ಕೃಷಿ ಅನ್ನುವುದು ಜೀವನಾಡಿ ಅದನ್ನು ಮರೆಯಬಾರದು, ಆಲಸ್ಯ ಮಾಡದೇ ಭತ್ತ ಬೆಳೆಸುವುದು, ಫಸಲು ಬರಿಸುವ ಅಧ್ಯಯನ ಮಾಡಿ, ಕಾಯಕದಲ್ಲಿ ಭಾಗಿಯಾಗಿರಿ. ಇದರ ಹಿಂದೆ ಸುಖ, ಸಂತೋಷ, ನೆಮ್ಮದಿಯಿದೆ ಎಂದರು.


ದಿ ಮೈಸೂರ್ ಇಲೆಕ್ಟ್ರಿ ಕಲ್ಸ್ ಪ್ರೈ.ಲಿ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ, ಕೃಷಿ ಕಾಯಕದೊಂದಿಗೆ  ಗದ್ದೆಯ ಮಣ್ಣಿನಲ್ಲಿ  ಮಕ್ಕಳ ಪ್ರತಿಭೆ ತೋರಿಸುವ ವೇದಿಕೆ ಇದಾಗಿದೆ.  ಕೃಷಿ ಚಟುವಟಿಕೆಗಳನ್ನು ಅರಿತುಕೊಂಡು ಉನ್ನತ ಶಿಕ್ಷಣ ಪಡೆಯುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಿ ಬಾಳುವಂತಹ ಸಂದೇಶ ಕಾರ್ಯಕ್ರಮ ನೀಡಿದೆ ಎಂದರು.
ಹರೇಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ,  ಗದ್ದೆ ಮಣ್ಣಿನಲ್ಲಿ ಆಡಿದರೆ ರೋಗಗಳೇ ಇಲ್ಲ, ಪ್ರತಿಯೊಂದು ಗದ್ದೆಯಲ್ಲಿ ಕೃಷಿಯಿತ್ತು. ಶಾಲೆಗೆ ಹೋಗುವ ಸಂದರ್ಭದಲ್ಲಿಯಾದರೂ ಗದ್ದೆಗಳನ್ನು ದಾಟುವ ಮೂಲಕ ಮೈಗೆ ಗದ್ದೆ ಮಣ್ಣು ತಗಲುತಿತ್ತು.  ಪ್ರಸ್ತುತ ಕೃಷಿಯೇ ಇಲ್ಲ, ಲಾಭಾಂಶವಿಲ್ಲದೇ ಕೃಷಿಯತ್ತ ಜನರು ಹೋಗುತ್ತಿಲ್ಲ. ಆದರೆ ನೆಮ್ಮದಿಯ ಬಾಳ್ವೆಗೆ ಕೃಷಿಯೇ ಪೂರಕ ಎಂದರು.

ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೆಬ್ಬೇಲಿಗುತ್ತು ಮೋಹನ್ ದಾಸ್ ರೈ  ಕಾರ್ಯಕ್ರಮ ಉದ್ಘಾಟಿಸಿದರು. ಹಿಂದುಳಿದ ಆಯೋಗದ ಮಾಜಿ ಸದಸ್ಯ ಕೆ.ಟಿ.ಸುವರ್ಣ, ರೈಲ್ವೇ ಸಲಹಾ ಮಂಡಳಿಯ ಮಾಜಿ ಸದಸ್ಯ ಚಂದ್ರಹಾಸ್ ಅಡ್ಯಂತಾಯ,  ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ನಾರ್ಯಗುತ್ತು,  ಸುಧಾಕರ್ ಗಟ್ಟಿ ಬೈತಾರ್ , ಮಂಡಲ ಬಿಜೆಪಿ ಯುವಮೋರ್ಛಾ ಅಧ್ಯಕ್ಷ ಮುರಳೀಧರ್ ಕೊಣಾಜೆ, ಬಿಜೆಪಿ ಮುನ್ನೂರು ಮಹಾಶಕ್ತಿಕೇಂದ್ರ ಅಧ್ಯಕ್ಷ ಸತೀಶ್ ಪೂಜಾರಿ,  ಪ್ರವೀಣ್ ಕೊಂಡಾಣ ಮಿತ್ರನಗರ, ಗದ್ದೆ ಮಾಲೀಕರಾದ ರತ್ನ ತಿಮ್ಮಪ್ಪ ಮಡಿವಾಳ ಹಾಗೂ ಬಾಬು ಬಂಗೇರ, ಸ್ಥಳೀಯ ಮುಖಂಡರುಗಳಾದ ಸುಧಾಕರ ಆಚಾರ್ಯ ರಾಜಗುಡ್ಡೆ ,ಕಲ್ಲಾಯಿ ದುರ್ಗಾಪ್ರಸಾದ್ ರೈ, ಪಡ್ಡಾಯಿಬೆಟ್ಟು ಜಯರಾಮ್, ಭಾಸ್ಕರ್ ರೈ ಸಂಪಿಗೆದಡಿ,  ಬಂಟರ ಸಂಘದ ಪ್ರ.ಕಾ ಆನಂದ್ ಶೆಟ್ಟಿ ತೊಕ್ಕೊಟ್ಟು, ಗೋಪಾಲಕೃಷ್ಣ ಮೇಲಾಂಟ ಬೊಳ್ಯಗುತ್ತು,  ದೆಬ್ಬೇಲಿ ಬಬಿತಾ ಮಹಾಬಲ ಹೆಗ್ಡೆ, ವರದರಾಜ್ ಮಾಣೈ, ರಾಧಾಕೃಷ್ಣ ರೈ ಮುಖ್ಯ ಅತಿಥಿಗಳಾಗಿದ್ದರು.
ಶಾಲಾ ವಿದ್ಯಾರ್ಥಿ ನಾಯಕ  ಭವಿತ್ ವಿ ಸುವರ್ಣ,  ಶಾಲಾ ಮುಖ್ಯೋಪಾಧ್ಯಾಯಿನಿ ನಯೀಮ ಹಮೀದ್  ಉಪಸ್ಥಿತರಿದ್ದರು.
ಭಗವಾನ್ ದಾಸ್ ತೊಕ್ಕೊಟ್ಟು ನಿರೂಪಿಸಿದರು.  ಶಾಲಾ ಸಂಸ್ಥಾಪಕ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಕಾರ‍್ಯದರ್ಶಿ ಸೌಮ್ಯ ಆರ್ ಶೆಟ್ಟಿ  ವಂದಿಸಿದರು

`ಕೃಷಿಕರ ಕಷ್ಟಗಳ ಅರಿವು ಮೂಡಿಸುವ ಕಾರ್ಯ’
ಹೆತ್ತವರು ಕೃಷಿಯಲ್ಲಿ ಕೆಲಸಗಳನ್ನು ನಡೆಸಿರುವ ಹಿನ್ನೆಲೆಯಿಂದ ನಾವು ಬಲಿಷ್ಠರಾಗಿ, ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಭಾಗಿಯಾಗಲು ಸಾಧ್ಯವಾಗಿದೆ. ನಾಟಿ ಕಾರ್ಯದಿಂದ ಹಿಡಿದು ಭತ್ತ ಬೇಯಿಸುವವರೆಗೂ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದೆವು, ಅಂದಿನ ಹಾಗೂ ಈವರೆಗೆ ಕೃಷಿಕರ ಕಷ್ಟಕರ ಜೀವನ ಗೊತ್ತಾಗಬೇಕು ಅನ್ನುವ ಉದ್ದೇಶದೊಂದಿಗೆ ವಿದ್ಯಾರ್ಥಿಗಳಿಗೆ ಪ್ರತೀ ವರ್ಷವೂ ಕಳೆದ 7 ವರ್ಷಗಳಿಂದ ಭತ್ತದ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದೇವೆ. ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ 25 ನೇ ವರ್ಷದ ಸಂವತ್ಸರವನ್ನು ಪೂರೈಸಿ  ರಜತ ಮಹೋತ್ಸವವನ್ನು ಆಚರಿಸುತ್ತಿದೆ. ಪ್ರತೀ ವರ್ಷ ಕೃಷಿಕರ ಜೀವನ, ಬದುಕು ನಡೆಸುತ್ತಿರುವ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಬಾರಿಯೂ ಮಂಜದಗುತ್ತು ಮುದಲೆಮಾರು ಬರಿಕೆಯ ಹಡಿಲುಬಿದ್ದ  16 ಗದ್ದೆಗಳಲ್ಲಿ ನಾಟಿ ಕಾರ್ಯಗಳನ್ನು ನಡೆಸಲಾಗುತ್ತಿದೆ.

ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು
ಶಾಲಾ ಸಂಸ್ಥಾಪಕರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d