ಮಂಗಳೂರು,ಅ.25:ಮಹಾಕಾಳಿಪಡ್ಡು ರೈಲ್ವೆ ಕೆಳ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದನ್ನು ಖಂಡಿಸಿ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಅಬ್ದುಲ್ ಸಲೀಂ ನೇತೃತ್ವದಲ್ಲಿ ಕಾಂಗ್ರೆಸ್ನಿAದ ಶನಿವಾರ ರೈಲ್ವೇ ಕೆಳಸೇತುವೆ ಚಲೋ ಪ್ರತಿಭಟನೆ ನಡೆಸಲಾಯಿತು.

ಸೇತುವೆ ಕಾಮಗಾರಿ ನಡೆಯುವ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸ್ಮಾರ್ಟ್ ಸಿಟಿಯ ಮ್ಯಾನೇಜರ್ ಅರುಣ್ ಪ್ರಭಾರನ್ನು ಒತ್ತಾಯಿಸಿದರು.
ಈ ಸಂದರ್ಭ ಮುಂದಿನ 30 ದಿನಗಳ ಒಳಗಡೆ ಕಾಮಗಾರಿಯನ್ನು ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಿವುದಾಗಿ ಅರುಣ್ ಪ್ರಭಾರವರು ಪ್ರತಿಭಟನಾಕಾರರಿಗೆ ನಿಯೋಗಕ್ಕೆ ಭರವಸೆ ನೀಡಿದರು.
ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿದ್ದು, ಮಳೆಯ ಕಾರಣದಿಂದ ಕಾಮಗಾರಿ ಕುಂಠಿತಗೊAಡಿದೆ ಎಂದು ಹೇಳುವ ಉತ್ತರ ಸಮಂಜಸವಲ್ಲ ಕೂಡಲೇ ಕಾಮಗಾರಿ ಮುಗಿಸಬೇಕು.ಇಲ್ಲದೇ ಇದ್ದಲ್ಲಿ ಪಂಪ್ವೆಲ್ ಮತ್ತು ಕಂಕನಾಡಿಯಲ್ಲಿ ಉದ್ದೇಶಿಸಿರುವ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಯಾವುದೇ ಕಾರಣಕ್ಕೂ ಮಹಾಕಾಳಿಪಡ್ಡು ರೈಲ್ವೆ ಅಹಾ ಬ್ರಿಡ್ಜ್ನ ಸಮಸ್ಯೆ ಪರಿಹಾರವಾಗದೇ ಪಂಪವೆಲ್ ಮತ್ತು ಕಂಕನಾಡಿ ಕಾಮಗಾರಿಗಳನ್ನು ಮುಂದುರಿಸಬಾರದೆAದು ಐವನ್ ಡಿಸೋಜಾ ಇವರು ಪೋಲಿಸ್ ಕಮಿಷನರ್ ಮತ್ತು ಮಂಗಳೂರು ಸಂಚಾರ ವಿಭಾಗದ ಡಿಸಿಪಿಯವರನ್ನು ಒತ್ತಾಯಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಈ ಸೇತುವೆ ಕಾಮಗಾರಿ ನಡೆಯುತ್ತಿದೆ. ಮಳೆಗಾಲದಲ್ಲಿ ಜನಸಾಮಾನ್ಯರು ಬವಣೆ ಪಡುವಂತಾಗಿದೆ. ಹಾಗೂ ಚರಂಡಿಗಳಲ್ಲಿ ನೀರು ನಿಂತು ಡೆಂಗ್ಯೂ ಮಲೇರಿಯಾದಂತಹ ಕಾಯಿಲೆಯಿಂದ ಬಳಲುವಂತಾಗಿದೆ ಎಂದು ಐವನ್ ಡಿಸೋಜಾ ಹೇಳಿದರು.
ಈ ವೇಳೆ ಮಾತನಾಡಿದ ಅಬ್ದುಲ್ ಸಲೀಂ ಇಲ್ಲಿನ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಇದು ನೀರು ಸಂಗ್ರಹಕ್ಕೆ ಮಾಡಲಾದ ಟ್ಯಾಂಕ್ನAತಿದ್ದು, ಸಾರ್ವಜನಿಕರಿಗೆ ಉಪಯೋಗವಾಗದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ಆಲ್ಸನ್ ಡಿಕುನ್ಹಾ ಸತೀಶ್ ಪೆಂಗಲ್, ಚಂದ್ರಕಲಾ ಜೋಗಿ, ಸುಧಾಕರ್, ಶಾಲಿನಿ, ನವಾಜ್ ಜೆಪ್ಪು, ಮನೀಶ್ ಬೋಳಾರ್, ನೆಲ್ಸನ್, ಹೈದರ್ ಬೋಳಾರ್, ವಿಕಾಸ್ ಶೆಟ್ಟಿ, ನೀತು ಡಿಸೋಜಾ, ಹಬೀಬುಲ್ಲಾ ಕಣ್ಣೂರು, ಸ್ಥಳೀಯರಾದ ಬಾಬು ಸುವರ್ಣ, ಲತೀಫ್ ಪಾಟ್ನಾ ಜೆ. ಇಬ್ರಾಹಿಂ, ಸಪ್ನ ಜೆಪ್ಪುಪಾಟ್ನಾ, ಅಬ್ದುಲ್ ವಹಾಬ್, ಅಜ್ಜಲ್, ಹಬಿಬುಲ್ಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



