ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸುರತ್ಕಲ್ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸುರತ್ಕಲ್ ಶಾಖೆಯಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಸತೀಶ್ಚಂದ್ರ, ಜಗದೀಶ ಕೋಟ್ಯಾನ್ , ಶ್ರೀ ಮಾಧವ ಎಮ್ ಅಂಚನ್,ಲಕ್ಷ÷್ಮಣ್ ಸಾಲ್ಯಾನ್, ಚಂದ್ರಶೇಖರ್ ನಲಿಲು ರೈ , ಸೀತಾಲಕ್ಷಿ÷್ಮ ಕುಳಾಯಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಸಂಘದ ಸದಸ್ಯರಾದ ಮಾಧವ ಎಮ್ ಅಂಚನ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ನೇತ್ರತ್ವದಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಿದ್ದು, ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಸಂಘವು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.
ಸದಸ್ಯರಾದ ಚಂದ್ರಶೇಖರ್ ನಲಿಲು ರೈ ರವರು ಮಾತನಾಡಿ “ಸುರತ್ಕಲ್ ಶಾಖೆಯು ಇತ್ತೀಚಿಗೆ ನವೀಕೃತ ಹಾಗೂ ಸುಸಜ್ಜಿತ ಹವಾನಿಯಂತ್ರಣ ಕೊಠಡಿಗೆ ಸ್ಥಳಾಂತರ ಗೊಂಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯಲಿ” ಎಂದರು.
ಸದಸ್ಯರಾದ ಲಕ್ಷ÷್ಮಣ್ ಸಾಲ್ಯಾನ್ ರವರು ಮಾತನಾಡಿ “ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ತಮ್ಮ ಸಾಮಾಜಿಕ ಹಾಗೂ ಸಹಕಾರ ಕ್ಷೇತ್ರದಲ್ಲಿನ ಸಾಧನೆಗಳಿಗಾಗಿ ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಪಡೆದ್ದಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಹಾಗೂ ಸಂಘಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಬಿಸಲಿ ಎಂದರು. ಸಂಘದ ಸಿಬ್ಬಂದಿಗಳ ನಗುಮುಖದ ಸೇವೆಯ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.
ಸದಸ್ಯರಾದ ಶ್ರೀ ಸೀತಾರಾಮ ಸಾಲೆತ್ತೂರ್ ರವರು ಮಾತನಾಡಿ “ಶಾಖೆಯ ಸಿಬ್ಬಂದಿಗಳು ಗ್ರಾಹಕರನ್ನು ಉಪಚರಿಸುವ ರೀತಿಯ ಬಗ್ಗೆ ಹಾಗೂ ಗ್ರಾಹಕರಿಗೆ ನೀಡುವ ಗೌರವದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊAಡರು.
ಸAಘದ ಸದಸ್ಯರುಗಳಾದ ಐ ಜಯ ಅಮೀನ್ ,ಜಯರಾಮ ಉಪಧ್ಯಾಯ, ನರೇಂದ್ರ ಐ , ಲಕ್ಷ÷್ಮಣ್ ಟಿ ಪೂಜಾರಿ, ನ್ಯಾಯವಾದಿ ಪ್ರೇಮ ಅಮೀನ್, ಪ್ರಕಾಶ್ ಕೆ. ಎನ್ , ಪ್ರಶಾಂತ್ ಹೆಗ್ಡೆ, ಮತ್ತಿತ್ತರರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಸುರತ್ಕಲ್ ಶಾಖೆಯು 13ನೇ ವರ್ಷದ ಸಂಭ್ರಮದೊAದಿಗೆ ಮುನ್ನಡೆಯುತ್ತಿದೆ. ಈ ಪ್ರಯುಕ್ತ ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ. ಹಾಗೂ ಸಂಘದ ಎಲ್ಲಾ ಶಾಖೆಯಲ್ಲಿ ಇ-ಸ್ಟಾ÷್ಯಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಚಿನ್ನಾಭರಣ ಸಾಲ ಎಲ್ಲರಿಗೂ ಅಗತ್ಯ ಇರುವಂತಹದು ಅದರ ಸೌಲಭ್ಯವನ್ನು ಕೂಡ ನಾವು ಜನರಿಗೆ ಅನುಕೂಲವಾಗುವಂತಹ ನಿಟ್ಟಿನಲ್ಲಿ 0% ಸೇವಾ ಶುಲ್ಕದಲ್ಲಿ ನೀಡುತ್ತಿದ್ದೇವೆ. ಸಂಸ್ಥೆಯು ಕೇವಲ ಬ್ಯಾಂಕಿoಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಸತತವಾಗಿ ಆರೋಗ್ಯ ಶಿಬಿರವನ್ನು ಸಹ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಾ ಬರುತ್ತಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ, ರಮಾನಾಥ್ ಸನಿಲ್, ಗೋಪಾಲ್ ಎಂ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ಮೇಘಶ್ರೀ ಯವರು ಸ್ವಾಗತಿಸಿ, ಅಶ್ವಿನಿ ಯವರು ವಂದಿಸಿದರು. ಶಾಖಾಧಿಕಾರಿ ಸುಮನ ಯವರು ಕಾರ್ಯಕ್ರಮ ನಿರೂಪಿಸಿದರು.

