ಉಳ್ಳಾಲ : ಮುನ್ನೂರು ಯುವಕ ಮಂಡಲ (ರಿ ) ಕುತ್ತಾರು ರು ಇದರ ವತಿಯಿಂದ 79ನೇ ಸ್ವಾತಂತ್ರ್ಯ ಕಾರ್ಯಕ್ರಮವನ್ನು ಶ್ರೀ ರಾಮ ಭಜನಾ ಮಂದಿರ ಇದರ ಮಾಜಿ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕುತ್ತಾರ್ ಇವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಮುಂಡೋಳಿ, ಸಲಹೆಗಾರರಾದ ಕೃಷ್ಣಪ್ಪ ಸಾಲಿಯಾನ್, ಗೌರವ ಅಧ್ಯಕ್ಷರಾದ ಶಶೀಂದ್ರ ಕುಕ್ಕ್ಯಾನ್, ಕಾರ್ಯದರ್ಶಿ ರಕ್ಷಿತ್ ಕುತ್ತಾರ್ ಹಾಗೂ ಸದಸ್ಯರು, ಹಿತೈಷಿಗಳು ಉಪಸ್ಥಿತರಿದ್ದರು.
