ಉಳ್ಳಾಲ : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಬೂಸಾಲಿ ಕಿನ್ಯ, ನಿರ್ದೇಶಕ ಉದಯಕುಮಾರ್ ಶೆಟ್ಟಿ ಕೊಂಡಾಣ ಗುತ್ತು, ಅರುಣ್ ಕುಮಾರ್.ಯು, ರಾಘವ ಆರ್ ಉಚ್ಚಿಲ್, ಶ್ರೀಮತಿ ಸುರೇಖಾ ಚಂದ್ರಹಾಸ, ಸಿಇಓ ಹರ್ಷವರ್ಧನ್ ಉಳ್ಳಾಲ್ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು ವ್ಯವಸ್ಥಾಪಕರಾದ ಲೋಕಯ್ಯ ಪನೀರ್ ಕಾರ್ಯಕ್ರಮ ನಿರ್ವಹಿಸಿದರು.










