ಕೊಣಾಜೆ : ಪಂಪ ಪ್ರಶಸ್ತಿ ಪುರಸ್ಕೃತ, ವಿಶ್ರಾಂತ ಕುಲಪತಿಗಳಾದ ಪ್ರೊ.ಬಿ.ಎ ವಿವೇಕ ರೈ ಅವರಿಂದ ಪಂಪನ ಕಾವ್ಯಗಳ ಕುರಿತು ಮೂರು ಉಪನ್ಯಾಸಗಳನ್ನು ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆ ಏರ್ಪಡಿಸಿದೆ.



ಅಕ್ಟೋಬರ್ 13, 14 ಮತ್ತು 15 ರಂದು ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂಜೆ 5.30 ರಿಂದ 7 ಗಂಟೆಯವರೆಗೆ ಈ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಶ್ರೀಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ ಎಂಬ ಉದ್ದೇಶದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮುಂಚಿತವಾಗಿ 8904628052 ಆಥವಾ 8310300875 ಈ ಸಂಖ್ಯೆಯನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಉಚಿತವಾಗಿದ್ದು ಭಾಗವಹಿಸಿದವರಿಗೆ ಕೊನೆಯ ದಿನ ಪ್ರಮಾಣಪತ್ರವನ್ನು ನೀಡಲಾಗುವುದು.




