Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
KARNATAKA

ರಾಜ್ಯದಲ್ಲೀಗ ಸಿಎಂ ಬದಲಾಗ್ತಾರಾ? ಇಲ್ವಾ?

UllalaVaniBy UllalaVaniOctober 30, 2025No Comments4 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು, ಅ.30:ರಾಜ್ಯದಲ್ಲೀಗ ಸಿಎಂ ಬದಲಾಗ್ತಾರಾ? ಇಲ್ವಾ? ಅನ್ನೋದೇ ದೊಡ್ಡ ಚರ್ಚೆ. ಸಿದ್ದರಾಮಯ್ಯ ಮುಂದುವರೀತಾರೆ ಅನ್ನೋ ವಾದ ಒಂದು ಕಡೆ ಇದ್ರೆ, ಡಿ.ಕೆ.ಶಿವಕುಮಾರ್​ ಸಿಎಂ ಆಗೋದು ಪಕ್ಕಾ ಅನ್ನೋದು ಮತ್ತೊಂದು ವಾದ. ಎರಡು ಕಡೆಯ ಬೆಂಬಲಿಗರಲ್ಲಿ ಇಂತಾದ್ದೊಂದು ಭಾವನೆ ಇದೆ. ಈ ಬೆಳವಣಿಗೆಯನ್ನ ಮತ್ತಷ್ಟು ರೋಚಕ ಮಾಡಿರೋದು ಮತ್ತೊಂದು ವಿಷಯ ಅದೇ ದಲಿತ ಸಿಎಂ ಅಸ್ತ್ರ, ಡಾ.ಜಿ.ಪರಮೇಶ್ವರ್​​, ಸತೀಶ್​ ಜಾರಕಿಹೊಳಿ, ಡಾ.ಹೆಚ್​​​.ಸಿ.ಮಹದೇವಪ್ಪ ಪದೇ ಪದೇ ಭೇಟಿ ಮಾಡ್ತಿರೋದು ಚರ್ಚೆ ಮಾಡ್ತಿರೋದು ಗೊತ್ತಿರೋ ವಿಚಾರವೇ.

ಅದರ ನಡುವೆ ಆಹಾರ ಮತ್ತು ನಾಗರೀಕ ಸಚಿವ ಕೆ.ಎಚ್​​.ಮುನಿಯಪ್ಪ ಅವರೇ ಬೇಕಾದ್ರೆ ಸಿಎಂ ಆಗಲಿ ಅಂತಾ ಗೃಹ ಸಚಿವ ಪರಮೇಶ್ವರ್​ ಅವರೂ ಹೇಳಿ ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾದ್ರು. 
ಈ ಚರ್ಚೆಗಳೆಲ್ಲಾ ಒಂದು ಕಡೆಯಾದ್ರೆ ಇದುವರೆಗೂ ಕಾಂಗ್ರೆಸ್​​ನಲ್ಲಿ ಯಾವೆಲ್ಲಾ ಸಮುದಾಯದವರು ಮುಖ್ಯಮಂತ್ರಿಗಳಾಗಿದ್ದಾರೆ ಗೊತ್ತಾ?
ಯಾವ್ಯಾವ ಸಮುದಾಯದವರು ಮುಖ್ಯಮಂತ್ರಿಗಳಾಗಿದ್ರು?
1947 – 1952                ಕೆ.ಸಿ.ರೆಡ್ಡಿ                            ರೆಡ್ಡಿ ಜನಾಂಗ
1952-1956                ಕೆಂಗಲ್​​ ಹನುಮಂತಯ್ಯ        ಒಕ್ಕಲಿಗ
1956                    ಕಡಿದಾಳ್​ ಮಂಜಪ್ಪ                     ಒಕ್ಕಲಿಗ
1956 -1958, 1962-1968        ಎಸ್​.ನಿಜಲಿಂಗಪ್ಪ          ಲಿಂಗಾಯತ
1958-1962                ಬಿ.ಡಿ ಜತ್ತಿ                       ಲಿಂಗಾಯತ
1968-1971, 1989-1990        ವೀರೇಂದ್ರ ಪಾಟೀಲ್​            ಲಿಂಗಾಯತ
1972-1977, 1978-1980        ದೇವರಾಜ್​ ಅರಸ್​           ಹಿಂದುಳಿದ ವರ್ಗ
1980-1983                ಆರ್​.ಗುಂಡೂರಾವ್​               ಬ್ರಾಹ್ಮಣ 
1990-1992                ಎಸ್​.ಬಂಗಾರಪ್ಪ              ಈಡಿಗ
1992-1994                ವೀರಪ್ಪ ಮೋಯ್ಲಿ               ಸವಿತ  ಸಮಾಜ
1999-2004                ಎಸ್​.ಎಂ ಕೃಷ್ಣ                ಒಕ್ಕಲಿಗ
2004-2006                ಎನ್​.ಧರ್ಮಸಿಂಗ್​             ರಜಪೂತ    
2013-2018 & 2023            ಸಿದ್ದರಾಮಯ್ಯ            ಕುರುಬ         

