Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಸತ್ಯದತ್ತ ಸಾಗುವ ಪ್ರೇರಣೆಯಾದ ಕೇಂದ್ರವೇ ಧರ್ಮ : ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ

UllalaVaniBy UllalaVaniAugust 29, 2025Updated:August 29, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ : ಮರಣವನ್ನು ಪ್ರಾಮಾಣಿಕವಾಗಿ ಎದುರಿಸುವ ಮನೋಬಲವೇ ಮಾನವನ ಸತ್ಯ ಪರೀಕ್ಷೆ. ರಹಸ್ಯಗಳನ್ನು ಬೇಧಿಸಿ ಅರಿಯುವುದೇ ವಿಜ್ಞಾನ, ಆದರೆ ಅದರ ಪಾರಮಾರ್ಥಿಕ ವ್ಯವಸ್ಥೆಯನ್ನು ನಿರ್ಮಿಸಿರುವುದು ದೇವರು. ಬ್ರಹ್ಮಾಂಡದ ಸೂಕ್ಷ್ಮ ನಿಯಮಗಳನ್ನು ರೂಪಿಸಿದ ಶಕ್ತಿ ದೇವರದೇ. ಭಾರತವು ಹಿಂದೂ ಧರ್ಮದ ಆಳವಾದ ತತ್ವಗಳಿಂದ ಜಗತ್ತಿಗೆ ಗುರುವಾಗಿದ್ದ ದೇಶ. ಈ ಧರ್ಮವು ಮನುಕುಲಕ್ಕೆ ಜ್ಞಾನ, ಶಕ್ತಿ ಮತ್ತು ಆಧ್ಯಾತ್ಮಿಕ ದಾರಿ ತೋರಿಸಿತು. ಎಲ್ಲರಿಗೂ ಶಕ್ತಿ ನೀಡುವ, ಸತ್ಯದತ್ತ ಸಾಗುವ ಪ್ರೇರಣೆಯಾದ ಕೇಂದ್ರವೇ ಧರ್ಮ. ಅದನ್ನು ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕುತ್ತಾರು ಕ್ಷೇತ್ರದ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಕುತ್ತಾರಗುತ್ತು ಹೇಳಿದರು.


