ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಎಕ್ಕೂರು: ಮುಂಬದಿಯ ಟಯರ್ ಸಿಡಿದು ಕರ್ನಾಟಕ ಸಾರಿಗೆ ಬಸ್ಸು ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಎಕ್ಕೂರು-ಜೆಪ್ಪು ನಡುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಜೆ ವೇಳೆ ಸಂಭವಿಸಿದೆ.
ಕೆಎಸ್ಆರ್ಟಿಸಿ ವಿರುದ್ಧ ಆಕ್ರೋಶ: ಕಾಸರಗೋಡು ಕಡೆಗೆ ತೆರಳುವ ಕೆಎಸ್ ಆರ್ ಟಿಸಿ ಸಿಬ್ಬಂದಿ ಸಮಯ ಪಾಲನೆಗಾಗಿ ಮಿತಿಮೀರಿದ ವೇಗದಲ್ಲಿ ಬಸ್ಸನ್ನು ಕೊಂಡೊಯ್ಯುತ್ತಿದ್ದಾರೆ. ಅಧಿಕಾರಿಗಳ ಆದೇಶದಂತೆ ಸಿಬ್ಬಂದಿ ಮಿತಿಮೀರಿದ ವೇಗದಲ್ಲಿ ಬಸ್ಸನ್ನು ಚಲಿಸಿದರೂ, ಬಸ್ಸುಗಳ ತಾಂತ್ರಿಕ ವ್ಯವಸ್ಥೆಯ ಗೋಜಿಗೆ ಹೋಗುತ್ತಿಲ್ಲ. ಇದರಿಂದ ಅಮಾಯಕ ಸಿಬ್ಬಂದಿ ಹಾಗೂ ಪ್ರಯಾಣಿಕರು ಜೀವ ತೆತ್ತುವ ಪರಿಸ್ಥಿತಿ ಬಂದೊದಗಿದೆ ಅನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.