1947ರಲ್ಲಿ ಮೊದಲ‌ಬಾರಿಗೆ ರೆಡ್ಡಿ ಸಮುದಾಯದ ಕೆ.ಸಿ. ರೆಡ್ಡಿ  ಅಂದ್ರೆ ಕೆ.ಚೆಂಗಲ್​​ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ರಾಜ್ಯದಲ್ಲಿ ಆಡಳಿತ ನಡೆಸಿದ್ರು. ನಂತರ ಮುಖ್ಯಮಂತ್ರಿಗಳಾಗಿದ್ದು ಕೆಂಗಲ್​ ಹನುಮಂತಯ್ಯ ಅವರು ಒಕ್ಕಲಿಗ ಸಮುದಾಯವನ್ನು ಪ್ರತಿನಿಧಿಸ್ತಿದ್ದರು. ಒಕ್ಕಲಿಗ ಸಮುದಾಯಕ್ಕೆ ಸೇರಿದ್ದ ಕಡಿದಾಳ್​​ ಮಂಜಪ್ಪನವರು ಕೇವಲ 74 ದಿನಗಳಿಗೆ ಮುಖ್ಯಮಂತ್ರಿಯಾಗಿದ್ದರು. ಇವರ ಬಳಿಕ, ಲಿಂಗಾಯತ ಸಮುದಾದಯಿಂದ ಎಸ್​​.ನಿಜಲಿಂಗಪ್ಪ, ಬಿಡಿ ಜತ್ತಿ ಹಾಗೂ ವಿರೇಂದ್ರ ಪಾಟೀಲ್​​ ಅವರು ಸಿಎಂ ಹುದ್ದೆಯನ್ನು ನಿರ್ವಹಿಸಿದ್ದಾರೆ, ಅದೇ ರೀತಿ ಬ್ರಾಹ್ಮಣ ಸಮುದಾಯದಿಂದ ಆರ್​​.ಗುಂಡೂರಾವ್​​ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇನ್ನೂ ಹಿಂದುಳಿದ ವರ್ಗಗಳ ಜನಪ್ರಿಯ ನಾಯಕ ಎಂದೇ ಖ್ಯಾತರಾಗಿದ್ದ ಈಡಿಗ ಸಮುದಾಯದ ಎಸ್​​​.ಬಂಗಾರಪ್ಪನವರೂ ಕೂಡ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮತ್ತೊಮ್ಮೆ ಒಕ್ಕಲಿಗ ಸಮುದಾಯದಿಂದ ಎಸ್​​.ಎಂ.ಕೃಷ್ಣ ಮುಖ್ಯಮಂತ್ರಿಯಾಗಿ ಸಮರ್ಥ ಆಡಳಿತ ನೀಡಿದ್ದರು. ಸವಿತಾ ಸಮಾಜವನ್ನು ಪ್ರತಿನಿಧಿಸಿದ್ದ ಎಸ್​​.ವೀರಪ್ಪಮೊಯ್ಲಿ, ರಜಪೂತ ಸಮುದಾಯದ ಎನ್​​.ಧರ್ಮಸಿಂಗ್​ ಸಿಎಂ ಗಳಾಗಿದ್ದಾರೆ. ಹಾಲಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು, ಅವರು ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೀಗಿ ಸಣ್ಣ ಪುಟ್ಟ ಸಮುದಾಯಗಳಿಂದ ಹಿಡಿದು ಪ್ರಬಲ ಸಮುದಾಯದವರೆಗೂ ಅನೇಕರೂ ಕಾಂಗ್ರೆಸ್​ ಪಕ್ಷದಿಂದ ಸಿಎಂ ಗಳಾಗಿ ಕಾರ್ಯನಿರ್ವಹಿಸಿದ್ದಾರೆ. ವಿಶೇಷ ಅಂದ್ರೆ ಕಾಂಗ್ರೆಸ್​​ನ ಮತಬ್ಯಾಂಕ್​​ ಎಂದೇ ಪರಿಗಣಿಸಲ್ಪಡುವ ದಲಿತ ಸಮುದಾಯದಿಂದ ಇದುವರೆಗೂ ಒಬ್ಬರೂ ಮುಖ್ಯಮಂತ್ರಿಗಳಾಗಿಲ್ಲ. 