ಅವರು ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಶ್ರೀ ಕ್ಷೇತ್ರ ಕುತ್ತಾರು ಇಲ್ಲಿ ಜರಗಿದ 39 ನೇ ವರ್ಷದ ಸಾರ್ವಜನಿಕ ಕುತ್ತಾರು ಗಣೇಶೋತ್ಸವದ ಪ್ರಯುಕ್ತ ಶ್ರೀ ರಾಜರಾಜೇಶ್ವರಿ ವೇದಿಕೆಯಲ್ಲಿ ಜರಗಿದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮಂಗಳೂರು ಮಂಡಲ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್‌ ಮಾತನಾಡಿ, ದೇವಾಲಯವು ಹಿಂದೂ ಸಮಾಜಕ್ಕೆ ಧಾರ್ಮಿಕ ಶಕ್ತಿಯ ಕೇಂದ್ರವಾಗಬೇಕು. ಆಡಳಿತ ಮಂಡಳಿ ಜೀರ್ಣೋದ್ದಾರ ಕಾರ್ಯಗಳಿಗೆ ಕೈ ಹಾಕಿದರೆ, ಎಲ್ಲರೂ ಕೈಜೋಡಿಸಿ ಸಹಕಾರ ನೀಡುವಂತಾಗಲಿ. ಇಂದು ಧರ್ಮದ ಆಚರಣೆಗಳಲ್ಲಿ ತಪ್ಪುಗಳು ನಡೆದರೂ ಯಾರೂ ಸ್ವರ ಎತ್ತುವುದಿಲ್ಲ. ತಾಯಂದಿರೇ ಮನೆಯ ಮಕ್ಕಳಿಗೆ ಧರ್ಮದ ಗೌರವ, ಸಾಂಪ್ರದಾಯಿಕ ಮೌಲ್ಯಗಳು ಮತ್ತು ವಿರೋಧ ವ್ಯಕ್ತಪಡಿಸುವ ಕನಿಷ್ಠ ಭಾವನೆಗಳನ್ನು ಕಲಿಸಬೇಕಾಗಿದೆ. ದೇವಾಲಯವು ಹಿಂದೂಗಳಿಗೆ ಶಕ್ತಿ, ಪ್ರೇರಣೆ ಮತ್ತು ಒಗ್ಗಟ್ಟು ಕೊಡುವ ಕೇಂದ್ರವಾಗಲಿ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆ.ಎಸ್‌ ಆರ್‌ ಟಿಸಿ ನಿವೃತ್ತ ಅಧಿಕಾರಿ ರತ್ನಾಕರ್‌ ಗಟ್ಟಿ ಮಂಗಳೂರು ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸುವ ಪದ್ಧತಿ ಇರಲಿಲ್ಲ. ಆ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಒಗ್ಗಟ್ಟಿನ ಕೊರತೆಯಿದ್ದು, ಜಾತಿ ಪದ್ಧತಿ ಜನರನ್ನು ವಿಭಜಿಸಿತ್ತು. ಇಂತಹ ಸಂದರ್ಭದಲ್ಲಿ ಶಿವಾಜಿ ಮಹಾರಾಜರು ಗಣೇಶೋತ್ಸವವನ್ನು ಪ್ರಾರಂಭಿಸಿ, ಸಮಾಜದಲ್ಲಿ ಒಗ್ಗಟ್ಟನ್ನು ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಮಹಾರಾಷ್ಟ್ರದಲ್ಲಿ ಬಾಲ ಗಂಗಾಧರ ತಿಲಕ್ ಅವರ ನೇತೃತ್ವದಲ್ಲಿ ಸಾರ್ವಜನಿಕ ಗಣೇಶೋತ್ಸವವು ವ್ಯಾಪಕವಾದ ಚಳವಳಿಯಾಯಿತು.‌ ಇಂದಿಗೂ ಹಳ್ಳಿ ಹಳ್ಳಿಯಲ್ಲೂ ಗಣೇಶೋತ್ಸವಗಳು ಭವ್ಯವಾಗಿ ನಡೆಯುತ್ತಿವೆ. ಎಲ್ಲರು ಒಟ್ಟಾಗಿ ಸೇರಿ, ಜಾತಿ-ಬಾಂಧವ್ಯವಿಲ್ಲದೆ, ಪರಸ್ಪರ ಸಹಕಾರದಿಂದ ಉತ್ಸವವನ್ನು ಆಚರಿಸುತ್ತಿದ್ದಾರೆ. ಮದುವೆ, ಆರ್ಥಿಕ ಕಷ್ಟ, ಹಿಂದುಳಿದವರ ನೆರವು ಮುಂತಾದ ಸಮಾಜಮುಖಿ ಕಾರ್ಯಗಳಲ್ಲಿ ಸಹ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್‌ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಒಂದು ವೇದಿಕೆಯಾಗಿದೆ. ಈ ಉತ್ಸವದಿಂದ ಸಮಾಜದಲ್ಲಿ ಒಗ್ಗಟ್ಟು ಬಲವಾಗುತ್ತಿದ್ದು, ವಿಘ್ನಗಳನ್ನು ದೂರ ಮಾಡಿ, ಸಕಾರಾತ್ಮಕ ಶಕ್ತಿ ಹರಡುವ ಕಾರ್ಯ ನಡೆಯುತ್ತಿದೆ ಎಂದರು.
ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್‌ ಆಳ್ವ ಕುವೆತ್ತಬೈಲ್‌ ಮಾತನಾಡಿ, ಸಮಾಜದಲ್ಲಿ ಬೆವರಿಳಿಸಿ ದೇವಸ್ಥಾನಗಳನ್ನು ನಿರ್ಮಿಸಿದ ಹಿರಿಯರಿದ್ದಾರೆ. ಆದರೆ ದೇವಸ್ಥಾನಗಳು ಕೇವಲ ಕಟ್ಟಡಗಳಾಗದೇ, ದೇವರ ಸೇವೆಯೊಂದಿಗೆ ಸಮಾಜ ಸೇವೆಯ ಕೇಂದ್ರವಾಗಬೇಕು. ಪ್ರತಿ ಸದಸ್ಯರೂ ತಮ್ಮ ಶಕ್ತಿಗೆ ತಕ್ಕಂತೆ ಕ್ಷೇತ್ರದ ಎಲ್ಲಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಮಂಜನಾಡಿ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರ ಉತ್ತರಕ್ರಿಯೆಯ ಕಾರ್ಯವನ್ನು ಎಲ್ಲಾ ಸದಸ್ಯರು ತಾವೇ ವೆಚ್ಚವನ್ನು ಭರಿಸಿ ನಡೆಸಿರುವ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು.
ಮೈಸೂರ್‌ ಇಲೆಕ್ಟ್ರಿಕಲ್ಸ್‌ ಮಾಜಿ ಅಧ್ಯಕ್ಷರು ಸಂತೋಷ್‌ ಕುಮಾರ್‌ ರೈ ಬೋಳಿಯಾರು,, ಉಳ್ಳಾಲಬೈಲ್‌ ವೈದ್ಯನಾಥ ದೈವಸ್ಥಾನದ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಯು., ಸೋಮೇಶ್ವರ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗಟ್ಟಿ ಪರ್ಯತ್ತೂರು, ತೊಕ್ಕೊಟ್ಟುವಿನ ಡಾ.ಗಣೇಶ್‌ ಕುಮಾರ್‌ ಉದ್ಯಮಿಗಳಾದ ಸುಚಿವೃತ ಶೆಟ್ಟಿ, , ವಿವೇಕ್‌ ಶೆಟ್ಟಿ ಗಣೇಶ್‌ ಕೆ.ಟಿ. ಮುಖ್ಯ ಅತಿಥಿಗಳಾಗಿದ್ದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಚಂದ್ರಹಾಸ ಕೊಟ್ಟಾರಿ, ಅಧ್ಯಕ್ಷರಾದ ರಾಜೇಶ್‌ ಅತ್ತಾವರ‌ ಉಪಸ್ಥಿತರಿದ್ದರು. ಪುಷ್ಪರಾಜ್‌ ಸನಿಲ್‌, ಉಪಾಧ್ಯಕ್ಷ ಜಗನ್ನಾಥ ಸಾಲಿಯಾನ್‌, ಕಾರ್ಯದರ್ಶಿ ಮಾಧವ ಬಂಗೇರ, ಸಂಘಟನಾ ಕಾರ್ಯದರ್ಶಿ ಗೌತಮ್‌ ಸುವರ್ಣ ಭಾಗವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ಪವಿತ್ರಕುಮಾರ್‌ ಗಟ್ಟಿ ಸ್ವಾಗತಿಸಿದರು. ಹರೀಶ್‌ ಆಚಾರ್ಯ ನಿರೂಪಿಸಿದರು. ಶಶಿಕಲಾ ಗಟ್ಟಿ ಪ್ರಶಸ್ತಿ ವಿಜೇತರ ವಿವರ ಓದಿದರು. ಸುನಿತಾ ಗಟ್ಟಿ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್ಸಸ್ಸಫ್ ಬಾಳೆಪುಣಿ ಶಾಖಾ ವತಿಯಿಂದ ಮಾಸಿಕ ಬುರ್ಧಾ ಮಜ್ಲಿಸ್ ಹಾಗೂ ಬ್ರಹತ್ ಇಫ್ತಾರ್ ಕೂಟ

