Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) “ಸಾಧನಾ ಪ್ರಶಸ್ತಿ”

UllalaVaniBy UllalaVaniSeptember 1, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25 ಪ್ರಶಸ್ತಿಯನ್ನು ಇತ್ತೀಚೆಗೆ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012 ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2024-25ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ. 25,749.48ಲಕ್ಷ ಹೊಂದಿದ್ದು, ರೂ. 3.06 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ.
ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ) ಗೋಪಾಲಕೃಷ್ಣ ಭಟ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ. ಪೂಜಾರಿ, ಆನಂದ ಎಸ್. ಕೊಂಡಾಣ ಮತ್ತಿತ್ತರರು ಉಪಸ್ಥಿತರಿದ್ದರು.

ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ ಸತತ ಏಳು ಬಾರಿ ಉತ್ತಮ ಸಹಕಾರಿ ಸಂಘ' ರಾಜ್ಯ ಪ್ರಶಸ್ತಿ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಇವರಿಂದ ಸತತ 10 ವರ್ಷಗಳಿಂದ ಇ-ಸ್ಟಾಂಪಿಂಗ್ ಸೇವೆಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ, ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 10 ವರ್ಷಗಳಿಂದ “ವಿಮಾ ಪ್ರಶಸ್ತಿ”, 2019ನೇ ಸಾಲಿನ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, ಯುವವಾಹಿನಿ ಕೇಂದ್ರ ಸಮಿತಿ (ರಿ) ಯಿಂದ “ಯುವವಾಹಿನಿ ಸಾಧನಶ್ರೇಷ್ಠ” ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋತ್ ಪೌಂಡೇಶನ್ ನಿಂದ “ಆವಾರ್ಡ್ ಪೋರ್ ಎಕ್ಸ್ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ” ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಈ ಎಲ್ಲ ಸಾಧನೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ 10 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಸಾಧನಾ’ ಪ್ರಶಸ್ತಿ ಯನ್ನು ಪಡೆದಿರುವುದು ಸಂಘದ ಹೆಗ್ಗಳಿಕೆಯಾಗಿದೆ.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನನ್ಯ. ಸಂಘದ ವಿಶೇಷತೆ ಎಂದರೆ ಶೇ. 100 ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಶೇ.95 ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಆತ್ಮಶಕ್ತಿ ಸಹಕಾರಿ ಸಂಘವು ಸುಮಾರು 87ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 650ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತ್ರ ಚಿಕಿತ್ಸಾ ವೆಚ್ಚ ಹಾಗೂ 19,000ಕ್ಕೂ ಮಿಕ್ಕಿ ಕನ್ನಡಕವನ್ನೂ ಉಚಿತವಾಗಿ ವಿತರಿಸಿರುವುದಷ್ಟೇ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿ ವರ್ಷ ವಿತರಿಸಿದೆ. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ವರ್ಷ ಸರಕಾರಿ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ 11 ವರ್ಷದಿಂದ ಆಯೋಜಿಸಿ ಸುಮಾರು 800 ಬಡ ಅರ್ಹ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಐ.ಎ.ಎಸ್ / ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಡ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡವಿಧ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತಾ ಬರುತ್ತಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; 6 ಮಂದಿ ಮೀನುಗಾರರ ರಕ್ಷಣೆ

June 30, 2026

ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ತಾಲೂಕು ಸಂಚಾಲಕರಾಗಿ ಮೂವರ ಮರುನೇಮಕ

June 30, 2026

ಬೀರಿ ಜಂಕ್ಷನ್‌ ತರಕಾರಿ ಅಂಗಡಿ ಮೇಲೆ ಬಿದ್ದ ಮರ

June 29, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

By UllalaVaniJune 30, 20260

ಉಳ್ಳಾಲ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮದನಿ ಎಜುಕೇಶನ್ ಅಸೋಸಿಯೇಷನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ಉಚಿತ…

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; 6 ಮಂದಿ ಮೀನುಗಾರರ ರಕ್ಷಣೆ

June 30, 2026

ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ತಾಲೂಕು ಸಂಚಾಲಕರಾಗಿ ಮೂವರ ಮರುನೇಮಕ

June 30, 2026

ಸುಳ್ಯ : ಜುಲೈ 6 ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

June 30, 2026
1 2 3 … 1,991 Next
Automatic YouTube Gallery

ನಾಟೆಕಲ್ ಅ*#ಪಘಾ*ತ; ಮಾಜಿ ಪ್ರಯಾಣಿಕನೋರ್ವನ ಸ್ಪೋಟಕ ಕಾಮೆಂಟ್...!!

ನಾಟೆಕಲ್ ಬಸ್ ಅ**ಪಘಾ#ತ;# ಕಾಮೆಂಟ್ ಮಾಡಿದ ಮಾಜಿ ಪ್ರಯಾಣಿಕ;ಪಿ.ಎ.ಕಾಲೇಜು ಬಸ್ ನಿರ್ವಹಣೆ ಕುರಿತು ಕಾಮೆಂಟ್

ಹಾಗಾದರೆ ಆ ಕಾಮೆಂಟ್‌ನಲ್ಲಿ ಏನಿದೆ..??
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಾಟೆಕಲ್ ಅ*#ಪಘಾ*ತ; ಮಾಜಿ ಪ್ರಯಾಣಿಕನೋರ್ವನ ಸ್ಪೋಟಕ ಕಾಮೆಂಟ್...!!
Now Playing
ನಾಟೆಕಲ್ ಅ*#ಪಘಾ*ತ; ಮಾಜಿ ಪ್ರಯಾಣಿಕನೋರ್ವನ ಸ್ಪೋಟಕ ಕಾಮೆಂಟ್...!!
ನಾಟೆಕಲ್ ಬಸ್ ಅ**ಪಘಾ#ತ;# ಕಾಮೆಂಟ್ ಮಾಡಿದ ಮಾಜಿ ಪ್ರಯಾಣಿಕ;ಪಿ.ಎ.ಕಾಲೇಜು ಬಸ್ ...
ನಾಟೆಕಲ್ ಬಸ್ ಅ**ಪಘಾ#ತ;# ಕಾಮೆಂಟ್ ಮಾಡಿದ ಮಾಜಿ ಪ್ರಯಾಣಿಕ;ಪಿ.ಎ.ಕಾಲೇಜು ಬಸ್ ನಿರ್ವಹಣೆ ಕುರಿತು ಕಾಮೆಂಟ್

ಹಾಗಾದರೆ ಆ ಕಾಮೆಂಟ್‌ನಲ್ಲಿ ಏನಿದೆ..??
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
Now Playing
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ ಉಳ್ಳಾಲ ವೀರರಾಣಿ ...
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version