Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ಆದೇಶ; ಹಿಂಪಡೆಯುವ0ತೆ ದ.ಕ.ಜಿಲ್ಲಾ ಪ್ರಾಂಶುಪಾಲರ, ಉಪನ್ಯಾಸಕರ ಸಂಘದಿ0ದ ಮನವಿ

UllalaVaniBy UllalaVaniNovember 7, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ನ.7; ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜುಗಳಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿರುವ ಮತ್ತು ಹೊರಡಿಸುತ್ತಿರುವ ಆದೇಶಗಳನ್ನು ಹಿಂಪಡೆಯುವAತೆ ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಇಲಾಖೆಗೆ ದ.ಕ.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘ ಮನವಿ ಮಾಡಿಕೊಂಡಿದೆ.

ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಮತ್ತು ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಉಪನ್ಯಾಸಕರ ಸಂಘ ಮನವಿ ಮಾಡಿರುವ ಪತ್ರದಲ್ಲಿ ಕೆಲ ವಿಚಾರಗಳನ್ನು ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾಲೇಜುಗಳಿಗೆ ಪೂರಕವಲ್ಲದ ಆದೇಶಗಳು ಬರುತ್ತಿರುವುದು ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರುಗಳು ಆತ್ಮಸ್ಥೆöÊರ್ಯವನ್ನು ಕುಗ್ಗಿಸುತ್ತಿದೆ. ಇದರ ಪರಿಣಾಮವಾಗಿ ಪದವಿ ಪೂರ್ವ ಕಾಲೇಜುಗಳ ಭವಿಷ್ಯ ಡೋಲಾಯನ ಸ್ಥಿತಿಗೆ ತಲುಪುತ್ತಿದೆ. ಪರೀಕ್ಷಾ ಮಂಡಳಿಯನ್ನು ಪದವಿಪೂರ್ವ ಇಲಾಖೆಯಿಂದ ಪ್ರತ್ಯೇಕಿಸಿದ ನಂತರ ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿಪೂರ್ವ ಶಿಕ್ಷಣಕ್ಕೆ ಸಂಬAಧವೇ ಇಲ್ಲದ ಡಿಐಇಟಿ ನ ಪ್ರಶಿಕ್ಷಣಾರ್ಥಿಗಳನ್ನು ಪದವಿ ಪೂರ್ವ ಕಾಲೇಜುಗಳ ಸ್ಥಿತಿಗತಿಗಳ ದತ್ತಾಂಶ ಕ್ರೊಢೀಕರಿಸುವ ನೆಪದಲ್ಲಿ ಕಾಲೇಜಗಳನ್ನು ಪರಿಶೀಲನೆಗೊಳಪಡಿಸಲು ಹೊರಟಿರುವುದು ಪದವಿಪೂರ್ವ ಶಿಕ್ಷಣದ ದುರಂತವೇ ಸರಿ ಎಂದಿದ್ದಾರೆ.

ದ.ಕ.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘಗಳು ತಾವು ಜಿಲ್ಲಾಧಿಕಾರಿಗೆ ನೀಡಿರುವ ಪತ್ರದಲ್ಲಿ ತಮ್ಮ ಬೇಡಿಕೆಗಳನ್ನು ಉಲ್ಲೇಖಿಸಿದ್ದಾರ

1)ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಹಾಗೂ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಡಿಎಸ್‌ಇಆರ್‌ಟಿ ದಿನಾಂಕ; 18-10-2025 ಮತ್ತು 31-10-2025ರ ಜಂಟಿ ಸುತ್ತೋಲೆಯನ್ನು ಹಿಂಪಡೆಯಬೇಕು.

    2)ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಸ್ತುತ ವೃಂಧ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಇಪಿ55 ಎಸ್‌ಹೆಚ್‌ಹೆಚ್ ಭಾಗ-1 ಮತ್ತು ಭಾಗ-2ರಲ್ಲಿ 9&10 ನೇ ತರಗತಿ ಮತ್ತು 11&12 ನೇ ತರಗತಿಗಳಿಗೆ ಬೋಧನೆ ಮಾಡುವ ಸಂಬAಧ ಕಡತವನ್ನು ಮಾನ್ಯ ಶಿಕ್ಷಣ ಸಚಿವರ ಅನುಮೋದನೆಗಾಗಿ ಸಲ್ಲಿಸಿದ್ದು, ಈ ಕಡತವನ್ನು ಮಾನ್ಯ ಸಚಿವರು ಮಾನ್ಯ ಮಾಡದೆ (ಪರಿಗಣಿಸದೆ) ತಿರಸ್ಕರಿಬೇಕು.

    3).2024-25 ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಹಾಗೂ ಸಂಭಾವನೆ ಬಾಕಿ ಇರುವ ರೂ 13.5 ಕೋಟಿ ಹಣವನ್ನು ಕೂಟಲೇ ಬಿಡುಗಡೆ ಮಾಡಿ ವಿತರಿಸಬೇಕು.

    4)ಸರ್ಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳು ಮತ್ತು ಪ್ರಾಂಶುಪಾಲರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು.

    S)ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕೇತರ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು.

    6)ಉಪನಿರ್ದೇಶಕರ ಕಚೇರಿಯನ್ನು ಬಲವರ್ಧನೆಗೊಳಿಸಲು ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ನಿಯೋಜಿಸಿ ಆ ಮುಖಾಂತರ ಇಲಾಖೆಯ ಪರೀಕ್ಷೆ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಬೇಕು.