ಇನ್ನೂ ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿಗೆ ಅರ್ಹ ದಲಿತ ಮುಖಂಡರು ಯಾರಾರು  ಇದ್ದಾರೆ ಅನ್ನೋದನ್ನ ನೋಡೋದಾದ್ರೆ,                   


ಮಲ್ಲಿಕಾರ್ಜುನ ಖರ್ಗೆ: ಹಾಲಿ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸುದೀರ್ಘ 5 ದಶಕಗಳಿಗೂ ಹೆಚ್ಚು ಕಾಲ ಪಕ್ಷವನ್ನು ಕಟ್ಟಿದ್ದಾರೆ. 9 ಭಾರಿ ವಿಧಾನಸಭೆ ಪ್ರವೇಶಿಸಿ ದಾಖಲೆ ಮಾಡಿರುವ ಅವರು ಸಹಕಾರ, ಗೃಹ ಸೇರಿದಂತೆ ಮಹತ್ವದ ಇಲಾಖೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಉತ್ತಮ ಆಡಳಿತಗಾರ ಎಂಬ ಹೆಸರನ್ನೂ ಗಳಿಸಿದ್ದಾರೆ. ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಸಮರ್ಥವಾಗಿ ಎದುರಿಸಿದ ಹೆಗ್ಗಳಿಕೆಯೂ ಅವರಿಗಿದೆ.

ಕೆ.ಹೆಚ್. ಮುನಿಯಪ್ಪ; ಕಾಂಗ್ರೆಸ್ ನ ಹಿರಿಯ ನಾಯಕರಾಗಿರುವ ಮುನಿಯಪ್ಪ ಅವರು 7 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವರಾಗಿಯೂ ಸೇವೆಸಲ್ಲಿಸಿರುವ ಅವರು,  ಪ್ರಸ್ತುತ ರಾಜ್ಯದಲ್ಲಿ ಆಹಾರ ಹಾಗೂ ನಾಗರೀಕ ಸೇವಾ ಸಚಿವರಾಗಿದ್ದಾರೆ. ಹಿರಿತನ, ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಯಲ್ಲಿ ಸಮರ್ಥವಾಗಿರುವ ಮುನಿಯಪ್ಪ ಅವರು ಕೂಡ ದಲಿತ ಸಮುದಾಯದಿಂದ ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬ ಅಭಿಪ್ರಾಯವಿದೆ. 