March 16, 2026

ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ

March 14, 2026

ಗಾಂಜಾ ಮಾರಾಟ ಪ್ರಕರಣ; ಇಬ್ಬರ ಬಂಧನ..!

March 14, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ..!!

By UllalaVaniMarch 16, 20260

ಕೊಣಾಜೆ ;ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಮಲ್ಲಾಪುರದ ಮೂಲದ ಶೋಭಾ ಹನುಮಂತಪ್ಪ ಭಜಂತ್ರಿ (33) ಎಂಬವರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು ತಾಲ್ಲೂಕು ನೊಂದಾವಣೆ ಕಚೇರಿಯಲ್ಲಿ ಸಿಬ್ಬಂದಿ ಕೊರತೆ- ಸಕಾಲದಲ್ಲಿ ಸಿಗದ ಸೇವೆ

March 16, 2026

ಎಸ್ಸಸ್ಸಫ್ ಬಾಳೆಪುಣಿ ಶಾಖಾ ವತಿಯಿಂದ ಮಾಸಿಕ ಬುರ್ಧಾ ಮಜ್ಲಿಸ್ ಹಾಗೂ ಬ್ರಹತ್ ಇಫ್ತಾರ್ ಕೂಟ

March 16, 2026

ಪಂಪ್ವೆಲ್‌ : ಜಲ್ಲಿಕಲ್ಲಿನಿಂದ ಜಾರಿಬಿದ್ದ ತಾಯಿ ಮಗುಮಾನವೀಯತೆ ಮೆರೆದ ರಿಕ್ಷಾ ಚಾಲಕರು

March 14, 2026
1 2 3 … 1,833 Next
Automatic YouTube Gallery

ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ; ನಳೀನ್ ಕುಮಾರ್ ಕಟೀಲ್ ಭಾಗಿ

ಮಾಡೂರು ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ;ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಭಾಗಿ

ಮಾಡೂರಿನ ಸುಂದರಿ ಪೂಜಾರಿ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #YAKSHAGANA #madooru #tulunad #nalinkumarkateel
Show More
ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ; ನಳೀನ್ ಕುಮಾರ್ ಕಟೀಲ್ ಭಾಗಿ
Now Playing
ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ; ನಳೀನ್ ಕುಮಾರ್ ಕಟೀಲ್ ಭಾಗಿ
ಮಾಡೂರು ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ;ನಳಿನ್ ಕುಮಾರ್ ಕಟೀಲ್ ಸೇರಿದಂತೆ ...
ಮಾಡೂರು ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ;ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಭಾಗಿ

ಮಾಡೂರಿನ ಸುಂದರಿ ಪೂಜಾರಿ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #YAKSHAGANA #madooru #tulunad #nalinkumarkateel
Show More
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
Now Playing
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ ...
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d