    7)ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿರುವ ಪರೀಕ್ಷಾ ವಿಭಾಗವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಹಿಂದೆ ಇದ್ದಂತೆ ವರ್ಗಾಯಿಸಬೇಕು.

    ಕ)ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ತರಲು ಅಕಾಡೆಮಿಕ್ ಕೌನ್ಸಿಲ್ ಸಮಿತಿಯನ್ನು ಉನ್ನತ ಶಿಕ್ಷಣ ಇಲಾಖೆಯಲ್ಲಿರುವಂತೆ ರಚಿಸಬೇಕು.

    9)ಕೆಪಿಎಸ್ ಶಾಲೆಗಳ ಆಡಳಿತಾತ್ಮಕ ಮತ್ತು ಆರ್ಥಿಕ ಸಂಪೂರ್ಣ ಅಧಿಕಾರ ಜವಾಬ್ದಾರಿಯನ್ನು ಆ ಕಾಲೇಜಿನ ಪ್ರಾಂಶುಪಾಲರಿಗೆ ಆಆಔ ನೀಡಿ ನೀಡಬೇಕು.

    10)ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಇರುವ ವಿದ್ಯಾರ್ಥಿ ಮತ್ತು ಉಪನ್ಯಾಸಕರ ಅನುಪಾತ 3201 (ಪ್ರತಿ ತರಗತಿಗೆ (80x 4:1) ಇರುವುದನ್ನು 180:1 (ಪ್ರತಿ ತರಗತಿಗೆ ಕನಿಷ್ಠ 20 ಗರಿಷ್ಠ (45×4 1) ಅನುಪಾತಕ್ಕೆ ಮಾರ್ಪಡಿಸುವುದು,

    1)ಸರ್ಕಾರಿ ನೌಕರಿಗೆ ನೀಡುತ್ತಿರುವ ನಗದುರಹಿತ ಚಿಕಿತ್ಸೆಯನ್ನು ಅನುದಾನಿತ ಕಾಲೇಜಿನ ಉಪನ್ಯಾಸಕರಿಗೆ ಮತ್ತು ಬೋಧಕೇತರ ಕುಟುಂಬ ವರ್ಗಕ್ಕೆ ಅನ್ವಯವಾಗುವಂತೆ ವಿಸ್ತರಿಸುವುದು.

    12)ದಿನಾಂಕ: 01/04/2006 ರ ನಂತರ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.

    ಸುಮಾರು 12 ಬೇಡಿಕೆಗಳನ್ನು ಶಿಕ್ಷಣ ಇಲಾಖೆಯ ಮುಂದಿಟ್ಟಿದ್ದು, ಇದಕ್ಕೆ ಶಿಕ್ಷಣ ಇಲಾಖೆ ಯಾವ ರೀತಿಯಾಗಿ ಸ್ಪಂದಿಸುತ್ತದೆ ಎಂಬುವುದನ್ನು ಕಾತುನೋಡಬೇಕಿದೆ.

    Share this:

    • Click to share on Facebook (Opens in new window) Facebook
    • Click to share on X (Opens in new window) X

    Like this:

    Like Loading...
    Share. Facebook Twitter Pinterest LinkedIn Tumblr Email WhatsApp
    UllalaVani

    Kannada News From Coastal Karnataka

    Related Posts

    19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

    February 5, 2026

    ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

    February 4, 2026

    ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

    February 4, 2026

    Comments are closed.

    Advertise
    ಸಂಪರ್ಕಿಸಿ

    ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

    December 15, 2025

    ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

    December 6, 2025

    ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

    November 12, 2025

    ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

    November 11, 2025
    suddi

    19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

    By UllalaVaniFebruary 5, 20260

    ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

    Share this:

    • Click to share on Facebook (Opens in new window) Facebook
    • Click to share on X (Opens in new window) X

    Like this:

    Like Loading...

    ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

    February 4, 2026

    ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

    February 4, 2026

    ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

    February 4, 2026
    1 2 3 … 1,793 Next
    Automatic YouTube Gallery

    || UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ

    ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

    ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
    #ullalavani #news #ullala #kalparasa #udupinatural
    || UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
    Now Playing
    || UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
    ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ...
    ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

    ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
    #ullalavani #news #ullala #kalparasa #udupinatural
    ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
    Now Playing
    ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
    ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
    ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

    ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
    Follow us on Facebook
    Recent Editions
    JAN 19-FEB 6

    JAN 19-FEB 6

    Mangalore

    Jan 20, 2026

    JAN 1-15

    JAN 1-15

    Mangalore

    Jan 8, 2026

    Latest E-Papers
    Loading editions...
    Office Address:

    ಉಳ್ಳಾಲವಾಣಿ
    ಕನ್ನಡ ವಾರಪತ್ರಿಕೆ
    RNI No. KARKAN28322
    ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
    ಸೋಮೇಶ್ವರ ಗ್ರಾಮ,
    ಉಳ್ಳಾಲ ತಾಲೂಕು ದ.ಕ- 575017

    Ullalavani 
    Kannada Weekly
    RNI No. KARKAN28322
    Appachi Complex, Kuttaru
    munnuuru, Someshwara Village,
    Ullala Tq., D.K. – 575017
    +91 98454 78858
    +91 99725 28110

     

    ಸಂಪರ್ಕಿಸಿ
    Facebook X (Twitter) Instagram Pinterest
    © 2026 ullalavani.com. Designed by wpwebsmartz.com.

    Type above and press Enter to search. Press Esc to cancel.

    Go to mobile version
    %d