Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ : ಉಚಿತ ನೇತ್ರ ತಪಾಸಣಾ ಶಿಬಿರ

UllalaVaniBy UllalaVaniNovember 5, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಪಡುಬಿದ್ರಿ, ನ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರ‍್ರಿ ಇವರ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ವೈದ್ಯರ ತಂಡದವರಿAದ ಉಚಿತ ನೇತ್ರ ತಪಾಸಣಾ ಶಿಬಿರವು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ಅಡ್ವೆ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣರವರು ಉದ್ಘಾಟಿಸಿ, “ಉಭಯ ಜಿಲ್ಲೆಗಳಲ್ಲಿ 33ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ, ಸಂಸ್ಥೆಯ ಲಾಭಾಂಶದ ಒಂದು ಪಾಲನ್ನು ಸಮಾಜದ ಅಶಕ್ತ ಬಡ ವರ್ಗದ ಜನರ ಏಳಿಗೆಗಾಗಿ ವಿನಿಯೋಗಿಸಿಕೊಂಡು ಬರುತ್ತಿದ್ದು, ಸಂಸ್ಥೆಯು ಸದಾ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು.

ಬಿಲ್ಲವ ಸಮಾಜ ಸೇವಾ ಸಂಘ (ರಿ) ಪಡುಬಿದ್ರಿ ಇದರ ಅಧ್ಯಕ್ಷರು ಹಾಗೂ ಪಡುಬಿದ್ರಿ ವ್ಯವಸಾಯಿಕ ಸೇವಾ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ರವರು ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಆರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದಲ್ಲಿ ಇಂತಹ ತಪಾಸಣೆ ಯನ್ನು ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಇವರಿಗೆ ಗ್ರಾಮದ ಜನತೆಯ ಪರವಾಗಿ ಕೃತಜ್ಞತೆಗಳು. ಸಾಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ” ಎಂದು ಶುಭ ಹಾರೈಸಿದರು.

ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಪ್ರಗತ್ ಶೆಟ್ಟಿ ಯವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ 92ನೇ ಆರೋಗ್ಯ ಶಿಬಿರವನ್ನು ಪಡುಬಿದ್ರಿ ಪರಿಸರದಲ್ಲಿ ನಡೆಸುತ್ತಿರುವ ಬಗ್ಗೆ ಸಂತಸ ವ್ಯಕ್ತ ಪಡಿಸಿ, ಮುಂದಕ್ಕೆ ನಡೆಯುವ ಯಾವುದೇ ಸಾಮಾಜಿಕ ಸೇವೆಗಳಲ್ಲಿ ತಾವು ಕೈಜೋಡಿಸುವುದಾಗಿ ಭರವಸೆಯನ್ನು ನೀಡಿದರು.

ಕಣ್ಣಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಣಕಾಸು ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನಸಾಮಾನ್ಯರ ಆರೋಗ್ಯದ ಕಾಳಜಿ ವಹಿಸಿ ಎಲ್ಲಾ ಶಾಖೆಗಳಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿರುವುದಕ್ಕೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಯನ್ನು ಸಲ್ಲಿಸಿದರು”.
ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯರಾದ ಡಾ. ನಿರಂಜನ್ ರವರು ಮಾತನಾಡಿ “ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕನ್ನಡಕ್ಕ ವಿತರಣೆ ಹಾಗೂ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದು ಎಂದು ಸಾರ್ವಜನಿಕರಿಗೆ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡುತ್ತಾ ಬರುತ್ತಿದೆ. ಅದೇ ರೀತಿ ಇವತ್ತಿನ ಗುಣಮಟ್ಟದ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಇದರ ಆಡಳಿತ ವರ್ಗ, ವೈದ್ಯರು , ಸಿಬ್ಬಂದಿ ವರ್ಗದವರಿಗೂ ಹಾಗೂ ಎಲ್ಲಾ ಸಂಸ್ಥೆಯ ಪದಾದಿಕಾರಿಗಳಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಮ್., ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇಲ್ಲಿನ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಮೋಹನ್ ಮತ್ತು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ನೇತ್ರ ತಪಾಸಣೆ, ಉಚಿತ ಕನ್ನಡಕ ವಿತರಣೆಯನ್ನು ನಡೆಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್ ರವರು ಸ್ವಾಗತಿಸಿ, ಶಾಖಾಧಿಕಾರಿ ಚೈತ್ರ ದಿನೇಶ್ ರವರು ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಶಾಖಾಧಿಕಾರಿಯಾದ ಸ್ವಾತಿ ಪ್ರದೀಪ್ ರವರು ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026

ಅಡ್ಕರೆ ಪಡ್ಪು: ಮೇ 3ರಂದು ಸುಖನ್ಯಾ ಸಮೃದ್ಧಿ ಹಾಗೂ ಆಧಾರ್ ಶಿಬಿರ

April 30, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

By UllalaVaniApril 30, 20260

ನವದೆಹಲಿ, ಏ. 30;  ಯಾವುದೇ ಕಾರಣಕ್ಕೂ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಗರ್ಭಧಾರಣೆಯನ್ನು ಹೊರುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್…

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026

ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದ ಸರ್ವೇ ನಂ. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲು ತೆರವು ಆರೋಪ – PDO, ತಹಶೀಲ್ದಾರ್ ಮೇಲೂ ಸಂಶಯ; ಲೋಕಾಯುಕ್ತ, ಸಿಎಂಗೆ ದೂರು…!!

April 30, 2026

ಅಡ್ಕರೆ ಪಡ್ಪು: ಮೇ 3ರಂದು ಸುಖನ್ಯಾ ಸಮೃದ್ಧಿ ಹಾಗೂ ಆಧಾರ್ ಶಿಬಿರ

April 30, 2026
1 2 3 … 1,891 Next
Automatic YouTube Gallery

"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?

ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
Now Playing
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ; ಮಾದಕದ್ರವ್ಯ, ...
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ;
ಮಾದಕದ್ರವ್ಯ, ವರದಕ್ಷಿಣೆ ವಿರುದ್ಧ ಜಾಗೃತಿ

ತೊಕ್ಕೊಟ್ಟುವಿನಲ್ಲಿ ಡಾ.ಮುಹಮ್ಮದ್ ಹಫೀಝ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thalapady #Salafi #SalafiSammelana
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version