ಡಾ.ಜಿ.ಪರಮೇಶ್ವರ್: ಸುದೀರ್ಘ ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ‌ಅಧಿಕಾರಕ್ಕೆ ತಂದ ಖ್ಯಾತಿ ಡಾ.ಜಿ.ಪರಮೇಶ್ವರ್​ ಅವರು ಹಾಲಿ ಗೃಹ ಸಚಿವರಾಗಿದ್ದಾರೆ. ಉನ್ನತ ಶಿಕ್ಷಣ, ಕೃಷಿ ಸೇರಿದಂತೆ ಹಲವು ಮಹತ್ವದ ಖಾತೆಗಳ ಜೊತೆಗೆ ಉಪ ಮುಖ್ಯ ಮಂತ್ರಿಯಾಗಿಯೂ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ‌ಗೆ ಆತ್ಮೀಯರೂ ಆಗಿರುವ ಪರಮೇಶ್ವರ್ ಕಳೆದ 26 ವರ್ಷಗಳಿಂದ ಕಾಂಗ್ರೆಸ್​​ ಪಕ್ಷದ ನಿಷ್ಠಾವಂತರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. 

ಸತೀಶ್ ಜಾರಕಿಹೊಳಿ: ವಾಲ್ಮೀಕಿ ಸಮುದಾಯ ಪ್ರಬಲ ನಾಯಕರಾಗಿರೋ ಸತೀಶ್​​ ಜಾರಕಿಹೊಳಿ, 7 ಬಾರಿ ವಿಧಾನಸಭೆಯನ್ನ ಪ್ರವೇಶಿಸಿದ್ದಾರೆ. 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಲೋಕೋಪಯೋಗಿ ಸಚಿವರಾಗಿ  ರಾಜ್ಯದಲ್ಲಿ ತಮ್ಮದೇ ಆದ ಅಭಿಮಾನಿಗಳ ಪಡೆ, ಜೊತೆಗೆ ಅಹಿಂದ ಸಮುದಾಯದ ಬೆಂಬಲ ಸತೀಶ್ ಗಿದ್ದು ಸಹಕಾರ ಕ್ಷೇತ್ರ, ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ತಾವಷ್ಟೇ ಅಲ್ಲದೇ ತಮ್ಮ ಪಕ್ಷದ ಅಭ್ಯರ್ಥಿಗಳೂ ಗೆಲ್ಲುವಂತೆ ನೋಡಿಕೊಂಡಿದ್ದು, ಕಾಂಗ್ರೆಸ್ ಪಕ್ಷ ಕಟ್ಟುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. 

ಇವರೆಲ್ಲರೂ ದಲಿತ ಸಮುದಾಯದಿಂದ ಮುಖ್ಯಮಂತ್ರಿ ಹುದ್ದೆಗೆ ಅರ್ಹರಾಗಿದ್ದಾರೆ. ಕೇವಲ ಜಾತಿಯ ಹಿನ್ನಲೆಯಷ್ಟೇ ಅಲ್ಲದೇ, ಪಕ್ಷ ನಿಷ್ಠೆ, ಜವಾಬ್ದಾರಿ ನಿರ್ವಹಣೆ ಹಾಗೂ ಸಮರ್ಥ ಆಡಳಿತಗಾರರೆಂದು ನಿರೂಪಿಸಿದ್ದಾರೆ. ಆದರೆ, ಇವೆಲ್ಲ ಲೆಕ್ಕಕ್ಕೆ ಬರುವುದು ದಲಿತರೊಬ್ಬನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಬೇಕು ಎಂದು ಹೈಕಮಾಂಡ್​​ ಮನಸು ಮಾಡಿದಾಗ ಮಾತ್ರ. ಅಲ್ಲಿವರೆಗೂ ಇವೆಲ್ಲ ಅವರ ವೈಯಕ್ತಿಕ ಸಾಧನೆ ಅಷ್ಟೆ. 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ

ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
Now Playing
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ...
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d